ತೆಲಂಗಾಣ: ಹೆದ್ದಾರಿಯಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸೂರ್ಯಪೇಟ್‌ನಲ್ಲಿ ಭಾನುವಾರ ಮುಂಜಾನೆ ಮುನಗಲಾ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೇರಳದ ಇಸ್ಲಾಮಿಕ್ ಸಂಸ್ಥೆಯೊಂದರಲ್ಲಿ ʻಸಂಸ್ಕೃತʼ ಪಾಠ: ನಿರರ್ಗಳವಾಗಿ ಶ್ಲೋಕ, ಮಂತ್ರ ಪಠಣೆ ಮಾಡುವ ವಿದ್ಯಾರ್ಥಿಗಳು

ಮೃತರು ಮುನಗಲ್ ಹೊರವಲಯದಲ್ಲಿರುವ ಅಯ್ಯಪ್ಪ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.

ಟ್ರ್ಯಾಕ್ಟರ್‌ನಲ್ಲಿ ಕನಿಷ್ಠ 30 ಜನರು ಪ್ರಯಾಣಿಸುತ್ತಿದ್ದಾಗ ವಾಹನವು ತಪ್ಪು ಮಾರ್ಗದಲ್ಲಿ ಚಲಿಸಿ ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿತ್ತು. ಅದೇ ವೇಳೆ ವೇಗವಾಗಿ ವಿಜಯವಾಡ ಕಡೆಗೆ ಹೋಗುತ್ತಿದ್ದ ಲಾರಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ 30 ಮಂದಿ ವಾಹನದಿಂದ ರಸ್ತೆಗೆ ಬಿದ್ದಿದ್ದಾರೆ. ವೇಗವಾಗಿ ಬಂದ ಲಾರಿ ಟ್ರಾಕ್ಟರ್ ಅನ್ನು ಹಲವು ಮೀಟರ್‌ಗಳವರೆಗೆ ಎಳೆದುಕೊಂಡು ಬಂದು ನಿಂತಿತ್ತು ಎನ್ನಲಾಗುತ್ತಿದೆ.

ಮಾಹಿತಿ ಪಡೆದ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಎನ್ನಲಾಗುತ್ತಿದೆ.

Vastu tips: ನಿಮ್ಮ ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾಗುತ್ತಿವೆಯೇ? ಹಾಗಾದ್ರೆ, ಈ ವಾಸ್ತು ಸಲಹೆಗಳನ್ನು ಅನುಸರಿಸಿ

Share.
Exit mobile version