ರಾಯಚೂರು : ಚಾಮರಾಜನಗರದಲ್ಲಿ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ನಾನು ರಾಜಕೀಯದ ಕೊನೆಗಾಲದಲ್ಲಿದ್ದೇನೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಸಚಿವ ಎನ್.ಎಸ್ ಬೋಸರಾಜು,78 ವರ್ಷ ವಯಸ್ಸಾಗುತ್ತಿದೆ ಎನ್ನುವ ಕಾರಣಕ್ಕೆ ರಾಜಕೀಯ ಕೊನೇ ಹಂತ ತಲುಪಿದ್ದೇನೆ ಎಂದು ಹೇಳಿದ್ದಾರೆ ಅಷ್ಟೇ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯುತ್ತದೆ ಎಂದು ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಜಕೀಯ ಬಿಡಲ್ಲ. 78 ವರ್ಷ ವಯಸ್ಸಾಗುತ್ತಿದೆ ಎನ್ನುವ ಕಾರಣಕ್ಕೆ ರಾಜಕೀಯ ಕೊನೇ ಹಂತ ತಲುಪಿದ್ದೇನೆ ಎಂದು ಹೇಳಿದ್ದಾರೆ ಅಷ್ಟೇ.ಪವರ್ ಶೇರಿಂಗ್ ವಿಚಾರ ಆವತ್ತು ಇಲ್ಲ, ಇವತ್ತೂ ಬಂದಿಲ್ಲ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯುತ್ತದೆ ಎಂದು ಹೇಳಿದರು.
ಯಾರು ರಾಜಕಾರಣದಲ್ಲಿ ಜನರ ಪ್ರೀತಿ ವಿಶ್ವಾಸ ಹೊಂದಿರುತ್ತಾರೋ, ಪಕ್ಷ, ಜನರ ಅಭಿಪ್ರಾಯದ ಮೇಲೆ ಹಾಗೂ ಸರ್ವೇ ಮೇಲೆ ನಡೆಯುತ್ತದೆ. ಸಿಎಂ ಬದಲಾಗಲ್ಲ, ಎಲ್ಲರೂ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಅಂತಹ ಯಾವುದೇ ಪ್ರಸಂಗ ಬಂದಿಲ್ಲ. ಯಾವುದೇ ಸಮಸ್ಯೆಯಿಲ್ಲ, ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು.