Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅತಿಯಾದ ನಶೆಯಲ್ಲಿದ್ದರೇ ಜುಬೀನ್ ಗಾರ್ಗ್? ಸಿಂಗಾಪುರ ಪೊಲೀಸರಿಂದ ಗಾಯಕನ ಸಾವಿನ ಅಂತಿಮ ವರದಿ ಸಲ್ಲಿಕೆ | Zubeeen garg death

15/01/2026 8:10 AM

BIG NEWS : ಬೆಟ್ಟಿಂಗ್ ಗೆ 25 ಲಕ್ಷ ಸಾಲ : ತಂಗಿ ವಿರುದ್ಧವೇ ಸಿಸಿಬಿಗೆ ದೂರು ಸಲ್ಲಿಸಿದ ಭಜರಂಗಿ ನಟಿ ಕಾರುಣ್ಯ ರಾಮ್

15/01/2026 8:08 AM

BREAKING : ‘ಟ್ಯಾಕ್ಸಿಕ್’ ಟೀಸರ್ ಗೆ ಎಲ್ಲೆಡೆ ಆಕ್ರೋಶ : ಟೀಕೆಗೆ ಕುಗ್ಗಿದ ನಟಿ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್!

15/01/2026 7:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News : ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಕುಸುಮ್ ಬಿ’ಯೋಜನೆಯಡಿ 7 ಗಂಟೆ ನಿರಂತರ ವಿದ್ಯುತ್.!
KARNATAKA

Good News : ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಕುಸುಮ್ ಬಿ’ಯೋಜನೆಯಡಿ 7 ಗಂಟೆ ನಿರಂತರ ವಿದ್ಯುತ್.!

By kannadanewsnow0931/12/2024 5:15 AM

ತುಮಕೂರು: ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡುವ ಕುಸುಮ್- ಸಿ ಯೋಜನೆಯ ಮೊದಲ ಹಂತದಲ್ಲಿ ಮಾರ್ಚ್ 15ರೊಳಗೆ 1,300 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕುಸುಮ್-ಸಿ ಯೋಜನೆಯಡಿ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಾಂಗವರ ಬಳಿ ಮತ್ತು ಚಿಕ್ಕಬಾಣಗೆರೆ ಬಳಿ ನಿರ್ಮಿಸಿರುವ ಸೋಲಾರ್ ಪಾರ್ಕ್ ಗಳು ಹಾಗೂ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ನೀರಗುಂದ ಗೇಟ್ ಬಳಿ ಸ್ಥಾಪಿಸಿರುವ ಸೋಲಾರ್ ಪಾರ್ಕ್ ಗೆ ಸೋಮವಾರ ಅಧಿಕಾರಿಗಳೊಂದಿಗೆ ಭೇಟಿನೀಡಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

“ಕುಸುಮ್-ಸಿ ಯೋಜನೆಯ ಮೊದಲ ಹಂತದಲ್ಲಿ ರಾಜ್ಯಾದ್ಯಂತ ವಿವಿಧ ಫೀಡರ್ ವ್ಯಾಪ್ತಿಗಳಲ್ಲಿ 3,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಮಾರ್ಚ್ 15ರೊಳಗೆ 1,300 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲಾಗುವುದು. ಕಾಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿವೆ”, ಎಂದು ಹೇಳಿದರು.

“ಕುಸುಮ್-ಬಿ ಯೋಜನೆಯಡಿ ರೈತರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸಲಾಗುತ್ತಿದೆ. ಕುಸುಮ್-ಸಿ ಯೋಜನೆಯಡಿ ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪಸೆಟ್‌ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡಲಾಗುವುದು. ಹಗಲು ವೇಳೆ ನಿರಂತರ 7 ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ಪೂರೈಸಲಾಗುವುದು”, ಎಂದು ಮಾಹಿತಿ ನೀಡಿದರು.

