ಬೆಂಗಳೂರು : ನಗರದ ಕೆಜಿ ಹಳ್ಳಿ ಗಲಭೆ ಸೇರಿದಂತೆ ನಗರದ ಹಲವು ಕಡೆ ಗಲಭೆ ಸೃಷ್ಟಿಸಲು ಸಂಚು ರೂಪಿಸಿದ್ದ ಆರೋಪದ ಮೇರೆಗೆ ಪಿಎಫ್ಐ ಸಂಘಟನೆಯ 15 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

9 ಜಿಲ್ಲೆಗಳಲ್ಲಿ ಆರೋಪಿಗಳ ನಿವಾಸಕ್ಕೆ  ಏಕಕಾಲಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಲ್ವರು  ಆರೋಪಿಗಳು ಸದ್ಯ ತಲೆಮರೆಸಿಕೊಂಡಿದ್ದು, ಅವರನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದೆ.

ಪಿಎಫ್ಐ ಬೆಂಗಳೂರಿನ ಹಲವು ಕಡೆ ಗಲಭೆ ಸೃಷ್ಟಿಸಲು ಸಂಚು ರೂಪಿಸಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಈ ದಾಳಿ ನಡೆಸಿದ್ದಾರೆ. ಇನ್ನೂ, ಈ ಕಾರ್ಯಾಚರಣೆಗೂ ಗುರುವಾರ ನಡೆದ ಪಿಎಫ್ಐ ಹಾಗೂ ಎಸ್ ಡಿಪಿಐ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸಿರುವುದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.

BREAKING NEWS : ಇಂಡೋನೇಷ್ಯಾದಲ್ಲಿ 4.7 ತೀವ್ರತೆಯ ಭೂಕಂಪ | Earthquake in Indonesia

JOB ALERT : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘SBI’ ನಲ್ಲಿ 1673 ಹುದ್ದೆಗಳಿಗೆ ಅರ್ಜಿ ಆಹ್ವಾನ |SBI Recruitment 2022

Share.
Exit mobile version