ಆಂಧ್ರಪ್ರದೇಶ: ಆಂಧ್ರಪ್ರದೇಶದ ಪುಡಿಮಡಕ ಬೀಚ್ನಲ್ಲಿ ಅನಕಾಪಲ್ಲಿಯ ಡಯಟ್ ಎಂಜಿನಿಯರಿಂಗ್ ಕಾಲೇಜಿನ ಏಳು ವಿದ್ಯಾರ್ಥಿಗಳು ಸಮುದ್ರದಲ್ಲಿ ಸ್ನಾನ ಮಾಡಲು ಹೋಗಿ ನಾಪತ್ತೆಯಾಗಿದ್ದಾರೆ.
ಶುಕ್ರವಾರ ಇಬ್ಬರು ವಿದ್ಯಾರ್ಥಿಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದು, ವಿದ್ಯಾರ್ಥಿಗಳಲ್ಲಿ ಒಬ್ಬರಾದ ಪವನ್ ಕುಮಾರ್ ಶವವಾಗಿ ಪತ್ತೆಯಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಪತ್ತೆಯಾದ ಮತ್ತೋರ್ವ ವಿದ್ಯಾರ್ಥಿ ತೇಜ ಎಂಬುವವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ.
BIGG NEWS : ಕರ್ನಾಟಕದಲ್ಲಿ `ಯೋಗಿ ಮಾಡೆಲ್’ ಜಾರಿ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು?
ರಕ್ಷಣಾ ಅಧಿಕಾರಿಗಳು ಇಂದು ಮತ್ತಿಬ್ಬರು ವಿದ್ಯಾರ್ಥಿಗಳ ಮೃತ ದೇಹಗಳನ್ನು ಹೊರತೆಗೆದಿದ್ದು, ಇವರನ್ನು ಜಸ್ವಂತ್ ಕುಮಾರ್ ಮತ್ತು ಪೆಂಟಕೋಟ ಗಣೇಶ್ ಎಂದು ಗುರುತಿಸಲಾಗಿದೆ.
ಏಳು ವಿದ್ಯಾರ್ಥಿಗಳು ಸ್ನಾನಕ್ಕೆಂದು ಸಮುದ್ರಕ್ಕೆ ತೆರಳಿದ್ದರು. ಆ ವೇಳ ದೊಡ್ಡ ಅಲೆಗೆ ಯುವಕರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದರು ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಉಳಿದ ಮೂವರು ವಿದ್ಯಾರ್ಥಿಗಳಾದ ಕಂಪಾರ ಜಗದೀಶ್, ಬಯ್ಯಪುನೇನಿ ಸತೀಶ್ ಕುಮಾರ್ ಮತ್ತು ಪುಡಿ ರಾಮಚಂದು ಅವರನ್ನು ಹುಡುಕಲು ಹೆಲಿಕಾಪ್ಟರ್ ಮತ್ತು ಕೋಸ್ಟ್ ಗಾರ್ಡ್ ಬೋಟ್ಗಳನ್ನು ನಿಯೋಜಿಸಲಾಗಿದೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ದುಃಖಿತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.