Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

23/02/2026 6:19 AM

Good News : ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದ ಬಂಪರ್ ಗಿಫ್ಟ್ : ಈಗ ತುರ್ತು ಶಸ್ತ್ರಚಿಕಿತ್ಸೆಗಾಗಿ 10 ಲಕ್ಷ ರೂ. ಲಭ್ಯ.!

23/02/2026 6:12 AM

ರಾಜ್ಯ ಸರ್ಕಾರಿ ಮಹಿಳಾ ನೌಕರರೇ ಗಮನಿಸಿ : `ಋತುಚಕ್ರ ರಜೆ’ಗೆ ಈ ಷರತ್ತುಗಳು ಅನ್ವಯ !

23/02/2026 6:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT: ಶೀಘ್ರವೇ 46,000 ರೈಲ್ವೆ ಹುದ್ದೆಗಳ ಭರ್ತಿಗೆ ಅಧಿಸೂಚನೆ, ಕನ್ನಡದಲ್ಲೇ ಪರೀಕ್ಷೆ: ಕೇಂದ್ರ ಸಚಿವ ವಿ.ಸೋಮಣ್ಣ
KARNATAKA

JOB ALERT: ಶೀಘ್ರವೇ 46,000 ರೈಲ್ವೆ ಹುದ್ದೆಗಳ ಭರ್ತಿಗೆ ಅಧಿಸೂಚನೆ, ಕನ್ನಡದಲ್ಲೇ ಪರೀಕ್ಷೆ: ಕೇಂದ್ರ ಸಚಿವ ವಿ.ಸೋಮಣ್ಣ

By kannadanewsnow0902/10/2024 9:01 PM

ದಾವಣಗೆರೆ : ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು ಕಳೆದ ಎರಡೂವರೆಗೆ ತಿಂಗಳಿಂದ ಇದರ ಪ್ರಗತಿ ವೇಗ ಹೆಚ್ಚಿಸಲಾಗಿದೆ. ಒಟ್ಟು ಈ ಯೋಜನೆಗೆ 2406.73 ಎಕರೆ ಭೂಮಿ ಬೇಕಾಗಿದ್ದು ಈಗಾಗಲೇ 2119.16 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 287.54 ಎಕರೆ ಸ್ವಾಧೀನ ಮಾಡಿಕೊಳ್ಳಬೇಕಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಹಾದುಹೋಗುವ 263.78 ಎಕರೆ ಜಮೀನಿನಲ್ಲಿ 246.20 ಎಕರೆ ಸ್ವಾಧೀನ ಪಡಿಸಿಕೊಂಡಿದ್ದು 17.58 ಎಕರೆಯ ಸ್ವಾಧೀನ ಪ್ರಕ್ರಿಯೆ ವಿವಿಧ ಹಂತದಲ್ಲಿದ್ದು ಕೆಲವೇ ದಿನಗಳಲ್ಲಿ ಪೂರ್ಣವಾಗಲಿದೆ ಎಂದರು.

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದ್ದು 2027 ರ ಜನವರಿಯೊಳಗಾಗಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಉದ್ದೇಶಿಸಲಾಗಿದೆ. ರೈಲ್ವೆ ಕಾಮಗಾರಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ಅಭಿವೃದ್ದಿ ಮಾಡಲಾಗುತ್ತದೆ. ಇದೇ ಆರ್ಥಿಕ ವರ್ಷದ ಕೊನೆಯಾಗುವ ವೇಳೆಗೆ ಕನಿಷ್ಠ 4 ರಿಂದ 5 ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು ಇದಕ್ಕಾಗಿ 43 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ರಾಜ್ಯವನ್ನು ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಯೋಜನೆಗೆ ಈಗಾಗಲೇ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 115.11.08 ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ ಎಂದರು.

ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ನಿರ್ಮಾಣ; ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಕಡೆ ರೈಲ್ವೆ ಇಲಾಖೆಯಿಂದಲೇ ಮೇಲ್ಸೇತುವೆ ಹಾಗೂ ಕೆಳಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ದಾವಣಗೆರೆ ನಗರದ ಅಶೋಕ ಟಾಕೀಸ್ ಹತ್ತಿರ ರೈಲ್ವೆ ಲೈನ್ ಕೆಳಸೇತುವೆಗೆ ಸಂಪರ್ಕ ರಸ್ತೆ ನಿರ್ಮಾಣದ ಭೂ ನೇರ ಖರೀದಿಗೆ ರೂ.23.09 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು ಆದಷ್ಟು ಬೇಗ ಈ ಕಾಮಗಾರಿ ಮಾಡಲು ಅನುವು ಮಾಡಿಕೊಡಲಾಗುತ್ತದೆ ಎಂದರು.

