Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ‘ಲೈಂಗಿಕ ಕಿರುಕುಳ ತಡೆ’ಗೆ ಮಹತ್ವದ ಕ್ರಮ

04/08/2025 6:42 AM

SHOCKING : ರಾಜ್ಯದಲ್ಲಿ ಒಂದೇ ವಾರದಲ್ಲಿ 10,000 ಜನರಿಗೆ `ನಾಯಿ ಕಡಿತ’ : 23 ಮಂದಿ ಸಾವು.!

04/08/2025 6:41 AM

BIG NEWS : ಸರ್ಕಾರಿ ಕಚೇರಿಗಳಲ್ಲಿ `ಹಿರಿಯ ನಾಗರಿಕರನ್ನು ನಿರ್ಲಕ್ಷಿಸಿದರೆ ಕಠಿಣ ಕ್ರಮ : ಸರ್ಕಾರದಿಂದ ಮಹತ್ವದ ಆದೇಶ

04/08/2025 6:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಧಾನಸಭೆಯಿಂದ 18 ಬಿಜೆಪಿ ಶಾಸಕರ ಅಮಾನತು ವಿಚಾರ: ರಾಜ್ಯಪಾಲರಿಗೆ ದೂರು
KARNATAKA

ವಿಧಾನಸಭೆಯಿಂದ 18 ಬಿಜೆಪಿ ಶಾಸಕರ ಅಮಾನತು ವಿಚಾರ: ರಾಜ್ಯಪಾಲರಿಗೆ ದೂರು

By kannadanewsnow0921/04/2025 2:14 PM

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸುವ ಕುರಿತ ಗೌರವಾನ್ವಿತ ಸ್ಪೀಕರ್ ಅವರ ನಿರ್ಧಾರವು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಆಡಳಿತ ಪಕ್ಷದ ಹಿರಿಯ ಸಚಿವರಾದ ರಾಜಣ್ಣ ಅವರು ಸದನದ ಒಳಗೆ ಬಂದು ಅಂಗಲಾಚಿದ್ದಾರೆ. ಹನಿಟ್ರ್ಯಾಪ್ ಗೆ ಒಳಗಾಗಿದ್ದೇನೆ; ರಾಜ್ಯ ಹಾಗೂ ದೇಶದ 48ಕ್ಕೂ ಹೆಚ್ಚು ರಾಜಕಾರಣಿಗಳು ಹನಿಟ್ರ್ಯಾಪ್‍ಗೆ ಒಳಗಾಗಿದ್ದಾರೆ ಎಂದು ಬಹಿರಂಗವಾಗಿ ಸದನದಲ್ಲಿ ತಿಳಿಸಿದ ಸಂದರ್ಭದಲ್ಲಿ ಆ ಸಚಿವರಿಗೆ ರಕ್ಷಣೆ ಕೊಡುವ ಕರ್ತವ್ಯ ಸಭಾನಾಯಕರಾದ ಮುಖ್ಯಮಂತ್ರಿಗಳದು; ಅದೇ ರೀತಿ ಮಾನ್ಯ ಸಭಾಪತಿಗಳದ್ದು ಎಂದರು.

ಸದನದ 224 ಶಾಸಕರ ಮೇಲೂ ಕಳಂಕ ಬಂದಿದೆ. ಈ 224 ಶಾಸಕರಿಗೆ ರಕ್ಷಣೆ ಕೊಡುವ ಸ್ಥಾನದಲ್ಲಿ ಸಭಾಧ್ಯಕ್ಷರು ಕುಳಿತಿದ್ದಾರೆ. ನಮಗೆ ರಕ್ಷಣೆ ಕೊಡಿ ಎಂದು ವಿಪಕ್ಷವಾಗಿ ನಾವು ಸಚಿವರ ಪರವಾಗಿ ಹೋರಾಟ ಮಾಡಿದರೆ ನಮ್ಮನ್ನು ಕತ್ತು ಹಿಡಿದು ಹೊರದಬ್ಬುವ ಕೆಲಸ ಮಾಡಿದ್ದು ಇದು ಖಂಡಿತ ಸರಿಯಲ್ಲ ಎಂದು ಖಂಡಿಸಿದರು.

ಮುಖ್ಯಮಂತ್ರಿಗಳು ರಕ್ಷಣೆಯ ಹೊಣೆಗಾರಿಕೆ ವಹಿಸಬೇಕಿತ್ತು. ನೀವೇ ಸಚಿವರ ರಕ್ಷಣೆಗೆ ಬರಬೇಕಿತ್ತು. ರಕ್ಷಣೆ ವಿಚಾರಕ್ಕೆ ಪ್ರತಿಭಟನೆ ಮಾಡಿದರೆ ನಮ್ಮ ಶಾಸಕರನ್ನು ಎತ್ತಿ ಹಾಕುವ ಕೆಲಸ ಮಾಡಿದ್ದಾರೆ. ಇದು ಖಂಡಿತ ಸರಿಯಲ್ಲ ಎಂದು ಆಕ್ಷೇಪಿಸಿದರು.

