ಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಇಂದು 639 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ ಇಬ್ಬರು ಸಾವನ್ನಪ್ಪಿದ್ದಾರೆ.
BIGG NEWS: ಮಂಡ್ಯದಲ್ಲಿ ‘ ಭಾವೈಕ್ಯತೆಯ ಗಣೇಶ ಪ್ರತಿಷ್ಠಾಪನೆ ‘ : ಮುಸ್ಲಿಮರೇ ‘ಪ್ರಸಾದ ತಯಾರಿಸಿ ಭಕ್ತರಿಗೆ ‘ ವಿತರಣೆ
ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಬಳ್ಳಾರಿ 18, ಬೆಂಗಳೂರು ಗ್ರಾಮಾಂತರ 32, ಬೆಂಗಳೂರು ನಗರ 281, ಚಾಮರಾಜನಗರ 18, ದಕ್ಷಿಣ ಕನ್ನಡ 19, ಧಾರವಾಡದಲ್ಲಿ 15 ಜನರಿಗೆ ಕೊರೋನಾ ಕೇಸ್ ( Corona Case ) ಪತ್ತೆಯಾಗಿದೆ ಎಂದು ಹೇಳಿದೆ.
ಹಾಸನ 57, ಕಲಬುರ್ಗಿ 10, ಕೋಲಾರ 22, ಮೈಸೂರು 32, ರಾಯಚೂರು 14, ರಾಮನಗರ 13, ಶಿವಮೊಗ್ಗ 34, ತುಮಕೂರು 10 ಹಾಗೂ ಉಡುಪಿ 11 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದು 639 ಜನರಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 4051554ಕ್ಕೆ ಏರಿಕೆಯಾಗಿದೆ.
BIGG NEWS : ಹಾವೇರಿಯಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಖದೀಮರು : 85 ಲಕ್ಷ ಹಣ ಜಪ್ತಿ ಮಾಡಿ ಪೊಲೀಸರು
ಇಂದು 967 ಸೇರಿದಂತೆ ಇದುವರೆಗೆ 4004866 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಸೋಂಕಿನಿಂದಾಗಿ ಮೈಸೂರು ಮತ್ತು ತುಮಕೂರು ಜಿಲ್ಲೆಯಲ್ಲಿ ತಲಾ ಒಬ್ಬರು ಸೇರಿದಂತೆ ಇದುವರೆಗೆ 40201 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.