ರೈಲ್ವೆ ವೇಗ ಹೆಚ್ಚಿಸಲು ಕ್ರಮ; ರೈಲ್ವೆ ಇಂಜಿನ್‍ಗಳು ಬಹುತೇಕ ಶೇ 98 ರಷ್ಟು ವಿದ್ಯುತ್ ಚಾಲಿತವಾಗಿದ್ದು ಶೇ 2 ರಷ್ಟು ಮಾತ್ರ ಡೀಸೆಲ್ ಇಂಜಿನ್‍ಗಳಿವೆ. ರೈಲ್ವೆ ಪ್ರಯಾಣದ ವೇಗ ಪ್ರಸ್ತುತ 110 ಕಿ.ಮೀ ಇದ್ದು ಇದನ್ನು 135 ಕಿ.ಮೀ ವರೆಗೆ ವೇಗ ಹೆಚ್ಚಿಸುವ ಗುರಿಯೊಂದಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಮಾಡಲಾಗುತ್ತಿದೆ. ವಂದೇ ಭಾರತ್ ರೈಲು ಬಡುವರು, ಮಧ್ಯಮ ವರ್ಗದವರಿಗೆ ತುರ್ತು ಪ್ರಯಾಣಕ್ಕಾಗಿ ಕೈಗೆಟಕುವ ದರದಲ್ಲಿ ಟಿಕೆಟ್ ಇದ್ದು ಇದರಲ್ಲಿ ನೀಡಲಾಗಿರುವ ಸೌಲಭ್ಯಗಳ ಬಗ್ಗೆ ಅರಿಯಲು ಪ್ರಯಾಣಿಸಬೇಕೆಂದರು.

ಶೀಘ್ರವೇ 46,000 ರೈಲ್ವೆ ಹುದ್ದೆಗಳ ಭರ್ತಿಗೆ ಅಧಿಸೂಚನೆ, ಕನ್ನಡದಲ್ಲೇ ಪರೀಕ್ಷೆ

ಕನ್ನಡದಲ್ಲೆ ರೈಲ್ವೆ ಪರೀಕ್ಷೆ; ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿ ಖಾಲಿ ಇರುವ 46 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.

ದಾವಣಗೆರೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ಸಭೆಯಲ್ಲಿ ಮಾತನಾಡಿ ದಾವಣಗೆರೆ ನಗರದಲ್ಲಿನ ಮೀನು ಮಾರುಕಟ್ಟೆ ಬಳಿ ರೈಲ್ವೆ ಮೇಲ್ಸೇತುವೆ ಅಥವಾ ಕೆಳಸೇತುವೆ ಅಗತ್ಯವಾಗಿದೆ. ಅಶೋಕ ಟಾಕೀಸ್ ಹತ್ತಿರ ರಸ್ತೆ ಕಿರಿದಾಗಿದ್ದು ಸಂಪರ್ಕ ರಸ್ತೆ ನಿರ್ಮಾಣ ಮಾಡಬೇಕು, ಲಿಂಗೇಶ್ವರ ದೇವಸ್ಥಾನದ ಹತ್ತಿರ ಪಾದಚಾರಿ ಮಾರ್ಗ ನಿರ್ಮಿಸಲು, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಮಾರ್ಗದಲ್ಲಿ ಸೂರಗೊಂಡನಕೊಪ್ಪ ಅಥವಾ ನ್ಯಾಮತಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಅವಕಾಶ ಮಾಡಲು, ಹರಿಹರದಲ್ಲಿನ ರೈಲ್ವೆ ಆಸ್ಪತ್ರೆ, ಸ್ಕೂಲ್ ಮೇಲ್ದರ್ಜೆಗೇರಿಸಲು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.

