Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತೆಲುಗಿನ ಖ್ಯಾತ ನಟ `ಫಿಶ್ ವೆಂಕಟ್’ ಇನ್ನಿಲ್ಲ | Fish Venkat is no more

19/07/2025 7:59 AM

BREAKING: ಭಾರತೀಯ ವಿಮಾನಗಳ ಮೇಲಿನ ವಾಯುಪ್ರದೇಶ ನಿಷೇಧವನ್ನು ಆ. 24 ರವರೆಗೆ ವಿಸ್ತರಿಸಿದ ಪಾಕಿಸ್ತಾನ

19/07/2025 7:54 AM

BREAKING : ಚಿಕ್ಕಮಗಳೂರಿನಲ್ಲಿ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಪಲ್ಟಿ : 25 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ.!

19/07/2025 7:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ ದೇಹದ ಕೊನೆಯ ರಕ್ತದಹನಿ ಇರುವರೆಗೂ ಹೋರಾಡುತ್ತೇನೆ : ಕರವೇ ಅಧ್ಯಕ್ಷ ನಾರಾಯಗೌಡ ಹೇಳಿಕೆ
KARNATAKA

ನನ್ನ ದೇಹದ ಕೊನೆಯ ರಕ್ತದಹನಿ ಇರುವರೆಗೂ ಹೋರಾಡುತ್ತೇನೆ : ಕರವೇ ಅಧ್ಯಕ್ಷ ನಾರಾಯಗೌಡ ಹೇಳಿಕೆ

By kannadanewsnow0511/01/2024 6:18 AM

ಬೆಂಗಳೂರು : ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಬಳಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವುದು ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಡಿ.28ರಿಂದ ಬಂಧನಕ್ಕೆ ಒಳಗಾಗಿ ಜೈಲಿನಲ್ಲಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎನ್. ನಾರಾಯಣ ಗೌಡ ಅವರು ಕೊನೆಗೂ ಬಂಧಮುಕ್ತರಾಗಿದ್ದಾರೆ.

ಈ ನಡುವೆ ಜೈಲಿನಿಂದ ಬಿಡುಗಡೆಯಾದ ನಂತರ ಗೌಡರು ಕಾಲು ನೋವಿನಿಂದ ಬಳಲುತ್ತಿದ್ದ ಕಾರಣ ಚಿಕಿತ್ಸೆ ಪಡೆಯಲು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ತಮ್ಮ ನಾಯಕ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಕರವೇ ಕಾರ್ಯಕರ್ತರು ಸಂಭ್ರಮಿಸಿ ಸಿಹಿ ವಿತರಿಸಿದರು.

ಇದೆ ವೇಳೆ ನಾರಾಯಣಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಹೋರಾಟಕ್ಕೆ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದು, ಕನ್ನಡ ನಾಮಫಲಕ ಆಂದೋಲನ ಯಶಸ್ವಿಯಾಗಿದೆ. ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಇದು ಕನ್ನಡಿಗರ ಜಯ, ಕರ್ನಾಟಕ ರಕ್ಷಣಾ ವೇದಿಕೆಯ ಜಯ.

ಈ ಹೋರಾಟವನ್ನು ಬೆಂಬಲಿಸಿದ ಎಲ್ಲ ಕನ್ನಡಪರ ಚಳವಳಿಗಾರರಿಗೆ, ಮಾಧ್ಯಮಮಿತ್ರರಿಗೆ, ಕರವೇ ಮುಖಂಡರು, ಕಾರ್ಯಕರ್ತರಿಗೆ, ಜನಸಾಮಾನ್ಯರಿಗೆ ಕೃತಜ್ಞತೆಗಳು ಎಂದು ಫೇಸ್ಬುಕ್ ಮೂಲಕ ಧನ್ಯವಾದ ತಿಳಿಸಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ಮಾಡುವುದು ನಮ್ಮ ಉದ್ದೇಶವಾಗಿತ್ತು.

