ಛತ್ತೀಸ್ಗಢ : ಟ್ರಕ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಜಿಲ್ಲಾ ಮೀಸಲು ಗಾರ್ಡ್ಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.
ಜವಾನರು ನಕ್ಸಲೀಯರ ವಿರುದ್ಧ ಕಾರ್ಯಾಚರಣೆಗಾಗಿ ಛತ್ತೀಸ್ಗಢದ ದಾಂತೇವಾಡ ಜಿಲ್ಲೆಯ ದಕ್ಷಿಣ ಬಸ್ತಾರ್ನ ಕೊಂಟಾ ತಹಸಿಲ್ನ ಎಲ್ಮಗುಂದ ಗ್ರಾಮಕ್ಕೆ ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಜವಾನರು ಮನೆಗೆ ತೆರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಬೈಕ್ ಟ್ರಕ್ಗೆ ಡಿಕ್ಕಿ ಹೊಡೆದಿದೆ.
ಮಾಹಿತಿ ಪಡೆದ ತಕ್ಷಣ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವ್ಹಾಣ್ ಮತ್ತು ಉಪವಿಭಾಗದ ಪೊಲೀಸ್ ಅಧಿಕಾರಿ ಪರಮೇಶ್ವರ ತಿಲಕ್ವಾರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಟ್ರಕ್ ಚಾಲಕನ ಅಜಾಗರೂತೆಯಿಂದ ಘಟನೆ ನಡೆದಿದ್ದು, ಘಟನೆ ಬಳಿಕ ಚಾಲಕ ಹಾಗೂ ಸಹಾಯ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ.