ಕಲಬುರಗಿ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಲುಕ್ ಔಟ್ ನೋಟಿಸ್ ನೀಡಲಾಗಿದೆ.ಹಾಗಾಗಿ ವಿದೇಶದಲ್ಲಿರುವ ಅವರನ್ನು ಶೀಘ್ರದಲ್ಲಿ ವಾಪಸ್ ಕರೆಸಲಾಗುತ್ತದೆ ಎಂದು ಕಲಬುರ್ಗಿಯಲ್ಲಿ ಗೃಹ ಇಲಾಖೆಯ ಸಚಿವ ಪರಮೇಶ್ವರ ತಿಳಿಸಿದರು.

ಕಲ್ಬುರ್ಗಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣ ಸಬಂದ ಎಲ್ಲಾ ಕಡೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದೇವೆ. ವಿಮಾನ ನಿಲ್ದಾಣ, ಬಂದರು ಸೇರಿ ಎಲ್ಲೆಡೆ ಲುಕ್ ಔಟ್ ನೋಟಿಸ್ ನೀಡಿದ್ದೇವೆ.ಕೇಂದ್ರ ಸರ್ಕಾರ ರಾಜ ತಾಂತ್ರಿಕ ಪಾಸ್ಪೋರ್ಟ್ ನೀಡಿದೆ. ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಪತ್ರ ಬರೆದಿದ್ದೇವೆ ಪ್ರಜ್ವಲ್ ರೇನು ಶೀಘ್ರದಲ್ಲೇ ವಾಪಸ್ ಕಳಿಸುತ್ತೇವೆ ಎಂದರು.

ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಸಿಎಂ ಸಿದ್ದರಾಮಯ್ಯ ಯಾಕೆ ಅವರನ್ನು ಕಳುಹಿಸುತ್ತಾರೆ? ಪ್ರಧಾನಿ ರಾಜ್ಯದ ಕಾನೂನು ಸುವ್ಯವಸ್ಥೆ ಕೆಟ್ಟಿದೆ ಅಂತಾರೆ ಅವರಿಗೆ ತಪ್ಪು ಮಾಹಿತಿ ಇರಬಹುದು ಕರ್ನಾಟಕದಲ್ಲಿ ಕಾನೂನು ವ್ಯವಸ್ಥೆ ಚೆನ್ನಾಗಿದೆ. ನೇಹಾ ಅತ್ತೆ ಆರೋಪಿಯನ್ನು ಒಂದು ಗಂಟೆಯಲ್ಲಿ ಹಿಡಿದರು ರಾಮೇಶ್ವರಂ ಕೆಎಸ್ ನಾನೇ ಮೋಾನಿಟರ್ ಮಾಡಿದ್ದೇನೆ ಎಂದು ತಿಳಿಸಿದರು.

Share.
Exit mobile version