Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಯುಡಬ್ಲೂಜೆ ಹೊರ ತರುವ ‘ಪತ್ರಕರ್ತ ಸಂಚಿಕೆ’ಯನ್ನು ಬಿಡುಗಡೆ ಮಾಡಿದ ‘ಸಿಎಂ ಸಿದ್ಧರಾಮಯ್ಯ’

30/07/2025 7:20 PM

ಬೆಂಗಳೂರಲ್ಲಿ ರಾಹುಲ್ ಗಾಂಧಿಗೆ ಯಾವ ನಿಯಮದಡಿ ಪಾದಯಾತ್ರೆಗೆ ಅವಕಾಶ: ಆರ್‌.ಅಶೋಕ ಪ್ರಶ್ನೆ

30/07/2025 7:16 PM

ಭಾರತದ ಮೇಲೆ ಶೇ. 25ರಷ್ಟು ಸುಂಕ ವಿಧಿಸಿದ ಅಮೆರಿಕ, ಇದು ಇತರ ದೇಶಗಳಿಗಿಂತ ಹೆಚ್ಚಿದ್ಯಾ? ಕಡಿಮೆ ಇದ್ಯಾ.? ಮಾಹಿತಿ ಇಲ್ಲಿದೆ!

30/07/2025 7:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಸ್ಲಿಮರಿಗೆ 4% ಗುತ್ತಿಗೆ ಮೀಸಲು: ಕೇಂದ್ರ ಸಚಿವ HDK ಹೇಳಿದ್ದೇನು ಗೊತ್ತಾ.?
KARNATAKA

ಮುಸ್ಲಿಮರಿಗೆ 4% ಗುತ್ತಿಗೆ ಮೀಸಲು: ಕೇಂದ್ರ ಸಚಿವ HDK ಹೇಳಿದ್ದೇನು ಗೊತ್ತಾ.?

By kannadanewsnow0924/03/2025 1:52 PM

ನವದೆಹಲಿ/ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್; ಜೆಡಿಎಸ್ – ಬಿಜೆಪಿ ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರಿಗೆ ಚೆಕ್ ಮೆಟ್ ಇಟ್ಟಿದೆ.

ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ.ಶೇ.4ರಷ್ಟು ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ ಎಂದು ಕೇಂದ್ರ ಸಚಿವರು ಸ್ಪಷ್ಟಪಡಿಸಿದ್ದಾರೆ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ NDA ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ಅವರು ನೇರ ಆರೋಪ ಮಾಡಿದ್ದಾರೆ.

ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದಿರುವ ಅವರು, ತುಷ್ಟೀಕರಣ VS ತುಚ್ಚೀಕರಣ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರದ ಕಾಲೆಳೆದಿದ್ದಾರೆ.

Share. Facebook Twitter LinkedIn WhatsApp Email

Related Posts

ಕೆಯುಡಬ್ಲೂಜೆ ಹೊರ ತರುವ ‘ಪತ್ರಕರ್ತ ಸಂಚಿಕೆ’ಯನ್ನು ಬಿಡುಗಡೆ ಮಾಡಿದ ‘ಸಿಎಂ ಸಿದ್ಧರಾಮಯ್ಯ’

30/07/2025 7:20 PM1 Min Read

ಬೆಂಗಳೂರಲ್ಲಿ ರಾಹುಲ್ ಗಾಂಧಿಗೆ ಯಾವ ನಿಯಮದಡಿ ಪಾದಯಾತ್ರೆಗೆ ಅವಕಾಶ: ಆರ್‌.ಅಶೋಕ ಪ್ರಶ್ನೆ

30/07/2025 7:16 PM2 Mins Read

ನಿಮ್ಮ ಮನೆಯ ಈ ದಿಕ್ಕಿನಲ್ಲಿ ‘ಪಿತೃಗಳ ಪೋಟೋ’ ಇದ್ದರೇ ಪಿತೃ ದೋಷವಂತೆ!

30/07/2025 7:05 PM2 Mins Read
Recent News

ಕೆಯುಡಬ್ಲೂಜೆ ಹೊರ ತರುವ ‘ಪತ್ರಕರ್ತ ಸಂಚಿಕೆ’ಯನ್ನು ಬಿಡುಗಡೆ ಮಾಡಿದ ‘ಸಿಎಂ ಸಿದ್ಧರಾಮಯ್ಯ’

30/07/2025 7:20 PM

ಬೆಂಗಳೂರಲ್ಲಿ ರಾಹುಲ್ ಗಾಂಧಿಗೆ ಯಾವ ನಿಯಮದಡಿ ಪಾದಯಾತ್ರೆಗೆ ಅವಕಾಶ: ಆರ್‌.ಅಶೋಕ ಪ್ರಶ್ನೆ

30/07/2025 7:16 PM

ಭಾರತದ ಮೇಲೆ ಶೇ. 25ರಷ್ಟು ಸುಂಕ ವಿಧಿಸಿದ ಅಮೆರಿಕ, ಇದು ಇತರ ದೇಶಗಳಿಗಿಂತ ಹೆಚ್ಚಿದ್ಯಾ? ಕಡಿಮೆ ಇದ್ಯಾ.? ಮಾಹಿತಿ ಇಲ್ಲಿದೆ!

30/07/2025 7:12 PM

ನಿಮ್ಮ ಮನೆಯ ಈ ದಿಕ್ಕಿನಲ್ಲಿ ‘ಪಿತೃಗಳ ಪೋಟೋ’ ಇದ್ದರೇ ಪಿತೃ ದೋಷವಂತೆ!

30/07/2025 7:05 PM
State News
KARNATAKA

ಕೆಯುಡಬ್ಲೂಜೆ ಹೊರ ತರುವ ‘ಪತ್ರಕರ್ತ ಸಂಚಿಕೆ’ಯನ್ನು ಬಿಡುಗಡೆ ಮಾಡಿದ ‘ಸಿಎಂ ಸಿದ್ಧರಾಮಯ್ಯ’

By kannadanewsnow0930/07/2025 7:20 PM KARNATAKA 1 Min Read

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(Karnataka Union of Working Journalists-KUWJ) ಹೊರ ತರುವ ಪತ್ರಕರ್ತ ವಿಶೇಷ ಸಂಚಿಕೆಯನ್ನು…

ಬೆಂಗಳೂರಲ್ಲಿ ರಾಹುಲ್ ಗಾಂಧಿಗೆ ಯಾವ ನಿಯಮದಡಿ ಪಾದಯಾತ್ರೆಗೆ ಅವಕಾಶ: ಆರ್‌.ಅಶೋಕ ಪ್ರಶ್ನೆ

30/07/2025 7:16 PM

ನಿಮ್ಮ ಮನೆಯ ಈ ದಿಕ್ಕಿನಲ್ಲಿ ‘ಪಿತೃಗಳ ಪೋಟೋ’ ಇದ್ದರೇ ಪಿತೃ ದೋಷವಂತೆ!

30/07/2025 7:05 PM

BIG NEWS: ಧರ್ಮಸ್ಥಳದಲ್ಲಿ ಕಳೇಬರ ಶೋಧ ವೇಳೆ ಮಹತ್ವದ ಕುರುಹು ಪತ್ತೆ: ಸೋಷಿಯಲ್ ಮೀಡಿಯಾದಲ್ಲಿ ‘ಪ್ರೆಸ್ ನೋಟ್ ವೈರಲ್’

30/07/2025 6:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.