ಕೆಲವೊಮ್ಮೆ ಹೋರಾಟದಲ್ಲಿ ತೊಡಕಾಗುವುದು ಸಹಜ 15 ದಿನ ನಾನು ಮತ್ತು ಕಾರ್ಯಕರ್ತರು ಜೈಲಿನಲ್ಲಿದ್ದೆವು ಇನ್ನು ಅನೇಕ ಕೆಲಸಗಳಿವೆ ಕಾನೂನು ಹೋರಾಟ ಮಾಡುತ್ತೇವೆ ಆರೋಗ್ಯದ ಸಮಸ್ಯೆಯಿಂದ ಯಾರ ಜೊತೆಯೂ ಮಾತನಾಡಲು ಆಗಿಲ್ಲ ಅದಕ್ಕಾಗಿ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ?

ನಾಮಫಲಕ ಅಳವಡಿಕೆ ವಿಚಾರದಲ್ಲಿ ಪ್ರತಿಭಟನೆ ನಡೆಸಿ ಚಿಕ್ಕಜಾಲ ಠಾಣಾ ಪೊಲೀಸರಿಂದ ಡಿ.28ಕ್ಕೆ ನಾರಾಯಣಗೌಡ ಮೊದಲು ಬಂಧನಕ್ಕೆ ಒಳಗಾಗಿದ್ದರು. ನಂತರ ಜಾಮೀನು ಸಿಕ್ಕರೂ ವಿವಿಧ ಕೇಸಿನಲ್ಲಿ ಬಂಧಿಸಿ ಅವರನ್ನು ಜೈಲಲ್ಲೇ ಇಡಲಾಗಿತ್ತು.

ಈ ನಡುವೆ ವಿವಿಧ ಕೇಸಿನಲ್ಲಿ ಜಾಮೀನು ಲಭಿಸಿ, ಗೌಡ ಅವರು ಜಾಮೀನು ಮೇಲೆ ಮಂಗಳವಾರ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ 2017ರಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದದ್ದರು. ಹೀಗಾಗಿ ಅವರು ಮತ್ತೆ ಜೈಲು ಪಾಲಾಗಿದ್ದರು.

ಇದರಿಂದ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅದನ್ನು ಬುಧವಾರ ಬೆಳಗ್ಗೆ ಪುರಸ್ಕರಿಸಿದ ನಗರದ 30ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ಮಂಜೂರು

ಮಾಡಿತ್ತು. ಇದಾದ ಬೆನ್ನಲ್ಲೇ 2020ರಲ್ಲಿ ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದ ಪ್ರಕರಣ ಸಂಬಂಧ ಸಂಜೆ 4 ಗಂಟೆಗೆ ಹಲಸೂರು ಗೇಟ್ ಠಾಣಾ ಪೊಲೀಸರು ನಾರಾಯಣಗೌಡ ಅವರನ್ನು ಬಂಧಿಸಿದ್ದರು ಹಾಗೂ ವೈದ್ಯಕೀಯ ತಪಾಸಣೆ ನಡೆಸಿ 1ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

ಇದರಿಂದ ಜಾಮೀನು ಕೋರಿ ಅವರ ಪರ ವಕೀಲರು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ 1ನೇ ಎಸಿಎಂಎಂ ನ್ಯಾಯಾಲಯ, 50 ಸಾವಿರ ರು. ವೈಯಕ್ತಿಕ ಬಾಂಡ್ ಮತ್ತು 5 ಸಾವಿರ ರು. ನಗದಿನ ಭದ್ರತಾ ಖಾತರಿ ಪಡೆದು ಜಾಮೀನು ಮಂಜೂರು ಮಾಡಿತು. ಜೊತೆಗೆ, ಮುಂದಿನ ದಿನಗಳಲ್ಲಿ ನ್ಯಾಯಾಲಯದ ಎಲ್ಲಾ ವಿಚಾರಣೆಗಳಿಗೆ ಕಡ್ಡಾಯವಾಗಿ ಖುದ್ದು ಹಾಜರಾಬೇಕು ಎಂಬುದು ಸೇರಿದಂತೆ ಇನ್ನಿತರ ಕೆಲ ಷರತ್ತುಗಳನ್ನು ವಿಧಿಸಿತು. ಈ ಆದೇಶದ ಮೇರೆಗೆ ನಾರಾಯಣಗೌಡ ಅವರನ್ನು ಬುಧವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಚಿಕ್ಕಮಗಳೂರಿನಲ್ಲಿ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಪಲ್ಟಿ : 25 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ.!