ದೇಶದ ಮುಂದೆ ಶಾಸಕರ ಗೌರವ ಹರಾಜಾಗುವಂತಾಗಿದೆ. ಅಧಿಕಾರದ ಮದ ಎಲ್ಲಿಗೆ ಬಂದಿದೆ ಎಂದರೆ ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದ್ದು, ಇದರ ಪರಿಣಾಮವಾಗಿ ಸಚಿವರು, ಶಾಸಕರನ್ನು ಬೀದಿಗೆ ತರುವ ಕೆಲಸವನ್ನು ಆಡಳಿತ ಪಕ್ಷದವರು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ದಲಿತ, ಪರಿಶಿಷ್ಟ ಪಂಗಡದ ಸೇರಿದ ಸಚಿವರ ಮಾನ ಹರಾಜಾಗುವ ಕೆಲಸ ನಡೆದಿದ್ದು, ಅವರ ರಕ್ಷಣೆಗೆ ಬರುವ ತಾಕತ್ತಿಲ್ಲವೇ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದರು. ಹಿಂದೆ ಇವರೇ ಮುಖ್ಯಮಂತ್ರಿ ಆಗಿದ್ದಾಗ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಮನೆಗೆ ಮುಸ್ಲಿಂ ಪುಡಾರಿಗಳು ಬೆಂಕಿ ಹಚ್ಚಿದ್ದರು. ಆದರೆ, ಆ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ರಕ್ಷಣೆಗೆ ಅಂದಿನ ಮುಖ್ಯಮಂತ್ರಿಗಳು ಬಂದಿರಲಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅದೇ ರೀತಿ ಮತ್ತೊಮ್ಮೆ ಪುನರಾವರ್ತನೆಯಾಗಿದೆ. ದಲಿತರ ಬಗ್ಗೆಯೂ ಕಾಳಜಿ ಇಲ್ಲ; ಪರಿಶಿಷ್ಟ ಪಂಗಡದವರ ಬಗ್ಗೆ ಕಾಳಜಿ ಇಲ್ಲ. ಕೇವಲ ಮುಸಲ್ಮಾನರ ಹಿಂದೆ ಹೊರಟ ಮುಖ್ಯಮಂತ್ರಿಗಳು ಸದನದಲ್ಲಿ ಶಾಸಕರು, ಸಚಿವರ ರಕ್ಷಣೆಗೆ ಬರುತ್ತಿಲ್ಲವೆಂದಾದರೆ ಇಂಥ ಮುಖ್ಯಮಂತ್ರಿಗಳು ಆ ಸ್ಥಾನದಲ್ಲಿ ಮುಂದುವರಿಯಬೇಕೇ ಎಂದು ಯೋಚಿಸಬೇಕು ಎಂದರು.

ನಿನ್ನೆ ದಿನ ಸದನ ನಡೆಯುವ ಸಂದರ್ಭದಲ್ಲಿ ಯಾರು ಚೀಟಿ ಕೊಟ್ಟರು? ಎಲ್ಲವೂ ತನಿಖೆ ಮಾಡಲಿ. ಬಿಜೆಪಿ- ಜೆಡಿಎಸ್ ಪಕ್ಷಗಳು ಈ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಖಂಡಿಸುತ್ತೇವೆ. ಅಲ್ಲದೆ ಗೌರವಾನ್ವಿತ ರಾಜ್ಯಪಾಲರನ್ನೂ ಭೇಟಿ ಮಾಡುತ್ತೇವೆ ಎಂದು ಪ್ರಕಟಿಸಿದರು.

ಆಡಳಿತ ಪಕ್ಷದ ಸಚಿವರ ರಕ್ಷಣೆಗೆ ಬಾರದ ಮುಖ್ಯಮಂತ್ರಿಗಳ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಮುಖ್ಯಮಂತ್ರಿಗಳ ನಡೆಯೂ ಪ್ರಶ್ನಾರ್ಹ ಎಂದು ಅವರು ತಿಳಿಸಿದರು. ಕರ್ನಾಟಕದ ಸಚಿವರ ಹನಿಟ್ರ್ಯಾಪ್ ಕುರಿತ ಹೇಳಿಕೆ ದೇಶವ್ಯಾಪಿ ಚರ್ಚೆಗೆ ಒಳಪಡುತ್ತಿದೆ ಎಂದು ವಿವರಿಸಿದರು.

ನಡೆದಿರುವುದು ಸತ್ಯ ಎಂದು ಸತೀಶ್ ಜಾರಕಿಹೊಳಿ ಅವರೂ ಹೇಳಿಕೆ ಕೊಟ್ಟಿದ್ದಾರೆ. ಹನಿಟ್ರ್ಯಾಪ್ ಮಾಡಿದ ಶಾಸಕರು, ಸಚಿವರ ಹೆಸರು ಬಹಿರಂಗಪಡಿಸಲು ಮುಖ್ಯಮಂತ್ರಿಗಳು ಸೂಚಿಸಬೇಕಿತ್ತು. ತನಿಖೆಗೆ ಆದೇಶಿಸುವುದಾಗಿ ಹೇಳುವ ಧೈರ್ಯ ತೋರಿಸಬೇಕಿತ್ತು ಎಂದು ಸವಾಲು ಹಾಕಿದರು. ಮುಖ್ಯಮಂತ್ರಿಗಳು ಆ ಧೈರ್ಯ ತೋರಿಲ್ಲ ಎಂದು ಟೀಕಿಸಿದರು.

