ಪಾಟ್ನಾ: ಬಿಹಾರದ ವಿವಿಧೆಡೆ ಸಿಡಿಲು, ಗುಡುಗು ಸಹಿತ ಮಳೆಗೆ 11 ಮಂದಿ ಬಲಿಯಾಗಿದ್ದಾರೆ. ಸಂತ್ರಸ್ತರ ಕುಟುಂಬಕ್ಕೆ ಸಿಎಂ ನಿತೀಶ್ ಕುಮಾರ್ ತಲಾ ₹ 4 ಲಕ್ಷ ಧನಸಹಾಯ ಘೋಷಿಸಿದ್ದಾರೆ.

ಸೋಮವಾರ ಹೊರಡಿಸಿದ ಹೇಳಿಕೆಯಲ್ಲಿ, ಗುಡುಗು ಮತ್ತು ಸಿಡಿಲುಗಳಿಂದಾಗಿ ಪುರ್ನಿಯಾ ಮತ್ತು ಅರಾರಿಯಾದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ತೀವ್ರ ಸಂತಾಪ. ಮೃತರ ಕುಟುಂಬಕ್ಕೆ ₹ 4 ಲಕ್ಷ ಪರಿಹಾರ ನೀಡಲಾಗುವುದು’ ಎಂದು ಸಿಎಂ ತಿಳಿಸಿದ್ದಾರೆ.

ಪ್ರತಿಕೂಲ ವಾತಾವರಣದಲ್ಲಿ ಜನರು ಜಾಗರೂಕರಾಗಿರಬೇಕು ಮತ್ತು ಅವಘಡಗಳನ್ನು ತಪ್ಪಿಸಲು ವಿಪತ್ತು ನಿರ್ವಹಣಾ ಇಲಾಖೆ ನೀಡಿರುವ ಸಲಹೆಗಳನ್ನು ಪಾಲಿಸುವಂತೆ ಸಿಎಂ ಮನವಿ ಮಾಡಿದರು.

BREAKING NEWS : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಗ್ಯದಲ್ಲಿ ದಿಢೀರ್‌ ಏರುಪೇರು | D.K.Shivakumar

BIG NEWS: ರಾಜಕೀಯ ಪಕ್ಷಗಳಿಗೆ 2 ಸಾವಿರ ರೂ.ಕ್ಕಿಂತ ಹೆಚ್ಚು ದೇಣಿಗೆ ಕೊಟ್ಟವರ ವಿವರ ಬಹಿರಂಗವಾಗಲಿ: ಕಾನೂನು ಸಚಿವಾಲಯಕ್ಕೆ ಸಿಇಸಿ ಪತ್ರ

BIGG NEWS : `PSI’ ನೇಮಕಾತಿ ಹಗರಣದಲ್ಲಿ ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ ಐ ಭಾಗಿ : ಸಿಐಡಿ ತನಿಖೆಯಲ್ಲಿ ಬಹಿರಂಗ

Share.
Exit mobile version