ಹರಿಹರ ಶಾಸಕರಾದ ಬಿ.ಪಿ.ಹರೀಶ್ ಹೊಸಪೇಟೆ ಹೋಗುವ ಹೆದ್ದಾರಿಯಲ್ಲಿ ಒಂದೇ ರೈಲ್ವೆ ಸೇತುವೆ ಇದ್ದು ಮತ್ತೊಂದು ಬ್ರಿಡ್ಜ್ ನಿರ್ಮಾಣ ಮಾಡಬೇಕು, ಮಳೆ ಬಂದಾಗ ಈ ಮಾರ್ಗದ ವಾಹನಗಳಿಗೆ ತೊಂದರೆಯಾಗುವುದರಿಂದ ರೈಲ್ವೆ ಸೇತುವೆಯ ಅವಶ್ಯಕತೆ ಇದೆ ಎಂದರು.

ಸಭೆಯಲ್ಲಿ ಮೇಯರ್ ಚಮನ್ ಸಾಬ್, ದೂಡಾ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ರೈಲ್ವೆ ಹಿರಿಯ ಅಧಿಕಾರಿ ಶರ್ಮಾ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

‘ದಕ್ಷಿಣ ಲೆಬನಾನ್’ನಲ್ಲಿ ನಡೆದ ಸಂಘರ್ಷದಲ್ಲಿ 8 ಇಸ್ರೇಲಿ ಸೈನಿಕರು ಹುತಾತ್ಮ | Iran attacks Israel

BREAKING : ಉಡುಪಿಯಲ್ಲಿ 5 ಕ್ವಿಂಟಲ್ ‘ಚೀನಾ ಬೆಳ್ಳುಳ್ಳಿ’ ಜಪ್ತಿ : ಆತಂಕದಲ್ಲಿ ಗ್ರಾಹಕರು!

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

23/02/2026 6:19 AM1 Min Read

ರಾಜ್ಯ ಸರ್ಕಾರಿ ಮಹಿಳಾ ನೌಕರರೇ ಗಮನಿಸಿ : `ಋತುಚಕ್ರ ರಜೆ’ಗೆ ಈ ಷರತ್ತುಗಳು ಅನ್ವಯ !

23/02/2026 6:07 AM1 Min Read

ಮಹಾತ್ಮ ಗಾಂಧಿ ಪಾಕಿಸ್ತಾನದ ರಾಷ್ಟ್ರಪಿತ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ !

23/02/2026 5:59 AM1 Min Read
Recent News

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

23/02/2026 6:19 AM

Good News : ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದ ಬಂಪರ್ ಗಿಫ್ಟ್ : ಈಗ ತುರ್ತು ಶಸ್ತ್ರಚಿಕಿತ್ಸೆಗಾಗಿ 10 ಲಕ್ಷ ರೂ. ಲಭ್ಯ.!

23/02/2026 6:12 AM

ರಾಜ್ಯ ಸರ್ಕಾರಿ ಮಹಿಳಾ ನೌಕರರೇ ಗಮನಿಸಿ : `ಋತುಚಕ್ರ ರಜೆ’ಗೆ ಈ ಷರತ್ತುಗಳು ಅನ್ವಯ !

23/02/2026 6:07 AM

ಮಹಾತ್ಮ ಗಾಂಧಿ ಪಾಕಿಸ್ತಾನದ ರಾಷ್ಟ್ರಪಿತ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ !

23/02/2026 5:59 AM
State News
KARNATAKA

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

By kannadanewsnow5723/02/2026 6:19 AM KARNATAKA 1 Min Read

ಬೆಂಗಳೂರು : HRMS ತಂತ್ರಾಂಶದಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಗೆ ಹೊರ ಉಳಿಯಲು ಇಚ್ಛಿಸುವ ಸರ್ಕಾರಿ ನೌಕರರಿಗೆ/…

ರಾಜ್ಯ ಸರ್ಕಾರಿ ಮಹಿಳಾ ನೌಕರರೇ ಗಮನಿಸಿ : `ಋತುಚಕ್ರ ರಜೆ’ಗೆ ಈ ಷರತ್ತುಗಳು ಅನ್ವಯ !

23/02/2026 6:07 AM

ಮಹಾತ್ಮ ಗಾಂಧಿ ಪಾಕಿಸ್ತಾನದ ರಾಷ್ಟ್ರಪಿತ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ !

23/02/2026 5:59 AM

BIG NEWS : ರಾಜ್ಯದಲ್ಲಿ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್ : CM ಸಿದ್ದರಾಮಯ್ಯ ಮಾಹಿತಿ

23/02/2026 5:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.