Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ: ಬಿಜೆಪಿ ಸಿ.ಕೆ.ರಾಮಮೂರ್ತಿ

23/12/2025 3:25 PM

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಸಿದ್ಧರಾಮಯ್ಯ ಪೂರ್ವಭಾವಿ ಸಭೆಯ ಹೈಲೈಟ್ಸ್ ಇಲ್ಲಿದೆ

23/12/2025 3:21 PM

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ನೀರಿನ ಟ್ಯಾಂಕರ್ ಗೆ ಆಯಿಲ್ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಸಾವು!

23/12/2025 3:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಸಿದ್ಧರಾಮಯ್ಯ ಪೂರ್ವಭಾವಿ ಸಭೆಯ ಹೈಲೈಟ್ಸ್ ಇಲ್ಲಿದೆ
KARNATAKA

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಸಿದ್ಧರಾಮಯ್ಯ ಪೂರ್ವಭಾವಿ ಸಭೆಯ ಹೈಲೈಟ್ಸ್ ಇಲ್ಲಿದೆ

By kannadanewsnow0923/12/2025 3:21 PM

ಬೆಂಗಳೂರು: 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೂರ್ವ ಭಾವಿ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡೆಸಿದರು. ಅವರ ಸಭೆಯ ಮುಖ್ಯಾಂಶ ಹೈಲೈಟ್ಸ್ ಮುಂದಿದೆ ಓದಿ..

ಇಂದು ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ  ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ ಎಂದರು.

ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ
ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ. ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕಿನ್‌ಗಳಲ್ಲಿ ಚಿತ್ರೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ ಎಂದರು.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ. ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ. ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31, 2025 ಕಡೆಯ ದಿನಾಂಕವಾಗಿರುತ್ತದೆ ಎಂದರು.

17ನೇ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಜಾಜಿನಗರದ ಲುಲು  ಮಾಲ್, ಜೊತೆಗೆ ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಚಲನಚಿತ್ರಗಳ ಪ್ರದರ್ಶನವಿರಲಿದೆ. ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನಗಳಿರಲಿವೆ ಎಂದು ಹೇಳಿದರು.

ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶದ ಅತ್ಯುತ್ತಮ ಚಲನಚಿತ್ರಗಳು 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ. ಕಾನ್ಸ್ (ಫ್ರಾನ್ಸ್), ಬರ್ಲಿನ್ (ಜರ್ಮನಿ, ವೆನಿಸ್ (ಇಟಲಿ), ಕಾರ್ಲೋವಿ ವೇರಿ (ಜೆಕ್‌ ರಿಪಬ್ಲಿಕ್, ಲೊಕಾರ್ನೂ (ಸಿಟ್ಟರ್ಲೆಂಡ್), ರಾಟರ್‌ಡ್ಯಾಮ್ (ನೆದರ್ ಲ್ಯಾಂಡ್), ಬೂಸಾನ್ (ದಕ್ಷಿಣ ಕೂರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಒಂದೇ ಕಡೆ ಸಿನಿಮಾ ಪ್ರಿಯರಿಗೆ ವೀಕ್ಷಿಸಲು ದೊರೆಯಲಿವೆ. ಜೊತೆಗೆ ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶದ ಅತ್ಯುತ್ತಮ ಚಲನಚಿತ್ರಗಳು ಸಹ ನಮ್ಮ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ ಎಂದರು.

ಪೋಲಿಷ್ ಕಲ್ಪರಲ್ ಸೆಂಟರ್, ನವದೆಹಲಿ, ಗೋಥೆ ಇನ್ಸಿಟ್ಯೂಟ್ – ಮ್ಯಾಕ್ಸ್ ಮುಲ್ಲರ್ ಭವನ, ಬೆಂಗಳೂರು, ಅಲಿಯಾನ್ಸ್ ಫ್ರಾಂಸೇ – ಫ್ರೆಂಚ್ ಇನ್ಸಿಟ್ಯೂಟ್ ಹಾಗೂ ರಾಯಲ್ ಥೈಲ್ಯಾಂಡ್ ಕಾನ್ಸುಲೇಟ್‌ನವರು ಅವರ ದೇಶಗಳ ಅತ್ಯುತ್ತಮ ಚಲನಚಿತ್ರಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ನೀಡುತ್ತಿದ್ದಾರೆ. ಹಾಗೆಯೇ ಪೋಲಿಷ್ ಕಲ್ಬರಲ್ ಸೆಂಟರ್ ಸಹಯೋಗದಲ್ಲಿ ಪೊಲೆಂಡ್‌ನ ಖ್ಯಾತ ನಿರ್ದೇಶಕರಾದ ಅಂದ್ರೆ ವಾಜ್ಞಾ ಅವರ ಶತಮಾನೋತ್ಸವ ಸ್ಮರಣಾರ್ಥವಾಗಿ ಅವರ ಆಯ್ದ ಚಲನಚಿತ್ರಗಳ ವಿಶೇಷ ಪುನರಾವಲೋಕನ (Retrospective), ಈ ಬಾರಿ ಚಿತ್ರೋತ್ಸವದಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.

