Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘NPS, UPS, ಅಟಲ್ ಪಿಂಚಣಿ’ ಯೋಜನೆಗಳ ನಿಯಮಗಳಲ್ಲಿ ಪ್ರಮುಖ ಬದಲಾವಣೆ ; ತಕ್ಷಣದಿಂದ ಅನ್ವಯ!

12/12/2025 2:54 PM

GOOD NEWS: ಮುಂಗಾರು ಹಂಗಾಮಿನಲ್ಲಿ 14.21 ಲಕ್ಷ ರೈತರಿಗೆ 2,249 ಕೋಟಿ ಪರಿಹಾರ ಜಮೆ: ಸಚಿವ ಕೃಷ್ಣ ಬೈರೇಗೌಡ

12/12/2025 2:54 PM

BREAKING : ಪವನ್ ಕಲ್ಯಾಣ್ ಕುರಿತ ಆಕ್ಷೇಪಾರ್ಹ ವಿಷಯ ತೆಗೆದುಹಾಕಿ ; ‘ಸೋಷಿಯಲ್ ಮೀಡಿಯಾ’ಗಳಿಗೆ ಹೈಕೋರ್ಟ್ ಸೂಚನೆ

12/12/2025 2:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಮುಂಗಾರು ಹಂಗಾಮಿನಲ್ಲಿ 14.21 ಲಕ್ಷ ರೈತರಿಗೆ 2,249 ಕೋಟಿ ಪರಿಹಾರ ಜಮೆ: ಸಚಿವ ಕೃಷ್ಣ ಬೈರೇಗೌಡ
KARNATAKA

GOOD NEWS: ಮುಂಗಾರು ಹಂಗಾಮಿನಲ್ಲಿ 14.21 ಲಕ್ಷ ರೈತರಿಗೆ 2,249 ಕೋಟಿ ಪರಿಹಾರ ಜಮೆ: ಸಚಿವ ಕೃಷ್ಣ ಬೈರೇಗೌಡ

By kannadanewsnow0912/12/2025 2:54 PM

ಬೆಳಗಾವಿ ಸುವರ್ಣಸೌಧ: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14,21,000 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ಗೆ ಮಾಹಿತಿ ನೀಡಿದರು.

ಶುಕ್ರವಾರ ವಿಧಾನ ಪರಿಷತ್ತಿನ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ ಸದಸ್ಯರಾದ ತಿಮ್ಮಪ್ಪಣ್ಣ ಕಮಕನೂರ ಅವರ ಪ್ರಶ್ನೆಗೆ ಉತ್ತರಿಸಿ ಸಚಿವ ಕೃಷ್ಣ ಬೈರೇಗೌಡ ಅವರು, “ಕಲಬುರಗಿ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾರು ಹಂಗಾಮಿನಲ್ಲಿ 3,23,219 ಎಕರೆ ಪ್ರದೇಶದಲ್ಲಿ ಬೆಳೆಹಾನಿ ಉಂಟಾಗಿದೆ. ಎಸ್ಡಿಆರ್ಎಫ್ ನಿಯಮದ ಪ್ರಕಾರ ಬೆಳೆಹಾನಿಗೆ ರೂ.257.90 ಕೋಟಿ ಪರಿಹಾರ ನೀಡಲಾಗಿದೆ. ಇದಲ್ಲದೆ, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ರೂ. 245.75 ಕೋಟಿ ಪರಿಹಾರ ಹಣ ಸೇರಿ ಒಟ್ಟಾರೆ ರೂ.498.73 ಕೋಟಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