19/07/2025 7:41 AM1 Min Read

ALERT : ನೀವು ಖರೀದಿಸುವ `ಔಷಧಿಗಳು’ ಅಸಲಿಯೋ, ನಕಲಿಯೋ? ಜಸ್ಟ್ ಈ ರೀತಿ ಚೆಕ್ ಮಾಡಿ

19/07/2025 7:34 AM1 Min Read

SHOCKING : ಆನ್ ಲೈನ್ ಬೆಟ್ಟಿಂಗ್ ಗೆ ಮತ್ತೊಂದು ಬಲಿ : ಬೆಂಗಳೂರಲ್ಲಿ ಸೆಲ್ಫಿ ವಿಡಿಯೋ ಮಾಡಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ.!

19/07/2025 7:21 AM1 Min Read
Recent News

BREAKING : ತೆಲುಗಿನ ಖ್ಯಾತ ನಟ `ಫಿಶ್ ವೆಂಕಟ್’ ಇನ್ನಿಲ್ಲ | Fish Venkat is no more

19/07/2025 7:59 AM

BREAKING: ಭಾರತೀಯ ವಿಮಾನಗಳ ಮೇಲಿನ ವಾಯುಪ್ರದೇಶ ನಿಷೇಧವನ್ನು ಆ. 24 ರವರೆಗೆ ವಿಸ್ತರಿಸಿದ ಪಾಕಿಸ್ತಾನ

19/07/2025 7:54 AM

BREAKING : ಚಿಕ್ಕಮಗಳೂರಿನಲ್ಲಿ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಪಲ್ಟಿ : 25 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ.!

19/07/2025 7:41 AM

ರುಪರ್ಟ್ ಮುರ್ಡೋಕ್, ಡಬ್ಲ್ಯುಎಸ್ಜೆ ವಿರುದ್ಧ 10 ಬಿಲಿಯನ್ ಡಾಲರ್ ಮೊಕದ್ದಮೆ ಹೂಡಿದ ಟ್ರಂಪ್

19/07/2025 7:40 AM
State News
KARNATAKA

BREAKING : ಚಿಕ್ಕಮಗಳೂರಿನಲ್ಲಿ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಪಲ್ಟಿ : 25 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ.!

By kannadanewsnow5719/07/2025 7:41 AM KARNATAKA 1 Min Read

ಚಿಕ್ಕಮಗಳೂರು : ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಪಲ್ಟಿಯಾಗಿ 25 ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ…

ALERT : ನೀವು ಖರೀದಿಸುವ `ಔಷಧಿಗಳು’ ಅಸಲಿಯೋ, ನಕಲಿಯೋ? ಜಸ್ಟ್ ಈ ರೀತಿ ಚೆಕ್ ಮಾಡಿ

19/07/2025 7:34 AM

SHOCKING : ಆನ್ ಲೈನ್ ಬೆಟ್ಟಿಂಗ್ ಗೆ ಮತ್ತೊಂದು ಬಲಿ : ಬೆಂಗಳೂರಲ್ಲಿ ಸೆಲ್ಫಿ ವಿಡಿಯೋ ಮಾಡಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ.!

19/07/2025 7:21 AM

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ಗಂಟೆಯಿಂದ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

19/07/2025 7:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.