ಬೆಂಗಳೂರು: ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಮಸ್ತ ಅಧಿಕಾರಿ/ ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ ಭಾಆಸೇ, ಅವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ ಪಾಷ ಅವರು, ನಮ್ಮ ಚಾಲನಾ ಸಿಬ್ಬಂದಿಗಳು ಬಹಳ ಸಂತೋಷದಿಂದ ರಾಜ್ಯೋತ್ಸವವನ್ನು ಆಚರಿಸುತ್ತಾರೆ. ಕರ್ನಾಟಕ ರಾಜ್ಯದ ಇತಿಹಾಸವನ್ನು ವಿವರಿಸುತ್ತಾ ಮಾತನಾಡಿದ ಅವರು ಮೈಸೂರು ರಾಜ್ಯದಿಂದ ಕರ್ನಾಟಕವಾಗಿ ಹೆಸರಿಸಲಾದ ನಾಡು ಕರ್ನಾಟಕ ಎಂದರು.
ಶ್ರೀಯುತರುಗಳಾದ ಆಲೂರು ವೆಂಕಟರಾಯರು, ಕುವೆಂಪು, ಅನಕೃ, ಇತರೆ ಮಹನೀಯರುಗಳು ಕನ್ನಡ ನಾಡಿಗಾಗಿ ದುಡಿದಿದ್ದಾರೆ. ಕನ್ನಡ ನಾಡು ನುಡಿಯನ್ನು ಗೌರವಿಸಿ, ಉಳಿಸಿ, ಬೆಳೆಸುವ ಸಂಕಲ್ಪ ಪ್ರತಿಯೊಬ್ಬರಲ್ಲಿಯೂ ಮೂಡಬೇಕು. ಎಲ್ಲರನ್ನೂ ಪ್ರೋತ್ಸಾಹಿಸಿ ಭಾಷೆಯನ್ನು ಕಲಿಯುವಂತೆ ಮಾತನಾಡಬೇಕು. ಕನ್ನಡ ಭಾಷೆ, ಕಲೆ, ಸಂಸ್ಕೃತಿ ಮತ್ತು ನೆಲದ ಬಗ್ಗೆ ಹೆಮ್ಮೆ ಮತ್ತು ಗೌರವವಿರಲಿ ಎಂದು ತಿಳಿಸಿದರು.
ಕೆ ಎಸ್ ಆರ್ ಟಿ ಸಿ ಕಚೇರಿಯಲ್ಲಿ ನಡೆದಂತ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಿಗಮದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.