“ಫೀಡರ್ ಮಟ್ಟದ ಸೌರೀಕರಣಕ್ಕೆ ಸೋಲಾರ್ ಪಾರ್ಕ್ ಗಳನ್ನು ಸ್ಥಾಪಿಸಲು ಸರ್ಕಾರಿ ಭೂಮಿ ಇದ್ದರೆ ಅದನ್ನು ಉಚಿತವಾಗಿ ಇಂಧನ ಇಲಾಖೆಗೆ ಪಡೆದು ಗುತ್ತಿಗೆದಾರರಿಗೆ ನೀಡಲಾಗುತ್ತದೆ. ಗುತ್ತಿಗೆದಾರರು ಪ್ರತಿ ಎಕರೆ ಭೂಮಿಗೆ ವಾರ್ಷಿಕ 25 ಸಾವಿರ ರೂ. ಪಾವತಿಸಬೇಕು. ಈ ಹಣವನ್ನು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಇಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಚರ್ಚಿಸಿ, ಈ ಹಣವನ್ನು ಸೋಲಾರ್ ಪಾರ್ಕ್ ಇರುವ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆಗೆ ವೆಚ್ಚ ಮಾಡಲಿದ್ದಾರೆ. ಸರ್ಕಾರಿ ಭೂಮಿ ಲಭ್ಯವಿಲ್ಲದೇ ಇದ್ದರೆ ಖಾಸಗಿ ಭೂಮಿ ಪಡೆಯಲಾಗುವುದು. ಈ ಭೂಮಿಗೆ ಪ್ರತಿ ಎಕರೆಗೆ 25,000 ರೂ.ಅನ್ನು ಗುತ್ತಿಗೆದಾರರು ಭೂಮಾಲೀಕರಿಗೆ ಪಾವತಿ ಮಾಡಲಿದ್ದಾರೆ”, ಎಂದು ಹೇಳಿದರು.

“ಹಗಲು ವೇಳೆ 7 ಗಂಟೆ ನಿರಂತರ ಗುಣಮಟ್ಟದ ವಿದ್ಯುತ್ ಲಭ್ಯವಾಗುವುದರಿಂದ ರೈತರು ಕುಸುಮ್-ಸಿ ಯೋಜನೆಗೆ ಹೆಚ್ಚು ಬೇಡಿಕೆ ಇಡುತ್ತಿದ್ದಾರೆ. ಒಂದು ಫೀಡರ್ ಸೌರೀಕರಣವಾದರೆ ಸುತ್ತಲಿನ ಸುಮಾರು 1,000ಕ್ಕಿಂತ ಹೆಚ್ಚು ರೈತರಿಗೆ ವಿದ್ಯುತ್ ಪೂರೈಸಲು ಸಾಧ್ಯವಾಗುತ್ತದೆ. ರೈತರಿಗೆ ಈ ಫೀಡರ್ ಗಳಿಂದ ವಿದ್ಯುತ್ ಪೂರೈಸುವ ಕಾರಣ, ಇತರೆ ಗ್ರಾಹಕರಿಗೆ ಎಸ್ಕಾಂಗಳಿಂದ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗುತ್ತದೆ”, ಎಂದು ತಿಳಿಸಿದರು.

“ಖಾಸಗಿಯವರೇ ಇಲ್ಲಿ ವಿದ್ಯುತ್ ಉತ್ಪಾದನೆ ಮಾಡುತ್ತಾರೆ. ಅದನ್ನು ಸರ್ಕಾರ ಖರೀದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸುತ್ತದೆ. ಪ್ರತಿ ಯೂನಿಟ್ ವಿದ್ಯುತ್ ಗೆ ಗುತ್ತಿಗೆದಾರಿಗೆ ಗರಿಷ್ಠ 3.17 ರೂ. ನಿಗದಿಪಡಿಸಲಾಗುತ್ತದೆ. ಚಾಂಗವರ ಬಳಿ ಸ್ಥಾಪಿಸಿರುವ ಸೋಲಾರ್ ಪಾರ್ಕ್ ನಲ್ಲಿ ಪ್ರತಿ ಯೂನಿಟ್ ವಿದ್ಯುತ್ತಿಗೆ 3.15 ರೂ. ದರ ನಿಗದಿಪಡಿಸಲಾಗಿದೆ”, ಎಂದು ಸಚಿವರು ಮಾಹಿತಿ ನೀಡಿದರು.

