ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರ ನೇಮಕಾತಿಗೆ ( Teacher Recruitment ) ಕಳೆದ ಮೇನಲ್ಲಿ ನಡೆಸಲಾಗಿದ್ದ ಸಿಇಟಿ ಫಲಿತಾಂಶವನ್ನು, ಆಗಸ್ಟ್ ಅಂತ್ಯದೊಳಗೆ ಪ್ರಕಟಿಸಲಾಗುವುದು. ಆಯ್ಕೆ ಪಟ್ಟಿಯನ್ನು ಅಕ್ಟೋಬರ್ ಅಂತ್ಯದ ವೇಳೆಗೆ ಪ್ರಕಟಿಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ತಿಳಿಸಿದ್ದಾರೆ.

BIG NEWS: ಕಾಂಗ್ರೆಸ್ ‘ಕ್ವಿಟ್ ಇಂಡಿಯಾ ಸ್ಮರಣೆ ಕಾರ್ಯಕ್ರಮ’ದಲ್ಲಿ ‘ಟೋಪಿ ಪ್ರಸಂಗ’: ಯಾರಿಗೆ ಯಾರ್ ಟೋಪಿ ಹಾಕಿದ್ರು ಗೊತ್ತಾ.?

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನೇಮಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಅಂತ್ಯದೊಳಗೆ ನೀಡುವ ಗುರಿ ಇದೆ. ಅಕ್ಟೋಬರ್ ಅಂತ್ಯದೊಳಗೆ ನೇಮಕ ಪ್ರಕ್ರಿಯೆಯ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

BIGG NEWS : ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ʻ ಘೋರ ದುರಂತ ʼ : ನೀರಿನಲ್ಲಿ ಕಾರು ಸಮೇತ ʻ ಕೊಚ್ಚಿಹೋದ ವ್ಯಕ್ತಿ ಸಾವುʼ

ಇನ್ನು ನವೆಂಬರ್ 6ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೇ ಪ್ರತಿ ವರ್ಷ ಎರಡು ಬಾರಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಬೇಕಾಗುತ್ತದೆ. ಆದ್ರೇ.. ಈ ವರ್ಷ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ಬರುವ ನವೆಂಬರ್ 6ರಂದು ಒಂದೇ ಟಿಇಟಿ ನಡೆಸಲಾಗುವುದು ಎಂದು ಹೇಳಿದ್ದಾರೆ.

BIGG NEWS : ಉತ್ತರಕನ್ನಡ ಜಿಲ್ಲೆಯಲ್ಲೂ ʻ ಮಳೆಯ ಆರ್ಭಟ ʼ: ಅಣಶಿ ಘಾಟ್‌ನಲ್ಲಿ ʻ ಗುಡ್ಡ ಕುಸಿತ ʼ , ವಾಹನ ಸವಾರರು ಪರದಾಟ

Share.
Exit mobile version