ಬಾಗಲಕೋಟೆ: ಜಿಲ್ಲೆಯಲ್ಲಿ ಪೊಲೀಸ್ ಸಮವಸ್ತ್ರದಲ್ಲೇ ಸ್ವಾಮೀಜಿಯೊಬ್ಬರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವಂತ ಪೊಲೀಸ್ ಇಲಾಖೆಯು, ಆರು ಮಂದಿಯನ್ನು ವರ್ಗಾವಣೆ ಮಾಡಿ ಬಿಸಿ ಮುಟ್ಟಿಸಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ಪೊಲೀಸ್ ಠಾಣೆಯ ಪೊಲೀಸರು ಸ್ವಾಮೀಜಿಯವರೊಬ್ಬರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದು, ಅವರಿಂದ ಭಕ್ಷೀಸ್ ಆಗಿ ಹಣವನ್ನು ಪಡೆಯುತ್ತಿರುವಂತ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋ ಕಂಡಂತ ಸಾರ್ವಜನಿಕರು ಪೊಲೀಸರ ನಡೆಯನ್ನು ತೀವ್ರವಾಗಿ ಖಂಡಿಸಿದ್ದರು.
ಈ ಬೆನ್ನಲ್ಲೇ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ಡಿ ಅವರು ಸ್ವಾಮೀಜಿ ಕಾಲಿಗೆ ಬಿದ್ದು ಪೊಲೀಸ್ ಸಮವಸ್ತ್ರದಲ್ಲೇ ಆಶೀರ್ವಾದ ಪಡೆದಂತ ಆರು ಮಂದಿಯನ್ನು ವರ್ಗಾವಣೆ ಮಾಡಿ ಆದೇಶಿಸಿದ್ದಾರೆ.
ಬಾದಾಮಿ ಪೊಲೀಸ್ ಠಾಣೆಯ ವಿವಿಧ ಠಾಣೆಗಳಿಗೆ ಸ್ವಾಮೀಜಿ ಕಾಲಿಗೆ ಬಿದ್ದಂತ ಆರು ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿ, ಬಿಸಿ ಮುಟ್ಟಿಸಿದ್ದಾರೆ.
BREAKING NEWS: ಪಾಕಿಸ್ತಾನದ ಮಸೀದಿಯಲ್ಲಿ ಭೀಕರ ಸ್ಫೋಟ: ಇಸ್ಲಾಮಿಕ್ ನಾಯಕ ಸೇರಿ ಹಲವರಿಗೆ ಗಾಯ
ಮಂಗಳೂರಲ್ಲಿ ನಿಷೇಧಿತ PFI ಮತ್ತೆ ಆಕ್ಟೀವ್? ಅಕ್ರಮ ಪಿಸ್ತೂಲ್ ಮಾರಾಟ ಜಾಲ ಬೇಧಿಸಿದ ಪೊಲೀಸರು