ಚಿಕ್ಕಬಳ್ಳಾಪುರ : ನಾನು ಕೊಟ್ಟಿರುವ ನಿವೇಶನಗಳಿಗೆ ನಿಮ್ಮ ಫೋಟೋ ಹಾಕಿಕೊಂಡಿದ್ದೀರಿ. ಗಂಡಸರಾಗಿದ್ದರೆ ಜಿಲ್ಲೆಯ ಪ್ರತಿಕ್ಷೇತ್ರದಲ್ಲಿ 25,000 ಸೈಟ್ ಕೊಡಿ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಸಿ ಸುಧಾಕರಗೆ ಸಂಸದ ಡಾ.ಕೆ ಸುಧಾಕರ್ ಸವಾಲು ಹಾಕಿದರು.

ಚಿಕ್ಕಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಎಂಸಿ ಸುಧಾಕರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಚಿಮುಲ್ ರದ್ದು ಮಾಡಿ ಮತ್ತೆ ಕೋಚಿಮುಲ್ಗೆ ಸೇರಿಸಿದ್ದೀರಿ. ಬಜೆಟ್ ಮೀಟಿಂಗ್ ನಲ್ಲಿ ಸಚಿವ ಡಾ. ಎಂ ಸಿ ಸುಧಾಕರ್ ಇದ್ದರು. ಚಿಕ್ಕಬಳ್ಳಾಪುರ ಜಿಲ್ಲೆಗೆ ಅನ್ಯಾಯವಾಗುತ್ತಿದ್ದರು ಕೂಡ ಯಾಕೆ ಸಭೆಯಲ್ಲಿ ಮಾತನಾಡಲಿಲ್ಲ ಎಂದರು.

ನಿಮಗೆ ಯಾಕೆ ಚಿಕ್ಕಬಳ್ಳಾಪುರ ಜಿಲ್ಲೆ ಬೇಕು ಹೇಳಿ? ನಾನೇನಾದರೂ ನಿಮ್ಮ ಸ್ಥಾನದಲ್ಲಿದ್ದರೆ ರಾಜೀನಾಮೆ ಬಿಸಾಕಿ ಬರುತ್ತಿದ್ದೆ. ಒಂದು ದಿನ ಬದುಕಿದ್ದರೂ ಸಿಂಹದಂತೆ ಬದುಕಬೇಕು.ಅಧಿಕಾರಕ್ಕೆ ಅಂಟಿಕೊಂಡು ಇದೀರಲ್ಲ ನಿಮಗೆ ನಾಚಿಕೆ ಆಗಲ್ವಾ? ಎಂದು ಸಚಿವ ಡಾ. ಎಮ್ ಸಿ ಸುಧಾಕರ್ ವಿರುದ್ಧ ಸಂಸದ ಡಾ. ಕೆ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.

Share.
Exit mobile version