ಬೆಂಗಳೂರು: ರಾಜ್ಯದಲ್ಲಿ 8 ಲಕ್ಷ ಬಿಎಪಿಎಲ್ ಕಾರ್ಡ್ ರದ್ದು ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಈ ಬಗ್ಗೆ ಮಾಧ್ಯಮಗಳ ಬಗ್ಗೆ ಮಾತನಾಡಿದ ಸಚಿವ ಕೆ.ಹೆಚ್ ಮುನಿಯಪ್ಪ ಈ ಬಗ್ಗೆ ಅಧಿಕಾರಿಗಳ ಸಭೆ ನಡೆಯುತ್ತಿದ್ದು, ಈ ಬಗ್ಗೆ ಶೀಘ್ರದಲ್ಲಿ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಅಂತ ಹೇಳಿದರು. ಇಂದು ರಾಜ್ಯದಲ್ಲಿ 8 ಲಕ್ಷ ಬಿಎಪಿಎಲ್ ಕಾರ್ಡ್ ರದ್ದು ಮಾಡುವ ಬಗ್ಗೆ ಅಂತಿಮ ನಿರ್ಧಾರವನ್ನು ಸಚಿವರ ಸಭೆ ಬಳಿಕ ನಾಳೆ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಲಿದ್ದಾರೆ ಎನ್ನಲಾಗಿದೆ. ಸರ್ಕಾರದ ಮಾನದಂಡಗಳ ಅನುಸಾರ ₹1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಇರುವವರು ಬಿಪಿಎಲ್ ಪಡಿತರಚೀಟಿ ಹೊಂದಲು ಅನರ್ಹರು ಎನ್ನಲಾಗಿದೆ. ಕಂಪನಿಗಳಲ್ಲಿ ನಿರ್ದೇಶಕರು, ನಾಲ್ಕು ಚಕ್ರಗಳ ವಾಹನ ಹೊಂದಿದವರು, ಜಿಎಸ್ಟಿ ನಂಬರ್ ಹೊಂದಿರುವ ಒಟ್ಟು ₹25 ಲಕ್ಷಕ್ಕಿಂತ ಹೆಚ್ಚಿನ ವಹಿವಾಟು ನಡೆಸುವವರು ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರು ಎನ್ನಲಾಗಿದೆ. ಬಿಪಿಎಲ್ ಪಡಿತರ ಚೀಟಿಗಳನ್ನು ಸೆ. 30ರ ಒಳಗೆ ರದ್ದು ಪಡಿಸುವಂತೆ ಎಲ್ಲ ರಾಜ್ಯಗಳಿಗೆ ಇತ್ತೀಚೆಗೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.