Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಟೆಕ್ಸಾಸ್’ ನಲ್ಲಿ ಭೀಕರ ಪ್ರವಾಹಕ್ಕೆ ಬೇಸಿಗೆ ಶಿಬಿರದಲ್ಲಿದ್ದ 24 ಯುವತಿಯರು ಬಲಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

05/07/2025 10:36 AM

ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆ :ಇಂದು ಉದ್ಧವ್ ಠಾಕ್ರೆ, ರಾಜ್ ಠಾಕ್ರೆ ಜಂಟಿ ಪ್ರತಿಭಟನೆ

05/07/2025 10:30 AM

BIG NEWS : ತೋಟದ ಮನೆಯಲ್ಲಿ ಗೃಹಿಣಿ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಹತ್ಯೆಗೈದು ಡ್ರಾಮಾ ಮಾಡಿದ್ದ ಪತಿ ಅರೆಸ್ಟ್!

05/07/2025 10:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು : ಸತತ 13 ಗಂಟೆಗಳ ಕಾರ್ಯಾಚರಣೆ, ಬದುಕಿ ಬರಲೆಂದು ಕರುನಾಡು ಪ್ರಾರ್ಥನೆ
KARNATAKA

ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು : ಸತತ 13 ಗಂಟೆಗಳ ಕಾರ್ಯಾಚರಣೆ, ಬದುಕಿ ಬರಲೆಂದು ಕರುನಾಡು ಪ್ರಾರ್ಥನೆ

By kannadanewsnow0504/04/2024 7:43 AM

ವಿಜಯಪುರ : ಆಟವಾಡುತ್ತಾ ಆಯತಪ್ಪಿ ಕೊಳವೆ ಬಾವಿಗೆ ಎರಡು ವರ್ಷದ ಬಾಲಕ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಕ್ಷಣ ಗ್ರಾಮದಲ್ಲಿ ನಡೆದಿದ್ದು, ಇದೀಗ ಬಾಲಕನ ರಕ್ಷಣೆಗೆ 13 ಗಂಟೆಗಳ ಕಾಲ ರಚನಾ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ ಆದರೆ ಈ ವೇಳೆ ಮಗುವಿನ ರಕ್ಷಣೆಗೆ ಕೇವಲ ಒಂದು ಅಡಿ ಬಾಕಿ ಉಳಿದಿದ್ದು ಕಲ್ಲು ಬಂಡೆ ಅಡ್ಡಲಾಗಿದ್ದು ಮಗುವಿನ ರಕ್ಷಣೆಗೆ ವಿಳಂಬವಾಗುತ್ತಿದೆ.

SDRF, ಅಗ್ನಿ ಶಾಮಕದಳ ಸತತ ಕಾರ್ಯಾಚರಣೆ

ನಿನ್ನೆ ಗ್ರಾಮದ ಶಂಕರಪ್ಪ ಮುಜಗೊಂಡ ಎನ್ನುವವರ ಜಮೀನಿನಲ್ಲಿ ಕೊಳವೆ ಬಾವಿಯಲ್ಲಿ ಎರಡು ವರ್ಷದ ಬಾಲಕ ಸಾತ್ವಿಕ್ ಸುಮಾರು 15ರಿಂದ 20 ಅಡಿ ಆಳದಲ್ಲಿ ಬಿದ್ದಿದ್ದಾನೆ ಎಂದು ತಿಳಿದುಬಂದಿದ್ದು ಇದೀಗ ಸ್ಥಳದಲ್ಲಿ ಎರಡು ಹಿಟಾಚಿ ಮೂರು ಜಿಸಿಬಿ ಗಳಿಂದ ಸಾತ್ವಿಕನ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದು ಅಲ್ಲದೆ ಎಸ್ ಡಿ ಆರ್ ಎಫ್ ತಂಡ ಕೂಡ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಅಲ್ಲದೆ ಇಂಡಿ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕೂಡ ಸ್ಥಳದಲ್ಲಿ ಕಾರ್ಯಚರಣೆಯಲ್ಲಿ ನಿರ್ತರಾಗಿದ್ದಾರೆ.

