Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ : ಸದನದಲ್ಲಿ ಶಾಸಕ ಯತ್ನಾಳ್ ಹೇಳಿಕೆ

09/12/2025 1:43 PM

ಬಿಕ್ಕಟ್ಟಿನ ಸಂದರ್ಭದಲ್ಲಿ ಬೆಂಬಲ ನೀಡಿದ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ ಬಾಂಗ್ಲಾದೇಶದ ಮಾಜಿ PM ಶೇಖ್ ಹಸೀನಾ

09/12/2025 1:43 PM

BIG NEWS: ‘482 ಎಕರೆ ಅರಣ್ಯ ಭೂಮಿ’ ಕಬಳಿಕೆ ಯತ್ನ: ‘CID ತನಿಖೆ’ ಕೋರಿ ಸಿಎಂಗೆ ಸಚಿವ ಈಶ್ವರ್ ಖಂಡ್ರೆ ಪತ್ರ

09/12/2025 1:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘482 ಎಕರೆ ಅರಣ್ಯ ಭೂಮಿ’ ಕಬಳಿಕೆ ಯತ್ನ: ‘CID ತನಿಖೆ’ ಕೋರಿ ಸಿಎಂಗೆ ಸಚಿವ ಈಶ್ವರ್ ಖಂಡ್ರೆ ಪತ್ರ
KARNATAKA

BIG NEWS: ‘482 ಎಕರೆ ಅರಣ್ಯ ಭೂಮಿ’ ಕಬಳಿಕೆ ಯತ್ನ: ‘CID ತನಿಖೆ’ ಕೋರಿ ಸಿಎಂಗೆ ಸಚಿವ ಈಶ್ವರ್ ಖಂಡ್ರೆ ಪತ್ರ

By kannadanewsnow0909/12/2025 1:36 PM

ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಎಂ.ಬಿ. ನೇಮಣ್ಣ ಗೌಡ @ ಎಂ.ಬಿ. ಮನ್ಮಥ ಎಂಬ ವ್ಯಕ್ತಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಇನಾಮ್ ರದ್ದು ಕಾಯಿದೆ ಅಡಿ ಹಾಸನದ ವಿಶೇಷ ಜಿಲ್ಲಾಧಿಕಾರಿಗಳ ಆದೇಶದಂತೆ ಬೆಂಗಳೂರು ಕೆಂಗೇರಿ ಬಳಿಯ ಬಿಎಂ ಕಾವಲ್ ನಲ್ಲಿ ತಮಗೆ ಮಂಜೂರು ಮಾಡಲಾಗಿದೆ ಎನ್ನಲಾದ 482 ಎಕರೆ ಕಾಯ್ದಿಟ್ಟ ಅರಣ್ಯಭೂಮಿ ಸೇರಿದಂತೆ ಒಟ್ಟು 532 ಎಕರೆ ಜಮೀನಿನ ದಾಖಲೆಗಳನ್ನು 3 ತಿಂಗಳೊಳಗೆ ತಮ್ಮ ಹೆಸರಿಗೆ ಮಾಡಿಕೊಡುವಂತೆ ಆದೇಶ ಪಡೆದಿದ್ದಾರೆ. 90 ದಿನ ಪೂರ್ಣಗೊಳ್ಳಲು 1 ದಿನ ಬಾಕಿ ಇರುವವರೆಗೂ ಸರ್ಕಾರದ ಹೆಚ್ಚುವರಿ ಸರ್ಕಾರಿ ವಕೀಲ ಯೋಗಣ್ಣ ಈ ಮಾಹಿತಿಯನ್ನು ಸರ್ಕಾರಕ್ಕಾಗಲೀ, ಅರಣ್ಯ ಇಲಾಖೆಗಾಗಲೀ ನೀಡಿರುವುದಿಲ್ಲ ಬದಲಾಗಿ ಮೇಲ್ಮನವಿ ಸಲ್ಲಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ನಮೂದಿಸಿ ಅರ್ಜಿದಾರರಿಗೆ ಅನುಕೂಲ ಮಾಡಿಕೊಡುವಂತೆ ವರ್ತಿಸಿದ್ದು, ಇದು ಶಂಕಾಸ್ಪದವಾಗಿದೆ ಎಂದೂ ಪತ್ರದಲ್ಲಿ ತಿಳಿಸಿದ್ದಾರೆ.

