ತುಮಕೂರು: ತುಮಕೂರು ಜಿಲ್ಲೆಯ ಜಿಲ್ಲಾಸ್ಪತ್ರೆ ( Tumkur District Hospital ), ತಾಲೂಕು ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್‌ ಹೆರಿಗೆ ಕುರಿತು ನಿಗಾ ವಹಿಸಲು ಸಮಿತಿ ರಚಿಸಲಾಗುವುದು. ಸಿ-ಸೆಕ್ಷನ್‌ ಹೆರಿಗೆ ಹೆಚ್ಚಳಕ್ಕೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ( Minister Dr K Sudhakar ) ತಿಳಿಸಿದರು.

BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ‘ಪುಣ್ಯಕೋಟಿ ದತ್ತು ಯೋಜನೆ’ ಅನುಷ್ಠಾನಕ್ಕೆ ‘ವೇತನ ಕಟ್’

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಪರಿಶೀಲನೆ, ರೋಗಿಗಳೊಂದಿಗೆ ಸಮಾಲೋಚನೆ ಹಾಗೂ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತುಮಕೂರಿನ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಸಿ ಸೆಕ್ಷನ್‌ ಹೆರಿಗೆ ಕುರಿತು ನಿಗಾ ವಹಿಸಲು ಸಮಿತಿ ರಚಿಸಲಾಗುವುದು. ಸಿ ಸೆಕ್ಷನ್‌ ಪ್ರಮಾಣ 20-40% ಒಳಗೆ ಇರಬೇಕಾಗುತ್ತದೆ. ಇದರಲ್ಲಿ ಉದ್ದೇಶಪೂರ್ವಕ ಅಥವಾ ಭ್ರಷ್ಟಾಚಾರ ಇರಬಾರದು. ಇದಕ್ಕೆ ಕಡಿವಾಣ ಹಾಕಲಾಗುವುದು. ಜಿಲ್ಲಾ ಸರ್ಜನ್‌, ಎಲ್ಲಾ ವಿಭಾಗದ ಮುಖ್ಯಸ್ಥರೊಂದಿಗೆ ಪ್ರತಿ ಶುಕ್ರವಾರ ಸಭೆ ನಡೆಸಿ ಚರ್ಚಿಸಬೇಕು. ಲೋಪಗಳು ಕಂಡುಬಂದರೆ ಕೂಡಲೇ ಕ್ರಮ ವಹಿಸಬೇಕು. ಜಿಲ್ಲಾಧಿಕಾರಿಗಳು ಜಿಲ್ಲಾಸ್ಪತ್ರೆಯನ್ನು ಪರಿಶೀಲಿಸಬೇಕೆಂದು ಸೂಚಿಸಲಾಗಿದೆ ಎಂದರು.

Good News : ಭಾರತದಲ್ಲಿ ಶೀಘ್ರ ‘ಗರ್ಭಕಂಠದ ಕ್ಯಾನ್ಸರ್’ ಲಸಿಕೆ ಲಭ್ಯ ; WHO ಮಾಹಿತಿ |Cervical Cancer vaccine

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ 44 ತಜ್ಞ ವೈದ್ಯರ ಹುದ್ದೆ ಮಂಜೂರಾಗಿದೆ. ಅದರಲ್ಲಿ 42 ತಜ್ಞರು ಕೆಲಸ ಮಾಡುತ್ತಿದ್ದಾರೆ. 2 ಹುದ್ದೆ ಮಾತ್ರ ಖಾಲಿ ಇದ್ದು, ವೈದ್ಯರ ಕೊರತೆ ಇಲ್ಲ. ಇಲ್ಲಿ 250 ಹಾಸಿಗೆ ಇದ್ದು, 2003 ರಲ್ಲಿ 400 ಕ್ಕೆ ಹೆಚ್ಚಿಸಲಾಗಿದೆ. ಇದಕ್ಕೆ ತಕ್ಕಂತೆ ಮಾನವ ಸಂಪನ್ಮೂಲ ಸೃಜಿಸಿಲ್ಲ. ಈ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಡಯಾಲಿಸಿಸ್‌ ಗೆ ಸೂಕ್ತ ವ್ಯವಸ್ಥೆ

