ಬೆಂಗಳೂರು; ನಗರದ ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ KSIIDC ಮತ್ತೊಂದು ಭರವಸೆಯ ಹೆಜ್ಜೆ ಯನ್ನು ಇರಿಸಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬೆಂಗಳೂರು ಹೊರವಲಯದಲ್ಲಿ ಆಯ್ಕೆ ಮಾಡಲಾದ 3 ಸ್ಥಳಗಳ ವಿವರವಾದ ಕಾರ್ಯತಂತ್ರ ಮತ್ತು ಕಾರ್ಯಸಾಧ್ಯತಾ ವರದಿ ಸಿದ್ದಪಡಿಸಲು ಟೆಂಡರ್ ಕರೆಯುವ ಮೂಲಕ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದಿದ್ದಾರೆ.
ಈ ಕ್ರಮವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ನಡೆಸಿದ ಪ್ರಾಥಮಿಕ ಪರಿಶೀಲನೆಯ ನಂತರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪ್ರಸ್ತಾವಿತ ಗ್ರೀನ್ಫೀಲ್ಡ್ (ಹೊಸ) ವಿಮಾನ ನಿಲ್ದಾಣವು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ವಾಯು ಸಂಚಾರ ಬೇಡಿಕೆಯನ್ನು ಪೂರೈಸಲು ಮತ್ತು ಕರ್ನಾಟಕದ ದೀರ್ಘಕಾಲೀನ ವಾಯುಯಾನ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಭದ್ರಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರಲ್ಲಿ ಕಾಫಿ ಕಳ್ಳರ ಗ್ಯಾಂಗ್ ಆಕ್ಟೀವ್: ಬೆಳೆಗಾರನ ಮೇಲೆ ಅಟ್ಯಾಕ್ ಮಾಡಿದ ಖದೀಮರು ಅರೆಸ್ಟ್
‘ಡಿಜಿಟಲ್ ಅರೆಸ್ಟ್’ ವಂಚನೆ: 1 ಕೋಟಿ ರೂ. ಕಳೆದುಕೊಂಡ 82 ವರ್ಷದ ವ್ಯಕ್ತಿ | Digital arrest scam








