ಬೆಂಗಳೂರು : ಒಂದೆಡೆ ಸುಡು ಬಿಸಿಲು ಮತ್ತೊಂದೆಡೆ ಮತದಾರನ ಉತ್ಸಾಹ ರಾಜ್ಯದಲ್ಲಿ ಎರಡನೇ ಸುತ್ತಿನ ಲೋಕಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದೂ, ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ.

ಹೌದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಎರಡನೇ ಹಂತದ ಮತದಾನ ನಡೆದಿದ್ದು, ಮತದಾರರಿಂದ ಭರ್ಜರಿ ರೆಸ್ಪೋನ್ಸ್ ಸಿಕ್ಕಿದ್ದು, ಇಂದು ಮಧ್ಯಾಹ್ನ 3 ಗಂಟೆಯವರೆಗೆ ಶೇ 54.20 ರಷ್ಟು ಮತದಾನ ಆಗಿದೆ ಎಂದು ತಿಳಿದುಬಂದಿದೆ.

ರಾಯಚೂರು 49.4, ಬೀದರ್ 47.89, ಕಲ್ಬುರ್ಗಿ 47.67, ಚಿಕ್ಕೋಡಿ 59.65, ಕೊಪ್ಪಳ 55.67, ವಿಜಯಪುರ 49.89, ಬಾಗಲಕೋಟೆ 54.95, ಬೆಳಗಾವಿ 53.85, ಬಳ್ಳಾರಿ 56.56, ಹಾವೇರಿ 58.45, ಶಿವಮೊಗ್ಗ 57.96, ಉತ್ತರ ಕನ್ನಡ 55.98, ದಾವಣಗೆರೆ 57.31 ಹಾಗೂ ಧಾರವಾಡ ಕ್ಷೇತ್ರದಲ್ಲಿ 55 ರಷ್ಟು ಮತದಾನ ನಡೆದಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

Share.
Exit mobile version