ಮಂಗಳೂರು: ಬಂಟ್ವಾಳದಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ತಲ್ವಾರ್ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಕೊಳತ್ತಮಜಲು ನಿವಾಸಿ ಪಿಕಪ್ ಮಾಲೀಕ ರಹೀಂ ಮತ್ತು ಸಹಾಯಕ ಶಾಫಿ ಮೇಲೆ ದಾಳಿ ನಡೆಸಿದ್ದು, ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಘಟನೆ ನಡೆದಿದೆ.
ಬೈಕ್ನಲ್ಲಿ ಬಂದ ದುಷ್ಕರ್ಮಿಗಳಿಂದ ಪಿಕಪ್ ಚಾಲಕ ರಹೀಂ ರಹೀಮ್ ಜೊತೆ ಇನ್ನೊಬ್ಬ ಕೂಡ ಇದ್ದು ಆತನಿಗೂ ಕೈಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಅಂತ ತಿಳಿದು ಬಂದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.