ಗುಜರಾತ್: ಅಹಮದಾಬಾದ್ ನಿಂದ ಲಂಡನ್ ಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನ AI 171 ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತು. 232 ಪ್ರಯಾಣಿಕರಿದ್ದ ಪ್ರಯಾಣಿಕ ವಿಮಾನವು ಮೇಘನಿನಗರ ಬಳಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡಿದ್ದು, ಆ ಪ್ರದೇಶದಲ್ಲಿ ಭೀತಿ ಮೂಡಿಸಿದೆ. ಅಪಘಾತದಲ್ಲಿ 242 ಮಂದಿಯೂ ಸಾವನ್ನಪ್ಪಿದ್ದಾರೆ ಎಂಬುದಾಗಿ ವರದಿಯಾಗಿದೆ.
ಅಪಘಾತದ ಸ್ಥಳದಿಂದ ದಟ್ಟವಾದ ಹೊಗೆ ವಸ್ತ್ರಾಪುರದವರೆಗೂ ಗೋಚರಿಸಿತು. ಅಗ್ನಿಶಾಮಕ ದಳ ಸೇರಿದಂತೆ ತುರ್ತು ಪ್ರತಿಕ್ರಿಯೆ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿದವು. ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ವಿಮಾನದಲ್ಲಿದ್ದರು ಎಂದು ಹೇಳಲಾಗುತ್ತಿದೆ.
We are in contact with Air India regarding Flight 171 and stand ready to support them. Our thoughts are with the passengers, crew, first responders and all affected: Boeing Airplanes pic.twitter.com/4FWPgQ8neu
— ANI (@ANI) June 12, 2025
ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ ನಡೆದ ಮೊದಲ ಪ್ರಮುಖ ವಿಮಾನ ಅಪಘಾತ ಇದಾಗಿದೆ. 2020 ರಲ್ಲಿ ಕೋಝಿಕ್ಕೋಡ್ನಲ್ಲಿ ಕೊನೆಯ ವಿಮಾನ ಅಪಘಾತ ಸಂಭವಿಸಿದೆ.
ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ತನಿಖೆ ಆರಂಭಿಸುವುದಾಗಿ ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ತಿಳಿಸಿದೆ. ಏರ್ ಇಂಡಿಯಾದ ಡ್ರೀಮ್ಲೈನರ್ ಬೋಯಿಂಗ್ 787 ವಿಮಾನದಲ್ಲಿ 12 ಸಿಬ್ಬಂದಿ ಸೇರಿದಂತೆ 242 ಜನರು ಇದ್ದರು.
ಪಿಟಿಐ ಜೊತೆ ಮಾತನಾಡಿದ ಅಧಿಕಾರಿಗಳು, ಏಜೆನ್ಸಿಯ ಎಎಐಬಿ ಮಹಾನಿರ್ದೇಶಕರು ಮತ್ತು ತನಿಖಾ ನಿರ್ದೇಶಕರು ಸೇರಿದಂತೆ ಇತರರು ಅಹಮದಾಬಾದ್ಗೆ ತೆರಳಲಿದ್ದಾರೆ ಎಂದು ಹಂಚಿಕೊಂಡರು.