ಶೀಘ್ರದಲ್ಲೇ ಉದ್ಘಾಟನೆ

“ಈಗಾಗಲೇ ಪೂರ್ಣಗೊಂಡಿರುವ ಕುಸುಮ್-ಸಿ ಫೀಡರ್ ಮಟ್ಟದ ಸೋಲಾರ್ ಪಾರ್ಕ್ ಗಳ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಬೆಂಬಲ ನೀಡಿದ್ದು, ಎಲ್ಲಾ ರೀತಿಯ ಸಹಕಾರ ಕೊಡುತ್ತಿದ್ದಾರೆ. ಇದರ ಪರಿಣಾಮ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿವೆ. ಶೀಘ್ರದಲ್ಲೇ ಮುಖ್ಯಮಂತ್ರಿಯವರಿಂದ ಈ ಯೋಜನೆಯನ್ನು ಅಧಿಕೃತವಾಗಿ ಉದ್ಘಾಟಿಸಲಾಗುವುದು”, ಎಂದು ಸಚಿವರು ಹೇಳಿದರು.

ಈ ವೇಳೆ ದೆಹಲಿಯಲ್ಲಿನ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿಯೂ ಆಗಿರುವ ಶಿರಾ ಕ್ಷೇತ್ರದ ಶಾಸಕಟಿ.ಬಿ.ಜಯಚಂದ್ರ, ಹೊಸದುರ್ಗದ ಕ್ಷೇತ್ರದ ಶಾಸಕ ಬಿ.ಜಿ.ಗೋವಿಂದಪ್ಪ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಮತ್ತಿತರರು ಇದ್ದರು.

BREAKING: ರಾಜ್ಯದಲ್ಲಿ ‘ನಕ್ಸಲ್ ಶರಣಾಗತಿ ನೀತಿ’ ಸರಳೀಕರಣ, ಮುಖ್ಯವಾಹಿನಿಗೆ ತರಲು ಬದ್ಧ: ಸಿಎಂ ಸಿದ್ಧರಾಮಯ್ಯ ಘೋಷಣೆ

BIG NEWS: ನನ್ನ ಹುಟ್ಟುಹಬ್ಬಕ್ಕೆ ಫ್ಲೆಕ್ಸ್, ಬ್ಯಾನರ್ ಯಾವುದು ಬೇಡ, ನಿಮ್ಮ ಅಭಿಮಾನ ಜವಾಬ್ದಾರಿಯುತವಾಗಿರಲಿ: ನಟ ಯಶ್ | Actor Yash

BIGG NEWS : 2025 ನೇ ಸಾಲಿನ ರಾಜ್ಯ `ಸಾರ್ವತ್ರಿಕ ರಜೆ’ ದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025

Share. Facebook Twitter LinkedIn WhatsApp Email

Related Posts

BIG NEWS : ಬೆಟ್ಟಿಂಗ್ ಗೆ 25 ಲಕ್ಷ ಸಾಲ : ತಂಗಿ ವಿರುದ್ಧವೇ ಸಿಸಿಬಿಗೆ ದೂರು ಸಲ್ಲಿಸಿದ ಭಜರಂಗಿ ನಟಿ ಕಾರುಣ್ಯ ರಾಮ್

15/01/2026 8:08 AM1 Min Read

BREAKING : ‘ಟ್ಯಾಕ್ಸಿಕ್’ ಟೀಸರ್ ಗೆ ಎಲ್ಲೆಡೆ ಆಕ್ರೋಶ : ಟೀಕೆಗೆ ಕುಗ್ಗಿದ ನಟಿ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್!