ಕಾರ್ಯಾಚರಣೆ ವೇಳೆ ಮಗುವಿನ ರಕ್ಷಣಾ ಕಾರ್ಯಕ್ಷಣೆಗೆ ಈ ವೇಳೆ ಕಲ್ಲುಬಂಡೆ ಅಡ್ಡಿಯಾಗಿದ್ದು ಬಂಡೆ ಸಿಕ್ಕಿದ್ದರಿಂದ ರಕ್ಷಣಾ ವಿಳಂಬವಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಕಲ್ಲು ಬಂಡೆ ಅಡ್ಡಿಯಾಗಿ ಇರುವುದರಿಂದ ಇದೀಗ ಸಿಬ್ಬಂದಿಗಳು ಕೈಯಿಂದ ನೆಲ ಆಗೇಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

NDRF ಎಂಟ್ರಿ

ಸತತವಾಗಿ 12 ಗಂಟೆಗಳ ಕಾಲ ಬಾಲಕ ಸಾತ್ವಿಕರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು ಇದೀಗ ಎಂದು ಬಳಿಗೆ ಹೈದರಾಬಾದಿನ ಎಂದ ಎನ್ ಡಿ ಆರ್ ಎಫ್ ತಂಡ ಎಂಟ್ರಿ ಆಗಿದೆ. ರಕ್ಷಣೆಗೆ ಬೇಕಾದ ಎಲ್ಲಾ ಸಕಲ ಸಾಮಗ್ರಿಗಳು ಒಂದಿಗೆ ಎನ್ ಡಿ ಆರ್ ಎಫ್ ತಂಡ ಎಂಟ್ರಿ ಆಗಿದ್ದು ಬಹುತೇಕ ಮಗುವಿನ ರಕ್ಷಣೆ ಯಶಸ್ವಿಯಾಗಲಿದೆ ಎಂದು ಹೇಳಲಾಗುತ್ತಿದೆ.

ದೇವಸ್ಥಾನದಲ್ಲಿ ವಿಶೇಷ ಪೂಜೆ

ಇನ್ನೂ ಕೊಳವೆ ಬಾವಿಯಲ್ಲಿ ಬಿದ್ದಿರುವ ಎರಡು ವರ್ಷದ ಬಾಲಕ ಜೀವಂತವಾಗಿ ಹೊರಬರಲೆಂದು ಲಕ್ಷಣ ಗ್ರಾಮದಲ್ಲಿ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಾಮದ ಯುವಕರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ ಅಲ್ಲದೆ ಇಡೀ ಕರುನಾಡಿನ ಜನತೆಯ ಕೂಡ ಸಾತ್ವಿಕ್ ಸಾವನ್ನು ಗೆದ್ದು ಬರಲಿ ಎಂದು ಪ್ರಾರ್ಥಿಸುತ್ತಿದ್ದಾರೆ.ಅಲ್ಲದೆ ಸ್ಥಳದಲ್ಲಿ ಆರೋಗ್ಯ ಅಧಿಕಾರಿಗಳು ಹಾಗೂ ವೈದ್ಯರು ಸಹ ಭೇಟಿ ನೀಡಿದ್ದು ಮಗುವನ್ನು ರಕ್ಷಣೆ ಮಾಡಿ ತಕ್ಷಣ ಯಾವ ರೀತಿಯಾಗಿ ಮಗುಗೆ ಚಿಕಿತ್ಸೆ ನೀಡಬೇಕು ಹಾಗೂ ಮಗು ಸುಧಾರಿಸಿಕೊಳ್ಳಲು ಎಲ್ಲ ರೀತಿಯಿಂದ ತಯಾರಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಜಿಲ್ಲೆಯಲ್ಲಿ ಇದು 3ನೇ ಪ್ರಕರಣ

ಇಂದಿನ ಪ್ರಕರಣಕ್ಕೂ ಮುಂಚೆ ಇಂತಹ ಎರಡು ಪ್ರಕರಣಗಳು ವಿಜಯಪುರ ಜಿಲ್ಲೆಯಲ್ಲಿ ನಡೆದಿದ್ದವು. 2008 ಮತ್ತು 2014ರಲ್ಲಿಕೊಳವೆ ಬಾವಿ ದುರಂತಗಳು ಸಂಭವಿಸಿದ್ದವು. 2008 ರಲ್ಲಿ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಕಾಂಚನಾ ಉರ್ಪ್ ಏಗವ್ವ ಎನ್ನುವ ಬಾಲಕಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಳು. ಜೆಸಿಬಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಆದ್ರೆ, ಮಗು ಮೃತಪಟ್ಟಿತ್ತು.

