Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಂಸತ್ತಿನಲ್ಲಿ ಮಹಿಳಾ ಸಂಸದರಿಂದ ‘ಪ್ರಧಾನಿ ಮೋದಿ’ ಮೇಲೆ ದಾಳಿಗೆ ಕಾಂಗ್ರೆಸ್ ಪಿತೂರಿ ಮಾಡಿತ್ತು ; ಲೋಕಸಭಾ ಸಚಿವಾಲಯ

05/02/2026 3:38 PM

ಗಮನಿಸಿ : ಈ ಹಿಟ್ಟಿನಿಂದ ಮಾಡಿದ ರೊಟ್ಟಿ 1 ತಿಂಗಳು ತಿಂದರೆ `ಕೊಬ್ಬು’ ಬೆಣ್ಣೆಯಂತೆ ಕರಗುತ್ತದೆ.!

05/02/2026 3:33 PM

“ಪ್ರಧಾನಿಗೆ ಲೋಕಸಭೆಗೆ ಬರಬೇಡಿ ಎಂದು ನಾನು ಸೂಚಿಸಿದ್ದೆ, ಕಾಂಗ್ರೆಸ್ ಸಂಸದರು ಅವ್ರ ಕುರ್ಚಿಯನ್ನ ಸುತ್ತುವರೆದಿದ್ರು” : ಸ್ಪೀಕರ್ ಓಂ ಬಿರ್ಲಾ

05/02/2026 3:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಈವರೆಗೆ 13,000 ಗುಂಡಿ ಮುಚ್ಚಲಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ಬೆಂಗಳೂರಲ್ಲಿ ಈವರೆಗೆ 13,000 ಗುಂಡಿ ಮುಚ್ಚಲಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0930/09/2025 8:47 PM

ಬೆಂಗಳೂರು: “ಇದುವರೆಗೂ 13,000 ಗುಂಡಿಗಳನ್ನು ಮುಚ್ಚಲಾಗಿದೆ. ಪ್ರತಿ ಗುಂಡಿ ಮುಚ್ಚಿರುವುದಕ್ಕೆ ಫೋಟೋ, ವಿಡಿಯೋ ದಾಖಲೆ ಮಾಡಿಸಲಾಗಿದೆ. ನೀವುಗಳು (ಮಾಧ್ಯಮಗಳು) ಕೂಡ ಪರಿಶೀಲನೆ ಮಾಡಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರು ನಾಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಅವರು ಮಂಗಳವಾರ ಸಿಟಿ ರೌಂಡ್ ನಡೆಸಿ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದರು.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಅಧಿಕಾರಿಗಳು ಸರ್ಕಾರದ ಆದೇಶ ಪಾಲನೆ ಮಾಡಿ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದ್ದಾರೆ. ಇದರ ಜೊತೆಗೆ 550 ಕಿ.ಮೀ ಉದ್ದದ ಮುಖ್ಯರಸ್ತೆಗಳ ಅಭಿವೃದ್ಧಿಗೆ ₹1100 ಕೋಟಿ ವೆಚ್ಚದ ಕಾರ್ಯಯೋಜನೆ ಸಿದ್ಧಪಡಿಸಲು ಸೂಚನೆ ನೀಡಿದ್ದೇನೆ” ಎಂದು ಮಾಹಿತಿ ನೀಡಿದರು.

“ಇನ್ನು ಮುಖ್ಯರಸ್ತೆಗಳ ಜಂಕ್ಷನ್ ನಲ್ಲಿ ಕಾಂಕ್ರೀಟ್ ಹಾಕಲು 26 ದಿನಗಳ ಅಗತ್ಯವಿದ್ದು, ಟ್ರಾಫಿಕ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ನಾನು ಬೆಂಗಳೂರು ರಸ್ತೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಪ್ರಯತ್ನಿಸುತ್ತಿದ್ದೇನೆ. ಇನ್ನು ರಸ್ತೆಗುಂಡಿ ಮುಚ್ಚುವುದಕ್ಕಾಗಿ ₹750 ಕೋಟಿ ನೀಡುವುದಾಗಿ ಸಿಎಂ ಹೇಳಿದ್ದಾರೆ” ಎಂದರು.