ಸುಮಾರು 25 ಸಾವಿರ ಕೋಟಿ ರೂ. ಬೆಲೆ ಬಾಳುವ ಈ ಭೂಮಿಯ ಬಗ್ಗೆ ಕೊನೆ ಕ್ಷಣದಲ್ಲಿ ಇಲಾಖೆಗೆ ಮಾಹಿತಿ ಬಂದಿದ್ದು, ಕೂಡಲೇ ತಾವು ಸಭೆ ನಡೆಸಿ ಮೇಲ್ಮನವಿ ಸಲ್ಲಿಸಲು ಸೂಚಿಸಿರುವುದಾಗಿ ತಿಳಿಸಿರುವ ಈಶ್ವರ ಖಂಡ್ರೆ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿ ಕಬಳಿಸಲು ಯತ್ನಿಸುತ್ತಿದ್ದು, ಮೇಲೆ ಹೇಳಲಾದ ವ್ಯಕ್ತಿ ಮನ್ಮಥ ಅಲಿಯಾಸ್ ನೇಮಣ್ಣ ಗೌಡ ಈ ಹಿಂದೆಯೂ ಇದೇ ರೀತಿ ಸುಳ್ಳು ಮತ್ತು ನಕಲಿ ದಾಖಲೆ ನೀಡಿ ಸರ್ಕಾರಿ ಭೂಮಿಯ ಮೇಲೆ ಹಕ್ಕು ಸಾಧಿಸಲು ಪ್ರಯತ್ನಿಸಿದ್ದಾರೆ.

ಈ ಸಂಬಂಧ ಚಿಕ್ಕಮಗಳೂರಿನ ಅಂದಿನ ಉಪ ವಿಭಾಗಾಧಿಕಾರಿ ದಬ್ಜೀತ್ ಕುಮಾರ್ ಸದರಿ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ 25.09.2024ರ ತಮ್ಮ ಆದೇಶದಲ್ಲಿ ತಿಳಿಸಿರುತ್ತಾರೆ. ಬೆಂಗಳೂರು ಬಿ.ಎಂ. ಕಾವಲ್ ವಿಚಾರ ನನ್ನ ಗಮನಕ್ಕೆ ಬಂದ ಕೂಡಲೇ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಿಸಲು ಸೂಚಿಸಿದ್ದು, 28.11.2025ರಂದು ದೂರು ಸ್ವೀಕರಿಸಿರುವ ಮೂಡಿಗೆರೆ ಆರಕ್ಷಕ ವೃತ್ತ ನಿರೀಕ್ಷಕರು ಈವರೆಗೆ ಎಫ್.ಐ.ಆರ್. ದಾಖಲಿಸದೇ ಇರುವುದೂ ಅನುಮಾನಕ್ಕೆ ಕಾರಣವಾಗಿದೆ ಎಂದು ಈಶ್ವರ ಖಂಡ್ರೆ ಪತ್ರದಲ್ಲಿ ತಿಳಿಸಿದ್ದಾರೆ.

ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿ ಕಬಳಿಸುವವರಿಗೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕೆಲವು ಅಧಿಕಾರಿಗಳು ಮತ್ತು ಹೆಚ್ಚುವರಿ ಸರ್ಕಾರಿ ವಕೀಲರು ಸಹಾಯ ಮಾಡುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದ್ದು, ಈ ಬಗ್ಗೆ ಒಂದು ವಿಶೇಷ ತಂಡ ರಚಿಸಿ ಅಥವಾ ಸಿಐಡಿಗೆ ವಹಿಸಿ ಸಮಗ್ರ ತನಿಖೆ ಮಾಡಿಸಲು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಎಸಿಎಫ್ ವಿರುದ್ಧ ಕ್ರಮಕ್ಕೂ ಸೂಚನೆ:

ಈ ಮಧ್ಯೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಸುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ಚಿಕ್ಕಮಗಳೂರಿನ ಅಂದಿನ ಉಪ ವಿಭಾಗಾಧಿಕಾರಿ ಸೂಚಿಸಿದ್ದರೂ, ದೂರು ದಾಖಲಿಸಲು ವಿಳಂಬ ಮಾಡಿರುವ ಬಗ್ಗೆಯೂ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ : ಸದನದಲ್ಲಿ ಶಾಸಕ ಯತ್ನಾಳ್ ಹೇಳಿಕೆ

09/12/2025 1:43 PM1 Min Read

ಬಿಜೆಪಿಗರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವ್ಯಂಗ್ಯ

09/12/2025 1:34 PM1 Min Read

ಬಿಜೆಪಿ ನಾಯಕರಿಗೆ ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಸಮಸ್ಯೆಯೇ.?: ಸಚಿವ ಕೃಷ್ಣ ಬೈರೇಗೌಡರ ಟೀಕೆ

09/12/2025 1:30 PM2 Mins Read
Recent News

ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ : ಸದನದಲ್ಲಿ ಶಾಸಕ ಯತ್ನಾಳ್ ಹೇಳಿಕೆ

09/12/2025 1:43 PM

ಬಿಕ್ಕಟ್ಟಿನ ಸಂದರ್ಭದಲ್ಲಿ ಬೆಂಬಲ ನೀಡಿದ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ ಬಾಂಗ್ಲಾದೇಶದ ಮಾಜಿ PM ಶೇಖ್ ಹಸೀನಾ

09/12/2025 1:43 PM

BIG NEWS: ‘482 ಎಕರೆ ಅರಣ್ಯ ಭೂಮಿ’ ಕಬಳಿಕೆ ಯತ್ನ: ‘CID ತನಿಖೆ’ ಕೋರಿ ಸಿಎಂಗೆ ಸಚಿವ ಈಶ್ವರ್ ಖಂಡ್ರೆ ಪತ್ರ

09/12/2025 1:36 PM

ಬಿಜೆಪಿಗರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವ್ಯಂಗ್ಯ

09/12/2025 1:34 PM
State News
KARNATAKA

ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ : ಸದನದಲ್ಲಿ ಶಾಸಕ ಯತ್ನಾಳ್ ಹೇಳಿಕೆ

By kannadanewsnow0509/12/2025 1:43 PM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ರೈತರ ಪರವಾಗಿ ಬಿಜೆಪಿ ನಾಯಕರು ಹೋರಾಟ ನಡೆಸುತ್ತಿದ್ದು ಮಾಲನಿ ಸಿಟಿಯಿಂದ ಸುವರ್ಣಸೌಧಕ್ಕೆ ಮುತಿಗೆ ಹಾಕಲು ಯತ್ನಿಸಿದಾಗ…

BIG NEWS: ‘482 ಎಕರೆ ಅರಣ್ಯ ಭೂಮಿ’ ಕಬಳಿಕೆ ಯತ್ನ: ‘CID ತನಿಖೆ’ ಕೋರಿ ಸಿಎಂಗೆ ಸಚಿವ ಈಶ್ವರ್ ಖಂಡ್ರೆ ಪತ್ರ

09/12/2025 1:36 PM

ಬಿಜೆಪಿಗರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವ್ಯಂಗ್ಯ

09/12/2025 1:34 PM

ಬಿಜೆಪಿ ನಾಯಕರಿಗೆ ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಸಮಸ್ಯೆಯೇ.?: ಸಚಿವ ಕೃಷ್ಣ ಬೈರೇಗೌಡರ ಟೀಕೆ

09/12/2025 1:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.