ಬಳಿಕ ಇಂಥದ್ದೇ ಘಟನೆ 2014 ರಲ್ಲಿ ವಿಜಯಪುರ ತಾಲೂಕಿನ ದ್ಯಾಬೇರಿ ಗ್ರಾಮದಲ್ಲಿ ನಡೆದಿತ್ತು. ಆಟವಾಡುವ ವೇಳೆ 3 ವರ್ಷದ ಬಾಲಕಿ ಅಕ್ಷತಾ ಹನುಮಂತ ಪಾಟೀಲ್ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಳು. ಅಕ್ಷತಾ ರಕ್ಷಣಾ ಕಾರಾಚರಣೆ ನಡೆದರೂ ಫಲ ಸಿಕ್ಕಿರಲಿಲ್ಲ. ಜೆಸಿಬಿಗಳ ಮೂಲಕ ಕಾರ್ಯಾಚರಣೆ ನಡೆಸಿದ್ದರೂ ಅಕ್ಷತಾ ಬದುಕಿ ಬರಲಿಲ್ಲ. ಇದು ಇದೀಗ ಜಿಲ್ಲೆಯಲ್ಲಿ ಮೂರನೇ ಪ್ರಕರಣವಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : ತೋಟದ ಮನೆಯಲ್ಲಿ ಗೃಹಿಣಿ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಹತ್ಯೆಗೈದು ಡ್ರಾಮಾ ಮಾಡಿದ್ದ ಪತಿ ಅರೆಸ್ಟ್!

05/07/2025 10:30 AM1 Min Read

BIG NEWS : ವೀರಶೈವ ಜಂಗಮರು ಬೇಡ ಜಂಗಮರಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

05/07/2025 10:27 AM1 Min Read

SHOCKING : ಭಾರತದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ : ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

05/07/2025 10:16 AM2 Mins Read
Recent News

BREAKING : ‘ಟೆಕ್ಸಾಸ್’ ನಲ್ಲಿ ಭೀಕರ ಪ್ರವಾಹಕ್ಕೆ ಬೇಸಿಗೆ ಶಿಬಿರದಲ್ಲಿದ್ದ 24 ಯುವತಿಯರು ಬಲಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

05/07/2025 10:36 AM

ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆ :ಇಂದು ಉದ್ಧವ್ ಠಾಕ್ರೆ, ರಾಜ್ ಠಾಕ್ರೆ ಜಂಟಿ ಪ್ರತಿಭಟನೆ

05/07/2025 10:30 AM

BIG NEWS : ತೋಟದ ಮನೆಯಲ್ಲಿ ಗೃಹಿಣಿ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಹತ್ಯೆಗೈದು ಡ್ರಾಮಾ ಮಾಡಿದ್ದ ಪತಿ ಅರೆಸ್ಟ್!

05/07/2025 10:30 AM

BIG NEWS : ವೀರಶೈವ ಜಂಗಮರು ಬೇಡ ಜಂಗಮರಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

05/07/2025 10:27 AM
State News
KARNATAKA

BIG NEWS : ತೋಟದ ಮನೆಯಲ್ಲಿ ಗೃಹಿಣಿ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಹತ್ಯೆಗೈದು ಡ್ರಾಮಾ ಮಾಡಿದ್ದ ಪತಿ ಅರೆಸ್ಟ್!

By kannadanewsnow0505/07/2025 10:30 AM KARNATAKA 1 Min Read

ಚಾಮರಾಜನಗರ : ತೋಟದ ಮನೆಯಲ್ಲಿ ಗೃಹಿಣಿ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಚಾಮರಾಜನಗರ ತಾಲೂಕಿನ ಡೋಲ್ಲಿಪುರ ಬಳಿ ಶುಭಾ…

BIG NEWS : ವೀರಶೈವ ಜಂಗಮರು ಬೇಡ ಜಂಗಮರಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

05/07/2025 10:27 AM

SHOCKING : ಭಾರತದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ : ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

05/07/2025 10:16 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕುಸುಮ್-ಬಿ’ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅಳವಡಿಕೆ.!

05/07/2025 10:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.