ರಾಜ್ಯದ ಜನರ ಮುಂದೆ ಮುಖ್ಯಮಂತ್ರಿಗಳ ಬಂಡವಾಳ ಬಯಲಾಗಿದೆ. ಕಾಂಗ್ರೆಸ್ ಪಕ್ಷವು ರಾಜ್ಯದ ಜನರ ಮುಂದೆ ಬೆತ್ತಲಾಗಿದೆ ಎಂದು ತಿಳಿಸಿದರು. ರಾಜ್ಯದ ತೆರಿಗೆ ಹಣವನ್ನು ಒಂದು ಧರ್ಮಕ್ಕೆ ಸೀಮಿತವಾಗಿ ಹಂಚುವುದಾದರೆ ಇದನ್ನು ನೋಡಿಕೊಂಡು ಸುಮ್ಮನೆ ಕೂರಬೇಕೇ ಎಂದು ಕೇಳಿದರು.

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ‘ಲೈಂಗಿಕ ಕಿರುಕುಳ ತಡೆ’ಗೆ ಮಹತ್ವದ ಕ್ರಮ

04/08/2025 6:42 AM2 Mins Read

SHOCKING : ರಾಜ್ಯದಲ್ಲಿ ಒಂದೇ ವಾರದಲ್ಲಿ 10,000 ಜನರಿಗೆ `ನಾಯಿ ಕಡಿತ’ : 23 ಮಂದಿ ಸಾವು.!

04/08/2025 6:41 AM1 Min Read

BIG NEWS : ಸರ್ಕಾರಿ ಕಚೇರಿಗಳಲ್ಲಿ `ಹಿರಿಯ ನಾಗರಿಕರನ್ನು ನಿರ್ಲಕ್ಷಿಸಿದರೆ ಕಠಿಣ ಕ್ರಮ : ಸರ್ಕಾರದಿಂದ ಮಹತ್ವದ ಆದೇಶ

04/08/2025 6:39 AM1 Min Read
Recent News

BIG NEWS: ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ‘ಲೈಂಗಿಕ ಕಿರುಕುಳ ತಡೆ’ಗೆ ಮಹತ್ವದ ಕ್ರಮ

04/08/2025 6:42 AM

SHOCKING : ರಾಜ್ಯದಲ್ಲಿ ಒಂದೇ ವಾರದಲ್ಲಿ 10,000 ಜನರಿಗೆ `ನಾಯಿ ಕಡಿತ’ : 23 ಮಂದಿ ಸಾವು.!

04/08/2025 6:41 AM

BIG NEWS : ಸರ್ಕಾರಿ ಕಚೇರಿಗಳಲ್ಲಿ `ಹಿರಿಯ ನಾಗರಿಕರನ್ನು ನಿರ್ಲಕ್ಷಿಸಿದರೆ ಕಠಿಣ ಕ್ರಮ : ಸರ್ಕಾರದಿಂದ ಮಹತ್ವದ ಆದೇಶ

04/08/2025 6:39 AM

BREAKING: ಯೆಮೆನ್ ನಲ್ಲಿ ದೋಣಿ ಮುಳುಗಿ 68 ನಿರಾಶ್ರಿತರು, ವಲಸಿಗರು ಸಾವು

04/08/2025 6:39 AM
State News
KARNATAKA

BIG NEWS: ರಾಜ್ಯ ಸರ್ಕಾರದಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ‘ಲೈಂಗಿಕ ಕಿರುಕುಳ ತಡೆ’ಗೆ ಮಹತ್ವದ ಕ್ರಮ

By kannadanewsnow0904/08/2025 6:42 AM KARNATAKA 2 Mins Read

ಬೆಂಗಳೂರು: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ 2013ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ರಾಜ್ಯ…

SHOCKING : ರಾಜ್ಯದಲ್ಲಿ ಒಂದೇ ವಾರದಲ್ಲಿ 10,000 ಜನರಿಗೆ `ನಾಯಿ ಕಡಿತ’ : 23 ಮಂದಿ ಸಾವು.!

04/08/2025 6:41 AM

BIG NEWS : ಸರ್ಕಾರಿ ಕಚೇರಿಗಳಲ್ಲಿ `ಹಿರಿಯ ನಾಗರಿಕರನ್ನು ನಿರ್ಲಕ್ಷಿಸಿದರೆ ಕಠಿಣ ಕ್ರಮ : ಸರ್ಕಾರದಿಂದ ಮಹತ್ವದ ಆದೇಶ

04/08/2025 6:39 AM

‘ಇ-ಪೌತಿ’ ಆಂದೋಲನದ ಮೂಲಕ ವಾರಸುದಾರರ ಹೆಸರಿಗೆ ‘ಉಚಿತ ಪಹಣಿ’ ಪತ್ರ : ಈ ದಾಖಲೆಗಳು ಕಡ್ಡಾಯ.!

04/08/2025 6:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.