ರಾಜ್ಯದ ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ( District Hospital ) ಸಹಾಯವಾಣಿ ಆರಂಭಿಸಲಾಗುವುದು. ಇಲ್ಲಿ 4 ಸಿಬ್ಬಂದಿ ಹಗಲು-ರಾತ್ರಿ ಎರಡು ಪಾಳಿಯಲ್ಲಿ ಕೆಲಸ ಮಾಡಲಿದ್ದಾರೆ. ರೋಗಿಗಳ ಕುಟುಂಬದವರು ಬಂದಾಗ ಅವರಿಗೆ ನೆರವು ನೀಡಲಾಗುತ್ತದೆ. ಡಯಾಲಿಸಿಸ್‌ ಸೇವೆಗೆ ಸಂಬಂಧಿಸಿದಂತೆ ಈಗಾಗಲೇ ಟೆಂಡರ್‌ ನಡೆಯುತ್ತಿದ್ದು, ಡಿಸೆಂಬರ್‌ ವೇಳೆಗೆ ಹೊಸ ಸಂಸ್ಥೆ ನಿಗದಿಯಾಗಲಿದೆ. ಡಯಾಲಿಸಿಸ್‌ ಮಾಡುವ ಸಂಖ್ಯೆಯನ್ನು 30 ಸಾವಿರದಿಂದ 60 ಸಾವಿರಕ್ಕೆ ಏರಿಸಲು ತೀರ್ಮಾನಿಸಲಾಗಿದೆ ಎಂದು ವಿವರಿಸಿದರು.

BIG NEWS: ಮೋದಿ ನಿಂತು ಮಾತನಾಡೋ ಕೆಂಪು ಕೋಟೆ ಕಟ್ಟಿದ್ದೇ ಮುಸ್ಲೀಮರು – JDS ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ

ತುಮಕೂರಿನಲ್ಲಿ ಕ್ಯಾನ್ಸರ್‌ ಆಸ್ಪತ್ರೆ ( Cancer Hospital ) ಮಂಜೂರಾಗಿದ್ದು, ಕಟ್ಟಡ ಕಾಮಗಾರಿ ಪರಿಶೀಲಿಸಲಾಗಿದೆ. ಏಪ್ರಿಲ್‌ನಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಆದರೆ ಮಾರ್ಚ್‌ ವೇಳೆಗೆ ಪೂರ್ಣಗೊಳಿಸಲು ಹೇಳಲಾಗಿದೆ. ತುಮಕೂರಿಗೆ 100 ಹಾಸಿಗೆಗಳ, 40 ಕೋಟಿ ರೂ. ವೆಚ್ಚದ ತುರ್ತು ಆರೈಕೆ ಆಸ್ಪತ್ರೆ ಮಂಜೂರು ಮಾಡಿಸಿದ್ದು, ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಲಿದೆ. 20 ಕೋಟಿ ರೂ. ವೆಚ್ಚದಲ್ಲಿ ಹೊಸ ನರ್ಸಿಂಗ್‌ ಕಾಲೇಜು, ಜಿಲ್ಲಾಸ್ಪತ್ರೆ ಆವರಣದಲ್ಲೇ ನಿರ್ಮಾಣವಾಗಲಿದ್ದು, ಇದಕ್ಕೂ ಮುಖ್ಯಮಂತ್ರಿಗಳೇ ಶಂಕುಸ್ಥಾಪನೆ ಮಾಡಲಿದ್ದಾರೆ. 28 ಲಕ್ಷ ಜನರು ತುಮಕೂರು ಜಿಲ್ಲೆಯಲ್ಲಿದ್ದು, ಉತ್ತಮ ಆರೋಗ್ಯ ಸೇವೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 144 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಬಹುಪಾಲು ವೈದ್ಯರ ಹುದ್ದೆ ಭರ್ತಿಯಾಗಿದೆ. ತಾಲೂಕು ಆಸ್ಪತ್ರೆಗಳಲ್ಲಿ 8 ತಜ್ಞ ವೈದ್ಯರ ಹುದ್ದೆ ತುಂಬಲು ಕ್ರಮ ವಹಿಸಲಾಗುವುದು. ಸ್ಟಾಫ್‌ ನರ್ಸ್‌, ಲ್ಯಾಬ್‌ ತಂತ್ರಜ್ಞರು, ಗ್ರೂಪ್‌ ಡಿ ನೌಕರರ ಹುದ್ದೆ ಬಹಳ ಖಾಲಿ ಇದೆ. ಇವುಗಳನ್ನೂ ಶೀಘ್ರವೇ ಭರ್ತಿ ಮಾಡಲಾಗುವುದು ಎಂದರು.

