Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೋಲಾರದ ವೇಮಗಲ್ ನಲ್ಲಿ 20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಸಚಿವ ಎಂ.ಬಿ.ಪಾಟೀಲ
KARNATAKA

ಕೋಲಾರದ ವೇಮಗಲ್ ನಲ್ಲಿ 20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಸಚಿವ ಎಂ.ಬಿ.ಪಾಟೀಲ

By ವಸಂತ ಬಿ ಈಶ್ವರಗೆರೆ

ಕೋಲಾರ : ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ 500 ಲಘು ಹೆಲಿಕಾಪ್ಟರ್ ಸಿದ್ಧವಾಗಲಿವೆ. ಈ ಘಟಕವು ರಾಜ್ಯದಲ್ಲಿ ಕಾರ್ಯಾರಂಭ ಮಾಡುತ್ತಿರುವುದು ಐತಿಹಾಸಿಕ ಸಾಧನೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಮಂಗಳವಾರ ಇಲ್ಲಿ ನಡೆದ ನೂತನ ಘಟಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರೋನ್ ಅವರು ಮಹಾರಾಷ್ಟ್ರದ ಲೋಕಭವನದಿಂದ ವರ್ಚುಯಲ್ ಮೂಲಕ ಈ ಘಟಕವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವೇಮಗಲ್ ಘಟಕದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್, ಕೇಂದ್ರ ವಿಮಾನಯಾನ ಸಚಿವ ಕೆ.ರಾಮಮೋಹನ ನಾಯ್ಡು, ಕೋಲಾರ ಸಂಸದ ಮಲ್ಲೇಶಬಾಬು ಕೂಡ ಇದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ ಅವರು, ‘ಈ ಘಟಕಕ್ಕೆ ನಾನು ಕೈಗಾರಿಕಾ ಸಚಿವನಾದ ಮೇಲೆ 17 ಎಕರೆ ಜಾಗ ಕೊಟ್ಟಿದ್ದು ದಾಖಲೆ ಅವಧಿ ಅಂದರೆ ಒಂದೂವರೆ ವರ್ಷದಲ್ಲಿ ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯ’ ಎಂದು ಹರ್ಷ ವ್ಯಕ್ತಪಡಿಸಿದರು.

‘ಯೋಜನೆಗೆ ತ್ವರಿತ ಗತಿಯಲ್ಲಿ ಅನುಮೋದನೆ, ಇಲಾಖೆಗಳ ನಡುವೆ ಅತ್ಯುತ್ತಮ ಸಮನ್ವಯ, ಮೂಲಸೌಕರ್ಯ ಸನ್ನದ್ಧತೆ ಮತ್ತು ಕೈಗಾರಿಕಾ ಪಾಲುದಾರರೊಂದಿಗೆ ಸಕ್ರಿಯ ಪಾಲ್ಗೊಳ್ಳುವಿಕೆಗಳಿಂದ ಈ ಚಾರಿತ್ರಿಕ ಯೋಜನೆ ಕ್ಷಿಪ್ರಗತಿಯಲ್ಲಿ ಅನುಷ್ಠಾನಗೊಂಡಿದೆ’ ಎಂದು ಸಚಿವರು ಹೇಳಿದರು.

ಫ್ರಾನ್ಸ್, ಅಮೆರಿಕ, ಬ್ರೆಜಿಲ್ ನಂತರ ನಮ್ಮಲ್ಲಿ ಜಗತ್ತಿನ ನಾಲ್ಕನೆಯ ಎಚ್125 ಹೆಲಿಕಾಪ್ಟರ್ ತಯಾರಿಕೆ ಮತ್ತು ಅಂತಿಮ ಜೋಡಣೆ ಘಟಕ (ಎಫ್ಎಎಲ್- ಫೈನಲ್ ಅಸೆಂಬ್ಲಿ ಲೈನ್) ಬಂದಿರುವುದು ಈ ವಲಯಕ್ಕೆ ಮತ್ತಷ್ಟು ಬಲ ತರಲಿದೆ. ಜೊತೆಗೆ ನಿರ್ವಹಣೆ, ದುರಸ್ತಿ ಮತ್ತು ಓವರಹಾಲ್ (ಎಂಆರ್ಒ- ಮೇಂಟೆನೆನ್ಸ್, ರಿಪೇರ್ & ಓವರ್ಹಾಲ್) ಸ್ಥಾವರವೂ ಆರಂಭಗೊಂಡಿರುವುದು ರಾಜ್ಯದ ಕೈಗಾರಿಕಾಸ್ನೇಹಿ ವಾತಾವರಣಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಇಲ್ಲಿ ಮೊದಲಿಗೆ ವರ್ಷಕ್ಕೆ 10 ಹೆಲಿಕಾಪ್ಟರುಗಳನ್ನು ತಯಾರಿಸಲಾಗುವುದು. ಮುಂದಿನ ಎರಡು ದಶಕಗಳಲ್ಲಿ 500 ಲಘು ಹೆಲಿಕಾಪ್ಟರ್ ಸಿದ್ಧವಾಗಲಿವೆ. ಇಲ್ಲಿ ಏವಿಯಾನಿಕ್ಸ್, ಹೈಡ್ರಾಲಿಕ್ ಸರ್ಕ್ಯೂಟ್, ಬಿಡಿಭಾಗಗಳು, ಇಂಧನ ವ್ಯವಸ್ಥೆ ಮತ್ತು ಎಂಜಿನ್ನುಗಳ ತಯಾರಿಕೆ ಸೇರಿದಂತೆ ಹಲವು ಮಹತ್ವದ ಚಟುವಟಿಕೆಗಳು ನಡೆಯಲಿವೆ. ಆಂಧ್ರಪ್ರದೇಶ, ಉತ್ತರಪ್ರದೇಶ ಮತ್ತು ಗುಜರಾತ್ ರಾಜ್ಯಗಳ ತೀವ್ರ ಸ್ಪರ್ಧೆಯನ್ನು ಎದುರಿಸಿ, ರಾಜ್ಯವು ಈ ಯೋಜನೆಯನ್ನು ಗೆದ್ದುಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ಅವರು ಬಣ್ಣಿಸಿದ್ದಾರೆ.