“ಇನ್ನು ವಾರ್ಡ್ ಮಟ್ಟದ ರಸ್ತೆಗಳ ಅಭಿವೃದ್ಧಿಗೆ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಲು ₹1100 ಕೋಟಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಈ ಅನುದಾನವನ್ನು ರಸ್ತೆಗಳ ಸುಧಾರಣೆಗೆ ಬಳಸಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

“ದೇಶದಲ್ಲಿ ಯಾವುದೇ ನಗರದ ಮಂತ್ರಿ ರಸ್ತೆಯಲ್ಲಿ ಗುಂಡಿ ಕಂಡರೆ ಮಾಹಿತಿ ನೀಡಿ ಎಂದು ಸಾರ್ವಜನಿಕರಿಗೆ ಕರೆ ನೀಡಿರಲಿಲ್ಲ. ಆದರೆ ನಾನು ಇದಕ್ಕಾಗಿ ಪ್ರತ್ಯೇಕ ಆಪ್ ಸಿದ್ಧಪಡಿಸಿ, ಪೋಲೀಸರ ಸಹಕಾರದಲ್ಲಿ ರಸ್ತೆಗುಂಡಿ ಮುಚ್ಚಲಾಗುತ್ತಿದೆ. ಇಂತಹ ಪ್ರಯತ್ನ ನಡೆದಿರುವುದು ಕರ್ನಾಟಕದಲ್ಲಿ ಮಾತ್ರ. ಬೆಂಗಳೂರು ಜಾಗತಿಕ ನಗರ ಹೀಗಾಗಿ ಎಲ್ಲರೂ ಬೆಂಗಳೂರು ರಸ್ತೆಗುಂಡಿಗಳ ಬಗ್ಗೆ ಮಾತ್ರ ಪ್ರಚಾರ ಮಾಡುತ್ತಿದ್ದಾರೆ” ಎಂದು ಹೇಳಿದರು.

ಬಿಜೆಪಿ ನಾಯಕರು ನನ್ನೊಟ್ಟಿಗೆ ದೆಹಲಿಗೆ ಬರಲಿ

ಪ್ರಧಾನಮಂತ್ರಿಗಳ ಮನೆ ರಸ್ತೆಯಲ್ಲಿ ಗುಂಡಿ ಇಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಬೇಕಿದ್ದರೆ ನನ್ನ ಜೊತೆ ಅವರು ಬರಲಿ ತೋರಿಸುತ್ತೇನೆ. ದೆಹಲಿಯಲ್ಲಿರುವ ರಸ್ತೆಗುಂಡಿ ತೋರಿಸುತ್ತೇನೆ. ಕರ್ನಾಟಕ ಭಾವನದಿಂದ ಹೋಗುವಾಗ ನೋಡಿದ್ದೇನೆ. ಎಲ್ಲಾ ಕಡೆ ಇದೇ ಪರಿಸ್ಥಿತಿ ಇದೆ. ಅವರ ತಪ್ಪು ಎಂದು ಹೇಳುವುದಿಲ್ಲ. ಅವರು ಯಾವಾಗ ಬರುತ್ತಾರೆ ಹೇಳಿ, ರಾಜ್ಯದಿಂದ ಒಂದು ನಿಯೋಗ ಹೋಗೋಣ. ಹಾಗೆ ಯಾರಾದರೂ ಕೇಂದ್ರ ಸರ್ಕಾರದಿಂದ ಹಣ ಕೊಡಿಸಿದರೆ ತರೋಣ” ಎಂದರು.

