Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಂಗ್ಲಾದೇಶದಲ್ಲಿ ಉಲ್ಬಣಗೊಂಡ ಹಿಂಸಾಚಾರ : ಕೋಲ್ಕತ್ತಾದಲ್ಲಿ ಭದ್ರತೆ ಹೆಚ್ಚಳ

21/12/2025 12:36 PM

Shocking: ತಂಗಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲು ಸ್ನೇಹಿತನನ್ನು ನೇಮಿಸಿಕೊಂಡ ಅಣ್ಣ

21/12/2025 12:11 PM

ಕರ್ನಾಟದಲ್ಲಿ ಚಳಿಯೋ ಚಳಿ ; ರಾಜ್ಯದ ಈ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

21/12/2025 12:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ `ಶಕ್ತಿ ಯೋಜನೆ’ ಜಾರಿಯಾದ ಬಳಿಕ ಬಸ್ ಗಳಲ್ಲಿ ಪ್ರತಿನಿತ್ಯ 1.16 ಕೋಟಿ ಜನರು ಪ್ರಯಾಣ : ಸಚಿವ ಸಂತೋಷ್ ಲಾಡ್ ಮಾಹಿತಿ
KARNATAKA

ರಾಜ್ಯದಲ್ಲಿ `ಶಕ್ತಿ ಯೋಜನೆ’ ಜಾರಿಯಾದ ಬಳಿಕ ಬಸ್ ಗಳಲ್ಲಿ ಪ್ರತಿನಿತ್ಯ 1.16 ಕೋಟಿ ಜನರು ಪ್ರಯಾಣ : ಸಚಿವ ಸಂತೋಷ್ ಲಾಡ್ ಮಾಹಿತಿ

By kannadanewsnow5717/12/2024 8:10 AM

ಬೆಳಗಾವಿ : 11 ಜೂನ್ 2023 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಗೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ದೊರೆತಿದೆ. ರಾಜ್ಯ ಸರ್ಕಾರದಿಂದ ನವೆಂಬರ್ 2024ರ ವರೆಗೆ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆಯಡಿ ರೂ.6543 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಧಾನ ಸಭೆಯಲ್ಲಿ ಮಾಹಿತಿ ನೀಡಿದರು. 

ಬೆಳಗಾವಿ ಸುವರ್ಣ ಸೌಧದಲ್ಲಿ ಜರುಗುತ್ತಿರುವ ಚಳಿಗಾಲ ಅಧಿವೇಶÀನದಲ್ಲಿ, ಸೋಮವಾರ ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದ ವೇಳೆ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಪರವಾಗಿ ಸಚಿವ ಸಂತೋಷ್ ಲಾಡ್ ಉತ್ತರಿಸಿದರು.  ಶಕ್ತಿ ಯೋಜನೆ ಜಾರಿಯಾದಾಗಿನಿಂದ ನಾಲ್ಕು ನಿಗಮದ ಬಸ್‌ಗಳಲ್ಲಿ ಪ್ರತಿನಿತ್ಯ 1.16 ಕೋಟಿ ಜನರು ಪ್ರಯಾಣ ಮಾಡುತ್ತಿದ್ದಾರೆ. ಸರ್ಕಾರ ಶಕ್ತಿಯೋಜನೆಯಡಿ ರೂ.8237 ಕೋಟಿ ಅನುದಾನವನ್ನು ಮಂಜೂರು ಮಾಡಿದೆ. ಇದರಲ್ಲಿ ರೂ.6543 ಕೋಟಿ ಈಗಾಗಲೇ ನಿಗಮಗಳಿಗೆ ಪಾವತಿ ಮಾಡಿದ್ದು, ಉಳಿದ 1694 ಕೋಟಿ ಹಣವನ್ನು ಹಂತ ಹಂತವಾಗಿ ನಿಗಮಗಳಿಗೆ ನೀಡಲಾಗುವುದು ಎಂದರು.

ಸಾರಿಗೆ ನಿಗಮದ ನೌಕರರೊಂದಿಗೆ ಸಂಧಾನ: ಸಾರಿಗೆ ನಿಗಮಗಳ ನೌಕರರ ವೇತನವನ್ನು ಕೈಗಾರಿಕಾ ಒಪ್ಪಂದಗಳ ಅನ್ವಯ, ಪ್ರತಿ 4 ವರ್ಷಗಳಿಗೊಮ್ಮೆ ಪರಿಷ್ಕರಿಸಬೇಕು. ಕೋವಿಡ್ ಕಾರಣದಿಂದ ಕಳೆದ ಬಾರಿ 2020ಕ್ಕೆ ಪರಿಷ್ಕರಿಸಬೇಕಾದ ವೇತನವನ್ನು 2023ರಲ್ಲಿ ಪರಿಷ್ಕರಿಸಲಾಯಿತು. ಡಿ.31ರ ಒಳಗಾಗಿ ಖುದ್ದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ನಿಗಮದ ನೌಕರರೊಂದಿಗೆ ಸಂಧಾನ ಒಪ್ಪಂದ ಮಾಡಿಕೊಳ್ಳಿದ್ದಾರೆ. ಯಾವುದೇ ಕಾರಣಕ್ಕೂ ನೌಕರರು ಮುಷ್ಕರ ಹೂಡದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

4304 ಬಸ್ ಖರೀದಿ: 5000 ಬಸ್ ಖರೀದಿಸುವುದಾಗಿ ಸರ್ಕಾರ ಹೇಳಿತ್ತು. ಇದರಂತೆ ಇದುವರೆಗೂ 4304 ಬಸ್‌ಗಳನ್ನು ಖರೀದಿಸಲಾಗಿದೆ. ಉಳಿದ ಬಸ್‌ಗಳನ್ನು ಸಹ ಶೀಘ್ರ ಖರೀದಿಸಿ ಅಗತ್ಯ ಇರುವ ಕಡೆ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಸರ್ಕಾರ ಕೂಡಲೇ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಬೇಕು. ನೌಕರರ ಜನವರಿಯಿಂದ ಮುಷ್ಕರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಕುರಿತು ಮನೆಗೆ ಬಂದು ಮನವಿಯನ್ನು ಸಹ ನೀಡಿದ್ದಾರೆ ಎಂದರು.