ಕುತೂಹಲ ಮೂಡಿಸಿದ ಸಚಿವ ಜೆ.ಸಿ ಮಾಧುಸ್ವಾಮಿ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಭೇಟಿ

ನಮ್ಮ ಕ್ಲಿನಿಕ್‌

ರಾಜ್ಯದಲ್ಲಿ 438 ನಮ್ಮ ಕ್ಲಿನಿಕ್‌ಗಳನ್ನು ( Namma Clinic ) ನಿರ್ಮಿಸಲಾಗುತ್ತಿದ್ದು, 288 ಸಿದ್ಧವಾಗಿದೆ. ಇದೇ ತಿಂಗಳು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಮೊದಲಿಗೆ 200 ಕ್ಕೂ ಹೆಚ್ಚು ಕ್ಲಿನಿಕ್‌ ಆರಂಭವಾಗಲಿವೆ. ತುಮಕೂರಿನಲ್ಲಿ ಒಟ್ಟು 10 ಕ್ಲಿನಿಕ್‌ ಆರಂಭವಾಗಲಿವೆ. ಮಹಿಳೆಯರ ಕ್ಲಿನಿಕ್‌ಗೆ ʼಆಯುಷ್ಮತಿ ಕ್ಲಿನಿಕ್‌ʼ ಎಂದು ಹೆಸರಿಡಲಾಗಿದೆ ಎಂದರು.

ದೂರು ಪೆಟ್ಟಿಗೆ

ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮರಾ ಜೊತೆಗೆ ದೂರು ಪೆಟ್ಟಿಗೆ ಇಡಲು ಸೂಚಿಸಲಾಗಿದೆ. ಇ-ಆಸ್ಪತ್ರೆ ವ್ಯವಸ್ಥೆ ಮೂಲಕವೂ ಜನರು ದೂರು ನೀಡಬಹುದು ಎಂದರು.

10 ಲಕ್ಷ ರೂ. ಠೇವಣಿ

ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ದೊರೆಯದೆ ಮೃತರಾಗಿದ್ದ ಮಹಿಳೆಯ ಪುತ್ರಿಗೆ ಸಚಿವ ಡಾ.ಕೆ.ಸುಧಾಕರ್‌ 10 ಲಕ್ಷ ರೂ. ಪರಿಹಾರದ ಚೆಕ್‌ ನೀಡಿದರು. ಇದನ್ನು ಬಾಲಕಿಯ ಹೆಸರಲ್ಲಿ ಎಫ್‌ಡಿ ಮಾಡಲಿದ್ದು, 18 ವರ್ಷ ವಯಸ್ಸಿನ ಬಳಿಕ ಹಣ ಹಸ್ತಾಂತರಿಸಲಾಗುತ್ತದೆ.

ಈ ಕುರಿತು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌, ಇಂತಹ ಅಮಾನವೀಯ ಘಟನೆ ಮುಂದೆಂದೂ ನಡೆಯದಂತೆ ಎಚ್ಚರ ವಹಿಸಬೇಕು. ಯಾವುದೇ ಸಿಬ್ಬಂದಿ ಈ ರೀತಿ ನಡೆದುಕೊಳ್ಳಬಾರದು ಎಂದು ತಾಕೀತು ಮಾಡಲಾಗಿದೆ. ಈ ಬಗ್ಗೆ ಮೌಖಿಕವಾಗಿ ಹಾಗೂ ಆದೇಶದ ಮೂಲಕ ಸೂಚನೆ ನೀಡಲಾಗಿದೆ ಎಂದರು.

Share.
Exit mobile version