ಕಸ ಹಾಕಿರುವವನನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸಿ:

ಕಸದ ಪರಿಸ್ಥಿತಿಯೂ ಹಾಗೇ ಇದೆ ಎಂದು ಕೇಳಿದಾಗ, “ನಿಜ ಕಸದ ಸಮಸ್ಯೆಯೂ ಇದೆ. ಇಂದು ಕಾಂಗ್ರೆಸ್ ಕಚೇರಿಗೆ ಹೋಗುವಾಗ ಜಯಮಹಲ್ ರಸ್ತೆಯಲ್ಲಿ ಯಾರೋ ಒಂದು ಲೋಡ್ ಕಸ ಸುರಿದಿದ್ದಾರೆ. ನಿನ್ನೆ ರಾತ್ರಿ ಇರಲಿಲ್ಲ. ರಾತ್ರೊರಾತ್ರಿ ಬಂದು ಸುರಿದಿದ್ದಾರೆ” ಎಂದರು.

“ಈ ಕಸ ಸುರಿದವರು ಯಾರು ಎಂದು ಸಿಸಿಟಿವಿಯಲ್ಲಿ ಪತ್ತೆ ಮಾಡಿ ಅವನ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ಅವನ ಗಾಡಿ ಸೀಜ್ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನರು ಕೂಡ ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದಾರೆ ಎಂದು ಕೇಳಿದಾಗ, “ಸಾರ್ವಜನಿಕರು ನಮಗೆ ಸಹಕಾರ ನೀಡುತ್ತಿಲ್ಲ” ಎಂದು ಬೇಸರಿಸಿದರು.

ವಾರ್ಡ್ ಗಳ ಬೌಂಡರಿ ನಿಗದಿ ಮಾಡಿ ಪ್ರಕಟಿಸಲಾಗಿದೆ ಎಂದು ಕೇಳಿದಾಗ, “ಈ ಬಗ್ಗೆ ಮಾಹಿತಿ ಇಲ್ಲ. ಇದಕ್ಕಾಗಿ ಸಮಿತಿ ಇದೆ. ಸಾರ್ವಜನಿಕರ ಆಕ್ಷೇಪಣೆ ಇದ್ದರೆ ಸಲ್ಲಿಸಬಹುದು” ಎಂದರು.

They love me a lot:

ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ನಿಮ್ಮನ್ನೇ ಯಾಕೆ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ನನ್ನ ಮೇಲೆ ಅವರಿಗೆ ಬಹಳ ಪ್ರೀತಿ ಇದೆ. ಕುಮಾರಸ್ವಾಮಿ ಹಾಗೂ ಬಿಜೆಪಿಯವರು ನನ್ನನ್ನು ಪ್ರೀತಿಸಿದಷ್ಟು ಬೇರೆ ಯಾರನ್ನು ಪ್ರೀತಿಸುವುದಿಲ್ಲ. They love me a lot” ಎಂದು ತಿಳಿಸಿದರು.

BREAKING: ನೆರೆ ಪೀಡಿತ ರೈತರಿಗೆ ಗುಡ್ ನ್ಯೂಸ್: NDRF ಪರಿಹಾರದ ಜೊತೆಗೆ ಹೆಚ್ಚುವರಿ ಪ್ಯಾಕೇಜ್ ಘೋಷಿಸಿದ ಸಿಎಂ ಸಿದ್ದರಾಮಯ್ಯ

BREAKING: ರಾಜ್ಯ ಸರ್ಕಾರದಿಂದ ‘ಅತಿಥಿ ಉಪನ್ಯಾಸಕ’ರನ್ನು ತಾತ್ಕಾಲಿಕವಾಗಿ ಆಯ್ಕೆಗೆ ಗ್ರೀನ್ ಸಿಗ್ನಲ್: ಈ ಕಂಡೀಷನ್ ಅಪ್ಲೈ

Share. Facebook Twitter LinkedIn WhatsApp Email

Related Posts

ಗಮನಿಸಿ : ಈ ಹಿಟ್ಟಿನಿಂದ ಮಾಡಿದ ರೊಟ್ಟಿ 1 ತಿಂಗಳು ತಿಂದರೆ `ಕೊಬ್ಬು’ ಬೆಣ್ಣೆಯಂತೆ ಕರಗುತ್ತದೆ.!