ಶಾಸಕ ಡಾ.ಅಶ್ವಥ್ ನಾರಾಯಣ ಸಿ.ಎನ್. ಮಾತನಾಡಿ, ಸರ್ಕಾರ ಸಾರಿಗೆ ನಿಗಮಗಳಿಗೆ ನೀಡಬೇಕಾದ ಬಾಕಿ ಹಣ ನೀಡಿ ವೇತನ ಪರಿಷ್ಕರಣೆಗೆ ಅನುವು ಮಾಡಿಕೊಡಬೇಕು ಎಂದು ಕೋರಿದರು. ಈ ಮನವಿಗೆ ಹಲವು ಶಾಸಕರು ಧ್ವನಿಗೂಡಿಸಿದರು.

1.16 crore people travel in buses every day after implementation of 'Shakti Yojana' in the state: Santosh Lad ರಾಜ್ಯದಲ್ಲಿ `ಶಕ್ತಿ ಯೋಜನೆ' ಜಾರಿಯಾದ ಬಳಿಕ ಬಸ್ ಗಳಲ್ಲಿ ಪ್ರತಿನಿತ್ಯ 1.16 ಕೋಟಿ ಜನರು ಪ್ರಯಾಣ : ಸಚಿವ ಸಂತೋಷ್ ಲಾಡ್ ಮಾಹಿತಿ
Share. Facebook Twitter LinkedIn WhatsApp Email

Related Posts

ಕರ್ನಾಟದಲ್ಲಿ ಚಳಿಯೋ ಚಳಿ ; ರಾಜ್ಯದ ಈ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

21/12/2025 12:05 PM1 Min Read

ಕಾಶಿಗೆ ಹೋದರೇ ಈ ವಸ್ತುಗಳನ್ನು ದಾನ ಮಾಡಬೇಕಂತೆ: ಅದೇಕೆ ಗೊತ್ತಾ.? ಇಲ್ಲಿದೆ ಮಾಹಿತಿ

21/12/2025 10:21 AM2 Mins Read

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

21/12/2025 9:58 AM1 Min Read
Recent News

ಬಾಂಗ್ಲಾದೇಶದಲ್ಲಿ ಉಲ್ಬಣಗೊಂಡ ಹಿಂಸಾಚಾರ : ಕೋಲ್ಕತ್ತಾದಲ್ಲಿ ಭದ್ರತೆ ಹೆಚ್ಚಳ

21/12/2025 12:36 PM

Shocking: ತಂಗಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲು ಸ್ನೇಹಿತನನ್ನು ನೇಮಿಸಿಕೊಂಡ ಅಣ್ಣ

21/12/2025 12:11 PM

ಕರ್ನಾಟದಲ್ಲಿ ಚಳಿಯೋ ಚಳಿ ; ರಾಜ್ಯದ ಈ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

21/12/2025 12:05 PM

BREAKING: ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ಗುಂಡಿನ ದಾಳಿ: ಮೂವರು ಮಕ್ಕಳು ಸೇರಿದಂತೆ 11 ಮಂದಿ ಸಾವು

21/12/2025 11:17 AM
State News
KARNATAKA

ಕರ್ನಾಟದಲ್ಲಿ ಚಳಿಯೋ ಚಳಿ ; ರಾಜ್ಯದ ಈ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

By kannadanewsnow0721/12/2025 12:05 PM KARNATAKA 1 Min Read

ಬೆಂಗಳೂರು: IMD ಮುಂದಿನ 48 ಗಂಟೆಗಳ ಕಾಲ ಉತ್ತರ ಕರ್ನಾಟಕದ 7 ಜಿಲ್ಲೆಗಳಿಗೆ ಆರೆಂಜ್ ಎಚ್ಚರಿಕೆಯನ್ನು ನೀಡಿದೆ, ತಾಪಮಾನವು ಸಾಮಾನ್ಯಕ್ಕಿಂತ…

ಕಾಶಿಗೆ ಹೋದರೇ ಈ ವಸ್ತುಗಳನ್ನು ದಾನ ಮಾಡಬೇಕಂತೆ: ಅದೇಕೆ ಗೊತ್ತಾ.? ಇಲ್ಲಿದೆ ಮಾಹಿತಿ

21/12/2025 10:21 AM

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

21/12/2025 9:58 AM
BJP issues lookout notice to Bairati Basavaraj, fearing arrest

ಬಂಧನದ ಭೀತಿಯಲ್ಲಿ ಬಿಜೆಪಿ ಬೈರತಿ ಬಸವರಾಜ್, ಲುಕ್‌ಔಟ್‌ ನೋಟಿಸ್‌ ಜಾರಿ

21/12/2025 9:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.