ಏರ್ ಬಸ್ ಕಂಪನಿಯು ಜಾಗತಿಕ ಮಟ್ಟದಲ್ಲಿ ಏಕ ಎಂಜಿನ್ ಹೆಲಿಕಾಪ್ಟರುಗಳ ಕ್ಷೇತ್ರದಲ್ಲಿ 4,300 ಹೆಲಿಕಾಪ್ಟರುಗಳೊಂದಿಗೆ, ಮಾರುಕಟ್ಟೆಯಲ್ಲಿ ಶೇಕಡ 80ರಷ್ಟು ಪಾಲು ಹೊಂದಿದೆ. ಈ ಹೆಲಿಕಾಪ್ಟರುಗಳು ಇದುವರೆಗೂ 38 ಮಿಲಿಯನ್ ಗಂಟೆಗಳಷ್ಟು ಕಾಲ ಹಾರಾಟ ನಡೆಸಿ ದಾಖಲೆ ನಿರ್ಮಿಸಿವೆ. ರಾಜ್ಯದಲ್ಲಿ ಎಚ್125 ದರ್ಜೆಯ ಹೆಲಿಕಾಪ್ಟರ್ ತಯಾರಿಕೆಗೆ ಬೇಕಾದ ವಿಶ್ವಾಸಾರ್ಹತೆ ಮತ್ತು ಎಂಜಿನಿಯರಿಂಗ್ ಪರಿಣತಿ ಇದೆ. ಈ ವಲಯದಲ್ಲಿ ರಾಜ್ಯ ಸರಕಾರವು ಕೇಂದ್ರ ಸರಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುವ ಆಸಕ್ತಿ ಹೊಂದಿದೆ ಎಂದು ಅವರು ಹೇಳಿದ್ದಾರೆ.

ಈ ಘಟಕವು ಭಾರತದ ದಕ್ಷತೆಯು ಪಡೆದುಕೊಳ್ಳುತ್ತಿರುವ ಹೊಸ ಶಕ್ತಿ ಮತ್ತು ಜಾಗತಿಕ ಮಟ್ಟದಲ್ಲಿ ಏರ್ಪಡಿಸಿಕೊಳ್ಳುವ ಸಹಭಾಗಿತ್ವದ ಸಂಕೇತವಾಗಿದೆ. ಇದರಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಮೃದ್ಧ ಅವಕಾಶಗಳು ತೆರೆದುಕೊಳ್ಳಲಿದ್ದು, ಉದ್ಯೋಗಸೃಷ್ಟಿಯೂ ಹೆಚ್ಚಾಗಲಿದೆ. ಇದರಿಂದ ರಾಜ್ಯದ ಯುವಜನರಿಗೆ ಆಧುನಿಕ ತಂತ್ರಜ್ಞಾನ ವಲಯಕ್ಕೆ ಪ್ರವೇಶ ಸಿಗಲಿದೆ ಎಂದು ಪಾಟೀಲ ಹೇಳಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಲೋಪದೋಷ ಸರಿಪಡಿಸಿ: ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ಮನವಿ

ರಾಜ್ಯದಲ್ಲಿ 29 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ಸಭೆ ಕರೆಯುತ್ತೇವೆ : ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿಕೆ

Share. Facebook Twitter LinkedIn WhatsApp Email

Related Posts

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

2 Mins Read

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

1 Min Read

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

1 Min Read
Recent News

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

State News
KARNATAKA

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ದಿನದಿಂದ ದಿನಕ್ಕೆ ಪೆಟ್ರೋಲ್ ದರ ಗಗನಕ್ಕೇರುತ್ತಿರುವ ಬೆನ್ನಲ್ಲೇ, ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ವಿನೂತನ ಕಳ್ಳರ ಗ್ಯಾಂಗ್…

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.