ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ಚಾಂಪಿಯನ್ಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 33 ಜನರು ಗಾಯಗೊಂಡಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದಾರೆ.
ಇಂದು ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರ್ ಸಿಬಿ ವಿಜಯೋತ್ಸವ ಆಚರಣೆ ಮಾಡೋದಕ್ಕೆ ಕ್ರಿಕೇಟ್ ಅಸೋಸಿಯೇಷನ್ ಅವರು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ಕೂಡ ಕಾರ್ಯಕ್ರಮ ಏರ್ಪಾಡು ಮಾಡಿದ್ದೆವು. ಚಿನ್ನಸ್ವಾಮಿ ಕ್ರೀಢಾಂಗಣದ ಬಳಿಯಲ್ಲಿ ವಿಜಯೋತ್ಸವ ಆಚರಣೆಯ ವೇಳೆ ಬಹಳ ದೊಡ್ಡ ದುರಂತ ನಡೆದಿದೆ. ಜನರು ಕಾಲ್ತುಳಿತಕ್ಕೆ ಒಳಗಾಗಿ 11 ಜನರು ಮೃತಪಟ್ಟಿದ್ದಾರೆ. 33 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.
ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ, ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರವು ಈ ಬಗ್ಗೆ ಸಂತಾಪ ಸೂಚಿಸುತ್ತದೆ. ನಮ್ಮ ನಿರೀಕ್ಷೆಗೂ ಮೀರಿ ಜನರು, ಅಭಿಮಾನಿಗಳು ಸೇರಿದ್ದರು. ನಾವು ಇಷ್ಟೊಂದು ಜನರನ್ನು ನಿರೀಕ್ಷಿಸೆ ಮಾಡಿರಲಿಲ್ಲ. ಕ್ರಿಕೇಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತಿಕೊಳ್ಳೋದಕ್ಕೆ ಅವಕಾಶವಿದೆ. ಆದರೇ ಎರಡು ಮೂರು ಲಕ್ಷ ಜನರು ಬಂದಿದ್ದಾರೆ. ಎಂದರು.
#WATCH | Bengaluru stampede | Karnataka CM Siddaramaiah says, "11 people died and 33 injured in the stampede" pic.twitter.com/XdTviMMYqb
— ANI (@ANI) June 4, 2025