ಬೆಂಗಳೂರು: ಹಾಲಿನ ದರ ಹೆಚ್ಚಿಸುವುದರ ಕುರಿತು ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. 14 ಹಾಲು ಉತ್ಪಾದಕರ ಸಂಘಗಳು ಹಾಲಿನ ದರ ಹೆಚ್ಚಿಸಬೇಕು ಎಂದು ಮನವಿ ಮಾಡಿದ್ದಾರೆ.
BIGG NEWS: ಭೂತದ ಬಾಯಿಲ್ಲಿ ಭಗವದ್ಗೀತೆ; ಸುಮಲತಾ ವಿರುದ್ಧ ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ
ವಿಧಾನಸೌಧದಲ್ಲಿ ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿದ, ಗ್ರಾಹಕರು ಹಾಲಿನ ದರ ಹೆಚ್ಚಿಸಬೇಡಿ ಎಂದು ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಸಹಕಾರ ಸಪ್ತಾಹವನನ್ನು ಪ್ರತಿ ವರ್ಷದಂತೆ ಈ ವರ್ಷವು ಆಚರಣೆ ಮಾಡಲು ನಿರ್ಧರಿಸಲಾಗಿದೆ. ನವೆಂಬರ್ 14 ರಿಂದ 20ರ ವರೆಗೆ ಕಲ್ಬುರ್ಗಿಯಲ್ಲಿ 69ನೇ ಸಹಕಾರ ಸಪ್ತಾಹ ನಡೆಯಲಿದೆ. ಈ ಕಾರ್ಯಕ್ರಮವು 7 ಜಿಲ್ಲೆಗಳಲ್ಲಿ 7 ದಿನಗಳ ಕಾಲ ನಡೆಯಲಿದೆ. ಸಹಕಾರ ಸಪ್ತಾಹಕ್ಕೆ ಸಿಎಂ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಸಹಕಾರ ಸಪ್ತಾಹಕ್ಕೆ ಪಕ್ಷಾತೀತವಾಗಿ ಎಲ್ಲಾ ಮುಖಂಡರಿಗೂ ಆಹ್ವಾನ ನೀಡಲಾಗುತ್ತದೆ ಎಂದರು.