Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನ್ ನ 3 ಪರಮಾಣು ನೆಲೆಗಳ ಮೇಲೆ ಅಮೆರಿಕ ಬಾಂಬ್ ದಾಳಿ : ಡೊನಾಲ್ಡ್ ಟ್ರಂಪ್ ಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಧನ್ಯವಾದ | WATCH VIDEO

22/06/2025 8:56 AM

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

22/06/2025 8:51 AM

ಮತಗಟ್ಟೆಗಳಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡುವುದರಿಂದ ಮತದಾರರಿಗೆ ಅಪಾಯವಾಗಬಹುದು: ಚುನಾವಣಾ ಆಯೋಗ

22/06/2025 8:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಕರ್ನಾಟಕದಲ್ಲಿ 15,000 ಎಕರೆ ಅರಣ್ಯ ಹೆಚ್ಚಳ: ಸಚಿವ ಈಶ್ವರ್ ಖಂಡ್ರೆ
KARNATAKA

BIG NEWS: ಕರ್ನಾಟಕದಲ್ಲಿ 15,000 ಎಕರೆ ಅರಣ್ಯ ಹೆಚ್ಚಳ: ಸಚಿವ ಈಶ್ವರ್ ಖಂಡ್ರೆ

By kannadanewsnow0927/05/2025 2:43 PM

ಬೆಂಗಳೂರು: ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಆದರೆ ಅದಕ್ಕೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗುತ್ತಿಲ್ಲ. ಇದನ್ನು ಮನಗಂಡು, ನಾನು ಅರಣ್ಯ ಸಚಿವನಾದ ಬಳಿಕ ಅರಣ್ಯ ವಿಸ್ತರಣೆಗೆ ಕ್ರಮ ವಹಿಸಿದ್ದು, 2 ವರ್ಷದಲ್ಲಿ 15000 ಎಕರೆಗೂ ಹೆಚ್ಚು ಭೂಮಿಯನ್ನು ಅರಣ್ಯ ಎಂದು ಅಧಿಸೂಚನೆ ಮಾಡಲಾಗಿದೆ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಕಾಡಿನಿಂದ ನಾಡಿಗೆ ಕಾಡಾನೆಗಳು ಬಾರದಂತೆ ತಡೆಯಲು ಆನೆ ಕಂದಕ, ಸೌರ ತಂತಿ ಬೇಲಿ ಮತ್ತು ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ. ನಾನು ಅರಣ್ಯ ಸಚಿವನಾಗುವವರೆಗೆ ಅಂದರೆ 2023ರ ಜೂನ್ ವರೆಗೆ ರಾಜ್ಯದಲ್ಲಿ 312.918 ಕಿ.ಮೀ ಮಾತ್ರ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಆದರೆ ಕಳೆದ 2 ವರ್ಷದಲ್ಲಿ 115.085 ಕಿ.ಮೀ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಇನ್ನೂ 193 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಅನುಮೋದನೆ ನೀಡಲಾಗಿದೆ ಎಂದು ವಿವರ ನೀಡಿದರು.

ಅರಣ್ಯದಂಚಿನಲ್ಲಿ ಅಳವಡಿಸಲಾಗಿರುವ ರೈಲ್ವೆ ಬ್ಯಾರಿಕೇಡ್ ಗೆ ಹೊಂದಿಕೊಂಡಂತೆ ಬಿದಿರು ಮತ್ತು ಕತ್ತಾಳೆ ಬೆಳೆಸಿದರೆ ಅದು ಜೈವಿಕ ಮತ್ತು ಸ್ವಾಭಾವಿಕ ಬ್ಯಾರಿಕೇಡ್ ನಂತೆ ಕಾರ್ಯ ನಿರ್ವಹಿಸುತ್ತದೆ. ಅರಣ್ಯ ಒತ್ತುವರಿಯನ್ನೂ ತಡೆಯುತ್ತದೆ. ಜೊತೆಗೆ ಆನೆಗಳಿಗೆ ಆಹಾರವೂ ಆಗುತ್ತದೆ. ಆನೆಗಳನ್ನು ಮರಳಿ ಕಾಡಿಗೆ ಕಳುಹಿಸಲು ಮತ್ತು ಚಿರತೆಗಳನ್ನು ಸೆರೆ ಹಿಡಿಯಲು ಕಳೆದ 2 ವರ್ಷದಲ್ಲಿ ಹೊಸದಾಗಿ 2 ಆನೆ ಕಾರ್ಯಪಡೆ ಹಾಗೂ 1 ಚಿರತೆ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ ಎಂದು ತಿಳಿಸಿದರು.

ಹಾಸನ, ಚಿಕ್ಕಮಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ ಪುಂಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರಿಸಲಾಗಿದೆ ಎಂದರು.
ಸೆರೆ ಹಿಡಿದ ಆನೆಗಳಿಗೆ ಅಳವಡಿಸಲು ಇಷ್ಟು ದಿನ ವಿದೇಶದಿಂದ ಭಾರವಾದ ರೆಡಿಯೋ ಕಾಲರ್ ಖರೀದಿಸಲಾಗುತ್ತಿತ್ತು. ಈಗ ದೇಶೀಯವಾಗಿ ರೇಡಿಯೋ ಕಾಲರ್ ಅಭಿವೃದ್ಧಿ ಪಡಿಸಲಾಗಿದ್ದು, ಇವುಗಳ ಅಳವಡಿಕೆ ಮಾಡಲಾಗುತ್ತಿದೆ.

ಆನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನಿಗೆ ಬಳ್ಳೆ ಶಿಬಿರದಲ್ಲಿ ಮತ್ತು ಯಸಳೂರು ಬಳಿ ಸ್ಮಾರಕ ನಿರ್ಮಿಸಲು ಕ್ರಮವಹಿಸಲಾಗಿದ್ದು, ಸ್ಮಾರಕ ಸಿದ್ಧವಾಗಿದೆ. ಮುಂದಿನ ತಿಂಗಳು ಇದರ ಲೋಕಾರ್ಪಣೆ ನೆರವೇರಲಿದೆ ಎಂದು ತಿಳಿಸಿದರು.

ಅರಣ್ಯ ಸಂರಕ್ಷಣೆ ಮತ್ತು ವನ್ಯಜೀವಿ ಸಂರಕ್ಷಣೆಗೆ ಹಾಗೂ ರಾಜ್ಯದ ಹಸಿರು ಹೊದಿಕೆ ಹೆಚ್ಚಿಸಲು ಸಿಬ್ಬಂದಿ ಸೇವೆ ಅತಿ ಮುಖ್ಯವಾಗಿದ್ದು, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

22/06/2025 8:51 AM4 Mins Read
vidhana soudha

GOOD NEWS : `ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ನಗದು ರಹಿತ ಚಿಕಿತ್ಸೆಗೆ ‘ಸಂಧ್ಯಾ ಕಿರಣ’ ಯೋಜನೆ ಜಾರಿ.!

22/06/2025 8:27 AM1 Min Read

ಗಮನಿಸಿ : ಕಾನೂನುಬದ್ಧವಾಗಿ ಮನೆಯಲ್ಲಿ ಎಷ್ಟು ‘ಮದ್ಯ’ ಇಟ್ಟುಕೊಳ್ಳಬಹುದು ಗೊತ್ತಾ? ಇಲ್ಲಿದೆ ರಾಜ್ಯವಾರು ‘ಮಿತಿ’ | Liquor Limit

22/06/2025 7:18 AM2 Mins Read
Recent News

BREAKING : ಇರಾನ್ ನ 3 ಪರಮಾಣು ನೆಲೆಗಳ ಮೇಲೆ ಅಮೆರಿಕ ಬಾಂಬ್ ದಾಳಿ : ಡೊನಾಲ್ಡ್ ಟ್ರಂಪ್ ಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಧನ್ಯವಾದ | WATCH VIDEO

22/06/2025 8:56 AM

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

22/06/2025 8:51 AM

ಮತಗಟ್ಟೆಗಳಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡುವುದರಿಂದ ಮತದಾರರಿಗೆ ಅಪಾಯವಾಗಬಹುದು: ಚುನಾವಣಾ ಆಯೋಗ

22/06/2025 8:31 AM
vidhana soudha

GOOD NEWS : `ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ನಗದು ರಹಿತ ಚಿಕಿತ್ಸೆಗೆ ‘ಸಂಧ್ಯಾ ಕಿರಣ’ ಯೋಜನೆ ಜಾರಿ.!

22/06/2025 8:27 AM
State News
KARNATAKA

BIG NEWS : `ಆಸ್ತಿ’ ಖರೀದಿಸುವವರಿಗೆ ಮುಖ್ಯ ಮಾಹಿತಿ : ತಪ್ಪದೇ ಈ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.!

By kannadanewsnow5722/06/2025 8:51 AM KARNATAKA 4 Mins Read

ಬೆಂಗಳೂರು : ಕೆಲವರು ತಮ್ಮ ಜೀವನದುದ್ದಕ್ಕೂ ಗಳಿಸಿದ್ದನ್ನೆಲ್ಲಾ ಆಸ್ತಿ ಖರೀದಿಸಲು ಖರ್ಚು ಮಾಡುತ್ತಾರೆ. ಇದರಲ್ಲಿ ಯಾವುದೇ ಅಕ್ರಮಗಳಿದ್ದರೆ, ಅವರ ಎಲ್ಲಾ…

vidhana soudha

GOOD NEWS : `ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ನಗದು ರಹಿತ ಚಿಕಿತ್ಸೆಗೆ ‘ಸಂಧ್ಯಾ ಕಿರಣ’ ಯೋಜನೆ ಜಾರಿ.!

22/06/2025 8:27 AM

ಗಮನಿಸಿ : ಕಾನೂನುಬದ್ಧವಾಗಿ ಮನೆಯಲ್ಲಿ ಎಷ್ಟು ‘ಮದ್ಯ’ ಇಟ್ಟುಕೊಳ್ಳಬಹುದು ಗೊತ್ತಾ? ಇಲ್ಲಿದೆ ರಾಜ್ಯವಾರು ‘ಮಿತಿ’ | Liquor Limit

22/06/2025 7:18 AM

ALERT : ಈ ಸ್ಥಳಗಳಲ್ಲಿ `ಇನ್ವರ್ಟರ್ ಬ್ಯಾಟರಿ’ ಇಟ್ಟರೆ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

22/06/2025 6:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.