“ರಾಜ್ಯ ಅಂಕಿಅಂಶವನ್ನೂ ನೀಡಿದ ಅವರು, “ರಾಜ್ಯಾದ್ಯಂತ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ 14,21,000 ರೈತರಿಗೆ ಎಸ್ಡಿಆರ್ಎಫ್ ನಿಯಮದ ಪ್ರಕಾರ ರೂ.1,218 ಕೋಟಿ ಹಣ ಪರಿಹಾರ ರೂಪದಲ್ಲಿ ನೀಡಲಾಗಿದೆ. ಇದಲ್ಲದೆ, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ರೂ.1,033 ಕೋಟಿ ಸೇರಿ ಒಟ್ಟಾರೆಯಾಗಿ ರೂ. 2249 ಕೋಟಿ ಹಣವನ್ನು ಪರಿಹಾರದ ರೂಪದಲ್ಲಿ 14,21,000 ಲಕ್ಷ ರೈತರಿಗೆ ನೇರವಾಗಿ ಖಾತೆಗೆ ಜಮೆ ಮಾಡಲಾಗಿದೆ” ಎಂದರು

“ಇದರ ಜೊತೆಗೆ, ಜಾನುವಾರಗಳ ಹಾನಿಗೆ ರೂ.1.89 ಕೋಟಿ, ಮನೆಹಾನಿಗೆ ರೂ.40.86 ಕೋಟಿ, ಅಲ್ಪ ಪ್ರಮಾಣದ ಮನೆಹಾನಿಗಳಿಗೆ ರೂ.5.79 ಕೋಟಿ, ಕಾಳಜಿ ಕೇಂದ್ರಗಳಿಗೆ ರೂ.1.20 ಕೋಟಿ ರೂ ಹಾಗೂ ಮಳೆಯಿಂದ ಉಂಟಾದ ಎಲ್ಲಾ ಪ್ರಾಣಹಾನಿಗಳನ್ನೂ ಸೇರಿಸಿದರೆ ಒಟ್ಟಾರೆಯಾಗಿ ರೂ.2,300 ಕೋಟಿ ಹಣವನ್ನು ಪರಿಹಾರವಾಗಿ ನೀಡಲಾಗಿದೆ” ಎಂದು ತಿಳಿಸಿದರು.

“ರಾಜ್ಯಾದ್ಯಂತ ಕೇವಲ ಶೇ.03 ರಷ್ಟು ರೈತರಿಗೆ ಪರಿಹಾರ ಹಣ ಪಾವತಿಯಾಗಿಲ್ಲ ಎಂಬುದು ನಿಜ. ಕೆಲವು ರೈತರ ಆಧಾರ್ ಹೆಸರು ಮತ್ತು ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿನ ಹೆಸರು ತಾಳೆಯಾಗುತ್ತಿಲ್ಲ. ಮತ್ತೂ ಕೆಲವರದ್ದು ಆಧಾರ್ ಸಂಖ್ಯೆಗೆ ಬ್ಯಾಂಕ್ ಖಾತೆ ಲಿಂಕ್ ಮಾಡಿಲ್ಲ. ಹೀಗಾಗಿ 26,394 ರೈತರಿಗೆ ಪರಿಹಾರದ ಹಣ ಪಾವತಿ ಆಗಿಲ್ಲ. ಇದಲ್ಲದೆ, ಸರ್ಕಾರದವರು ಎನ್ಪಿಸಿಐ ಸೀಡಿಂಗ್ ಮಾಡಿದ್ದಾರೆ. ಹೀಗಾಗಿ 8,000 ರೈತರಿಗೆ ಹಣ ಪಾವತಿಯಾಗಿಲ್ಲ. ಈ ಎಲ್ಲಾ ಕಾರಣದಿಂದ ಒಟ್ಟಾರೆ 14,21,000 ರೈತರ ಪೈಕಿ 44,208 ರೈತರದ್ದು ಬಾಕಿ ಇದೆ. ಸರ್ಕಾರ ಈಗಾಗಲೇ ಹಣ ಪಾವತಿ ಮಾಡಿಯಾಗಿದ್ದು, ರೈತರ ಈ ಸಣ್ಣಪುಟ್ಟ ಸಮಸ್ಯೆಗಳು ಬಗೆಹರಿದ ಕೂಡಲೇ ರೈತರ ಖಾತೆಗೆ ಹಣ ಜಮೆ ಆಗಲಿದೆ” ಎಂದರು.