ಇದರೊಂದಿಗೆ ಅಲಿಯಾನ್ಸ್ ಫ್ರಾಂಸೇ ಬೆಂಗಳೂರು ಹಾಗೂ ಫ್ರೆಂಚ್ ಇನ್ಸಿಟ್ಯೂಟ್ ಇನ್ ಇಂಡಿಯಾ ಸಹಯೋಗದಲ್ಲಿ ಆಫ್ರಿಕಾ ಸಿನಿಮಾಗಳ ಇತಿಹಾಸವನ್ನು ದಾಖಲಿಸುವ ವಿಶೇಷ ಚಲನಚಿತ್ರಗಳ ಸರಣಿಯನ್ನೂ ಈ ವರ್ಷದ ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುತ್ತಿದೆ. ಈ ಬಾರಿ ಚಿತ್ರೋತ್ಸವದ ಫಿಲಂ ಅಕಾಡೆಮಿಕ್ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಲು ಅನುಕೂಲವಾಗುವಂತೆ ಚಿತ್ರೋತ್ಸವದ ಪ್ರಧಾನ ಕೇಂದ್ರದಲ್ಲಿ ವಿಶೇಷ ವೇದಿಕೆ ಇರಲಿದೆ ಎಂದರು.

ಇದೇ ವೇದಿಕೆಯ ಆವರಣದಲ್ಲಿ 91 ವರ್ಷಗಳ ವರ್ಣ ರಂಜಿತ, ಸ್ಮರಣೀಯ ಸಿನಿಮಾ ಸಂಸ್ಕೃತಿಯ ಇತಿಹಾಸವಿರುವ ಕನ್ನಡ ಚಿತ್ರರಂಗದ ಮೈಲಿಗಲ್ಲುಗಳನ್ನು ಬಿಂಬಿಸುವ ವೈವಿಧ್ಯಮಯ ಛಾಯಾಚಿತ್ರ ಪ್ರದರ್ಶನವನ್ನು ಸಹ ಏರ್ಪಡಿಸಲಾಗುತ್ತದೆ. 2025-26 ನೇರ ಸಾಲಿನ 17ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಏರ್ಪಡಿಸಲು  ರೂ.‌ 7ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದೆ. ಸಮಾರೋಪ ಸಮಾರಂಭ ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, ವಾರ್ತಾ ಇಲಾಖೆಯ ಕಾರ್ಯದರ್ಶಿ ಬಿ ಬಿ ಕಾವೇರಿ, ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಅಕಾಡೆಮಿ ಸದಸ್ಯರು, ಸಂಘಟನಾ ಸಮಿತಿ ಸದಸ್ಯರು , ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಉಪಸ್ಥಿತರಿದ್ದರು.

Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಇಂದು ಒಂದೇ ದಿನ 2,400 ರೂ ಹೆಚ್ಚಳ! ಈ ವರ್ಷದ ಗರಿಷ್ಠ ದರ ದಾಖಲು

Share. Facebook Twitter LinkedIn WhatsApp Email

Related Posts

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ: ಬಿಜೆಪಿ ಸಿ.ಕೆ.ರಾಮಮೂರ್ತಿ

23/12/2025 3:25 PM2 Mins Read

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ನೀರಿನ ಟ್ಯಾಂಕರ್ ಗೆ ಆಯಿಲ್ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಸಾವು!

23/12/2025 3:20 PM1 Min Read

31-12-2025 ಬುಧವಾರದಂದು ವೈಕುಂಠ ಏಕಾದಶಿ: ಇಲ್ಲಿದೆ ವಿಶೇಷತೆ

23/12/2025 3:10 PM5 Mins Read
Recent News

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ: ಬಿಜೆಪಿ ಸಿ.ಕೆ.ರಾಮಮೂರ್ತಿ

23/12/2025 3:25 PM

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಸಿದ್ಧರಾಮಯ್ಯ ಪೂರ್ವಭಾವಿ ಸಭೆಯ ಹೈಲೈಟ್ಸ್ ಇಲ್ಲಿದೆ

23/12/2025 3:21 PM

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ನೀರಿನ ಟ್ಯಾಂಕರ್ ಗೆ ಆಯಿಲ್ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಸಾವು!

23/12/2025 3:20 PM

31-12-2025 ಬುಧವಾರದಂದು ವೈಕುಂಠ ಏಕಾದಶಿ: ಇಲ್ಲಿದೆ ವಿಶೇಷತೆ

23/12/2025 3:10 PM
State News
KARNATAKA

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ: ಬಿಜೆಪಿ ಸಿ.ಕೆ.ರಾಮಮೂರ್ತಿ

By kannadanewsnow0923/12/2025 3:25 PM KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು…

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಸಿದ್ಧರಾಮಯ್ಯ ಪೂರ್ವಭಾವಿ ಸಭೆಯ ಹೈಲೈಟ್ಸ್ ಇಲ್ಲಿದೆ

23/12/2025 3:21 PM

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ನೀರಿನ ಟ್ಯಾಂಕರ್ ಗೆ ಆಯಿಲ್ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಸಾವು!

23/12/2025 3:20 PM

31-12-2025 ಬುಧವಾರದಂದು ವೈಕುಂಠ ಏಕಾದಶಿ: ಇಲ್ಲಿದೆ ವಿಶೇಷತೆ

23/12/2025 3:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.