Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉರುಗ್ವೆ ಮಾಜಿ ಅಧ್ಯಕ್ಷ ಜೋಸ್ ಮುಜಿಕಾ ನಿಧನ | Jose Mujica passes away

14/05/2025 6:41 AM

ಗ್ರೀಸ್ ನಲ್ಲಿ 6.1 ತೀವ್ರತೆಯ ಭೂಕಂಪ, ಈಜಿಪ್ಟ್, ಇಸ್ರೇಲ್, ಲೆಬನಾನ್ ಮತ್ತು ಜೋರ್ಡಾನ್ನಲ್ಲೂ ನಡುಗಿದ ಭೂಮಿ | Earthquake

14/05/2025 6:35 AM

BIG NEWS : ರಾಜ್ಯದ ಗ್ರಾ.ಪಂ ವ್ಯಾಪ್ತಿಯ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : `ನಮೂನೆ-9, 11-A’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ.!

14/05/2025 6:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಾಜ್ಯ ಸರ್ಕಾರಿ ನೌಕರ’ರಿಗೆ ‘ಶೇ.3.75ರಷ್ಟು DA’ ಹೆಚ್ಚಳ: ಯಾರಿಗೆ ‘ಎಷ್ಟು’ ಸಿಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ | DA Hike
KARNATAKA

‘ರಾಜ್ಯ ಸರ್ಕಾರಿ ನೌಕರ’ರಿಗೆ ‘ಶೇ.3.75ರಷ್ಟು DA’ ಹೆಚ್ಚಳ: ಯಾರಿಗೆ ‘ಎಷ್ಟು’ ಸಿಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ | DA Hike

By kannadanewsnow0912/03/2024 4:25 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ಶೇ.38.75ರಿಂದ ಶೇ.48.5ರಷ್ಟು ತುಟ್ಟಿಭತ್ಯೆಯನ್ನು ( Dearness Allowance-DA ) ಹೆಚ್ಚಳ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ ( DA Hike ) ಮಾಡಿ ಆದೇಶದ ಬೆನ್ನಲ್ಲೇ, ರಾಜ್ಯ ಸರ್ಕಾರ ( Karnataka Government ) ಕೂಡ ಆದೇಶ ಮಾಡಿದೆ. ಹಾಗಾದ್ರೇ ಡಿಎ 3.75ರಷ್ಟು ಹೆಚ್ಚಳವಾದ ನಂತ್ರ ಯಾರಿಗೆ ಎಷ್ಟು ವೇತನ ಸಿಗಲಿದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ.

ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದೆ.

2. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ,

(ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,
(ಆ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ,
(ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ,
ಅವುಗಳು ಸೇರುತ್ತವೆ.
3. ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.
4. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 38.75 ರಿಂದ ಶೇಕಡ 42.5 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.
5. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ.
6. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ.

7. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು.

8.ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು.
9. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.
10. ತುಟ್ಟಿಭತ್ಯೆ ಬಾಕಿ ಮೊತ್ತವನ್ನು, 2024ರ ಮಾರ್ಚ್ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ.
11. ತುಟ್ಟಿ ಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದೆ.

ಯಾರಿಗೆ ಎಷ್ಟು ಸಿಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ

BREAKING : ರಾಜಸ್ಥಾನದಲ್ಲಿ ವಾಯುಪಡೆಯ ‘ತೇಜಸ್ ವಿಮಾನ’ ಪತನ, ‘ಪೈಲಟ್’ ಸುರಕ್ಷಿತ

ಶಿವಮೊಗ್ಗ: ‘ನಾಮಫಲಕ’ಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಪ್ರದರ್ಶಿಸಲು ‘DC ಸೂಚನೆ’

breaking news DA hike Dearness Allowance-DA kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka government karnataka Government employees karnataka latest news karnataka news latest news
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಗ್ರಾ.ಪಂ ವ್ಯಾಪ್ತಿಯ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : `ನಮೂನೆ-9, 11-A’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ.!

14/05/2025 6:34 AM3 Mins Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಡಿಫೈನ್ ಪಿಂಚಣಿ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

14/05/2025 6:25 AM2 Mins Read

Rain Alert : ಇಂದು, ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ `ಮಳೆ’ : `ಯೆಲ್ಲೋ ಅಲರ್ಟ್’ ಘೋಷಣೆ.!

14/05/2025 6:14 AM1 Min Read
Recent News

ಉರುಗ್ವೆ ಮಾಜಿ ಅಧ್ಯಕ್ಷ ಜೋಸ್ ಮುಜಿಕಾ ನಿಧನ | Jose Mujica passes away

14/05/2025 6:41 AM

ಗ್ರೀಸ್ ನಲ್ಲಿ 6.1 ತೀವ್ರತೆಯ ಭೂಕಂಪ, ಈಜಿಪ್ಟ್, ಇಸ್ರೇಲ್, ಲೆಬನಾನ್ ಮತ್ತು ಜೋರ್ಡಾನ್ನಲ್ಲೂ ನಡುಗಿದ ಭೂಮಿ | Earthquake

14/05/2025 6:35 AM

BIG NEWS : ರಾಜ್ಯದ ಗ್ರಾ.ಪಂ ವ್ಯಾಪ್ತಿಯ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : `ನಮೂನೆ-9, 11-A’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ.!

14/05/2025 6:34 AM

UPSC ಅಧ್ಯಕ್ಷರಾಗಿ ಮಾಜಿ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ನೇಮಕ

14/05/2025 6:29 AM
State News
KARNATAKA

BIG NEWS : ರಾಜ್ಯದ ಗ್ರಾ.ಪಂ ವ್ಯಾಪ್ತಿಯ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : `ನಮೂನೆ-9, 11-A’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5714/05/2025 6:34 AM KARNATAKA 3 Mins Read

ಬೆಂಗಳೂರು : ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ…

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಡಿಫೈನ್ ಪಿಂಚಣಿ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

14/05/2025 6:25 AM

Rain Alert : ಇಂದು, ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ `ಮಳೆ’ : `ಯೆಲ್ಲೋ ಅಲರ್ಟ್’ ಘೋಷಣೆ.!

14/05/2025 6:14 AM

BIG NEWS : ಮುಂಗಾರು ಪೂರ್ವ ಮಳೆ ಅಬ್ಬರ : ರಾಜ್ಯಾದ್ಯಂತ ಸಿಡಿಲಿಗೆ 9 ಮಂದಿ ಬಲಿ.!

14/05/2025 6:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.