ಕೃಷಿ ವಿಮೆ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, “ವಿಮೆ ಕೂಡ ಈ ವರ್ಷ ನಾವು ತ್ವರಿತ ಪಾವತಿ ಮಾಡುವ ಕೆಲಸ ಮಾಡಿದ್ದೇವೆ. ಕೃಷಿ ಇಲಾಖೆ ಜೊತೆ ಮಾತನಾಡಿ ಎಷ್ಟು ಶೀಘ್ರ ಸಾಧ್ಯವೋ ಅಷ್ಟು ಶೀಘ್ರ ರೈತರ ಖಾತೆಗೆ ಬೆಳೆ ವಿಮೆ ಪಾವತಿ ಮಾಡಲಾಗುವುದು” ಎಂದು ಭರವಸೆ ನೀಡಿದರು.

Share. Facebook Twitter LinkedIn WhatsApp Email

Related Posts

ದೇವನೂರು ನಿಲ್ದಾಣದಲ್ಲಿ ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

12/12/2025 2:27 PM1 Min Read

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚನೆ: ಡಿಸಿಎಂ ಡಿ.ಕೆ ಶಿವಕುಮಾರ್

12/12/2025 2:22 PM2 Mins Read

ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಜಾಹೀರಾತು : ರಾಹುಲ್​ ಗಾಂಧಿ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎಂದ ವಕೀಲರು

12/12/2025 1:57 PM1 Min Read
Recent News

BREAKING : ‘NPS, UPS, ಅಟಲ್ ಪಿಂಚಣಿ’ ಯೋಜನೆಗಳ ನಿಯಮಗಳಲ್ಲಿ ಪ್ರಮುಖ ಬದಲಾವಣೆ ; ತಕ್ಷಣದಿಂದ ಅನ್ವಯ!

12/12/2025 2:54 PM

GOOD NEWS: ಮುಂಗಾರು ಹಂಗಾಮಿನಲ್ಲಿ 14.21 ಲಕ್ಷ ರೈತರಿಗೆ 2,249 ಕೋಟಿ ಪರಿಹಾರ ಜಮೆ: ಸಚಿವ ಕೃಷ್ಣ ಬೈರೇಗೌಡ

12/12/2025 2:54 PM

BREAKING : ಪವನ್ ಕಲ್ಯಾಣ್ ಕುರಿತ ಆಕ್ಷೇಪಾರ್ಹ ವಿಷಯ ತೆಗೆದುಹಾಕಿ ; ‘ಸೋಷಿಯಲ್ ಮೀಡಿಯಾ’ಗಳಿಗೆ ಹೈಕೋರ್ಟ್ ಸೂಚನೆ

12/12/2025 2:39 PM

‘ಮೊಬೈಲ್ ಬಳಕೆದಾರ’ರಿಗೆ ಗುಡ್ ನ್ಯೂಸ್; ಈಗ ಕರೆ ಮಾಡಿದವರ ‘ಹೆಸರು’ ಪ್ರದರ್ಶನ

12/12/2025 2:34 PM
State News
KARNATAKA

GOOD NEWS: ಮುಂಗಾರು ಹಂಗಾಮಿನಲ್ಲಿ 14.21 ಲಕ್ಷ ರೈತರಿಗೆ 2,249 ಕೋಟಿ ಪರಿಹಾರ ಜಮೆ: ಸಚಿವ ಕೃಷ್ಣ ಬೈರೇಗೌಡ

By kannadanewsnow0912/12/2025 2:54 PM KARNATAKA 2 Mins Read

ಬೆಳಗಾವಿ ಸುವರ್ಣಸೌಧ: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14,21,000 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ…

ದೇವನೂರು ನಿಲ್ದಾಣದಲ್ಲಿ ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

12/12/2025 2:27 PM

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚನೆ: ಡಿಸಿಎಂ ಡಿ.ಕೆ ಶಿವಕುಮಾರ್

12/12/2025 2:22 PM

ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಜಾಹೀರಾತು : ರಾಹುಲ್​ ಗಾಂಧಿ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎಂದ ವಕೀಲರು

12/12/2025 1:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.