05/02/2026 3:33 PM2 Mins Read

ಕೇವಲ 1 ರೂ. ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ `ಜಿರಳೆ, ಹಲ್ಲಿ’ ಓಡಿಸಬಹುದು.! ಜಸ್ಟ್ ಈ ಟಿಪ್ಸ್ ಫಾಲೋ ಮಾಡಿ

05/02/2026 2:55 PM1 Min Read

Check Bounce : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ : ನಿಯಮಗಳೇನು ತಿಳಿಯಿರಿ

05/02/2026 2:49 PM2 Mins Read
Recent News

BREAKING : ಸಂಸತ್ತಿನಲ್ಲಿ ಮಹಿಳಾ ಸಂಸದರಿಂದ ‘ಪ್ರಧಾನಿ ಮೋದಿ’ ಮೇಲೆ ದಾಳಿಗೆ ಕಾಂಗ್ರೆಸ್ ಪಿತೂರಿ ಮಾಡಿತ್ತು ; ಲೋಕಸಭಾ ಸಚಿವಾಲಯ

05/02/2026 3:38 PM

ಗಮನಿಸಿ : ಈ ಹಿಟ್ಟಿನಿಂದ ಮಾಡಿದ ರೊಟ್ಟಿ 1 ತಿಂಗಳು ತಿಂದರೆ `ಕೊಬ್ಬು’ ಬೆಣ್ಣೆಯಂತೆ ಕರಗುತ್ತದೆ.!

05/02/2026 3:33 PM

“ಪ್ರಧಾನಿಗೆ ಲೋಕಸಭೆಗೆ ಬರಬೇಡಿ ಎಂದು ನಾನು ಸೂಚಿಸಿದ್ದೆ, ಕಾಂಗ್ರೆಸ್ ಸಂಸದರು ಅವ್ರ ಕುರ್ಚಿಯನ್ನ ಸುತ್ತುವರೆದಿದ್ರು” : ಸ್ಪೀಕರ್ ಓಂ ಬಿರ್ಲಾ

05/02/2026 3:29 PM

ನಿಮ್ಮ ದೇಹದ ಮೇಲಿರುವ `ನರುಳ್ಳೆ’ ತಾವಾಗಿಯೇ ಉದುರಿ ಹೋಗಲು ಜಸ್ಟ್ ಹೀಗೆ ಮಾಡಿ.!

05/02/2026 3:20 PM
State News
KARNATAKA

ಗಮನಿಸಿ : ಈ ಹಿಟ್ಟಿನಿಂದ ಮಾಡಿದ ರೊಟ್ಟಿ 1 ತಿಂಗಳು ತಿಂದರೆ `ಕೊಬ್ಬು’ ಬೆಣ್ಣೆಯಂತೆ ಕರಗುತ್ತದೆ.!

By kannadanewsnow5705/02/2026 3:33 PM KARNATAKA 2 Mins Read

ಇಂದಿನ ವೇಗದ ಜೀವನದಲ್ಲಿ, ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಸವಾಲಿನ ಕೆಲಸಗಳಲ್ಲಿ ಒಂದಾಗಿದೆ. ಬೆಳಗಿನ ಉಪಾಹಾರ ಕಾಣೆಯಾಗಿದೆ, ಮಧ್ಯಾಹ್ನದ ಊಟ ಮಾತ್ರ…

ಕೇವಲ 1 ರೂ. ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ `ಜಿರಳೆ, ಹಲ್ಲಿ’ ಓಡಿಸಬಹುದು.! ಜಸ್ಟ್ ಈ ಟಿಪ್ಸ್ ಫಾಲೋ ಮಾಡಿ

05/02/2026 2:55 PM

Check Bounce : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ : ನಿಯಮಗಳೇನು ತಿಳಿಯಿರಿ

05/02/2026 2:49 PM

`MRP’ ಗಿಂತ ಹೆಚ್ಚಿನ ಹಣ ಪಡೆದ ಫ್ಲಿಪ್‌ ಕಾರ್ಟ್ ಗೆ 25,000 ರೂ. ದಂಡ ವಿಧಿಸಿ ಗ್ರಾಹಕರ ಆಯೋಗ ಆದೇಶ.!

05/02/2026 2:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.