15/01/2026 7:45 AM1 Min Read

BIG NEWS : ದಕ್ಷಿಣಕನ್ನಡದಲ್ಲಿ ಕೆರೆಯಲ್ಲಿ 15 ವರ್ಷದ ಬಾಲಕನ ಶವ ಪತ್ತೆ : ತಲೆಗೆ ಗಂಭೀರ ಗಾಯ, ಕೊಲೆ ಶಂಕೆ

15/01/2026 7:15 AM1 Min Read
Recent News

ಅತಿಯಾದ ನಶೆಯಲ್ಲಿದ್ದರೇ ಜುಬೀನ್ ಗಾರ್ಗ್? ಸಿಂಗಾಪುರ ಪೊಲೀಸರಿಂದ ಗಾಯಕನ ಸಾವಿನ ಅಂತಿಮ ವರದಿ ಸಲ್ಲಿಕೆ | Zubeeen garg death

15/01/2026 8:10 AM

BIG NEWS : ಬೆಟ್ಟಿಂಗ್ ಗೆ 25 ಲಕ್ಷ ಸಾಲ : ತಂಗಿ ವಿರುದ್ಧವೇ ಸಿಸಿಬಿಗೆ ದೂರು ಸಲ್ಲಿಸಿದ ಭಜರಂಗಿ ನಟಿ ಕಾರುಣ್ಯ ರಾಮ್

15/01/2026 8:08 AM

BREAKING : ‘ಟ್ಯಾಕ್ಸಿಕ್’ ಟೀಸರ್ ಗೆ ಎಲ್ಲೆಡೆ ಆಕ್ರೋಶ : ಟೀಕೆಗೆ ಕುಗ್ಗಿದ ನಟಿ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್!

15/01/2026 7:45 AM

BREAKING: ಒನ್‌ಪ್ಲಸ್ CEO ಪೀಟ್ ಲಾವ್ ವಿರುದ್ಧ ಅರೆಸ್ಟ್ ವಾರಂಟ್! ತೈವಾನ್‌ನಲ್ಲಿ ಕಂಪನಿಗೆ ಸಂಕಷ್ಟ ತಂದ ‘ಅಕ್ರಮ ನೇಮಕಾತಿ’

15/01/2026 7:34 AM
State News
KARNATAKA

BIG NEWS : ಬೆಟ್ಟಿಂಗ್ ಗೆ 25 ಲಕ್ಷ ಸಾಲ : ತಂಗಿ ವಿರುದ್ಧವೇ ಸಿಸಿಬಿಗೆ ದೂರು ಸಲ್ಲಿಸಿದ ಭಜರಂಗಿ ನಟಿ ಕಾರುಣ್ಯ ರಾಮ್

By kannadanewsnow0515/01/2026 8:08 AM KARNATAKA 1 Min Read

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ಕಾರುಣ್ಯ ರಾಮ್ ಗೆ ಇದೀಗ ಸಾಲಗಾರರ ಕಾಟ ಶುರುವಾಗಿದ್ದು, ತಂಗಿಯ…

BREAKING : ‘ಟ್ಯಾಕ್ಸಿಕ್’ ಟೀಸರ್ ಗೆ ಎಲ್ಲೆಡೆ ಆಕ್ರೋಶ : ಟೀಕೆಗೆ ಕುಗ್ಗಿದ ನಟಿ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್!

15/01/2026 7:45 AM

BIG NEWS : ದಕ್ಷಿಣಕನ್ನಡದಲ್ಲಿ ಕೆರೆಯಲ್ಲಿ 15 ವರ್ಷದ ಬಾಲಕನ ಶವ ಪತ್ತೆ : ತಲೆಗೆ ಗಂಭೀರ ಗಾಯ, ಕೊಲೆ ಶಂಕೆ

15/01/2026 7:15 AM

BREAKING : ಧಾರವಾಡದಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾಲಕನಿಗೆ ಚಾಕು ಇರಿದು ಹತ್ಯೆ : ಮೂವರು ಅಪ್ರಾಪ್ತರು ಅರೆಸ್ಟ್!

15/01/2026 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.