ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶ ಹೊರಡಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಕಮೀಷನರ್ ಆಗಿದ್ದಂತ ಐಎಎಸ್ ಅಧಿಕಾರಿ ಶ್ರೀಮತಿ ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಾಗಗಳ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಮೇಜರ್ ಮಣಿವಣ್ಣನ್ ಪಿ ಅವರನ್ನು ವರ್ಗಾವಣೆ ಮಾಡಿದೆ.
ಇನ್ನೂ ಬೆಸ್ಕಾಂ ಎಂ.ಡಿಯಾಗಿದ್ದಂತ ರಾಜೇಂದ್ರ ಚೋಳನ್.ಪಿ ಅವರನ್ನು ವರ್ಗಾವಣೆ ಮಾಡಿ, ಬೆಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿದೆ. ಬೆಸ್ಕಾಂ ಎಂಡಿಯಾಗಿ ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಮಹಂತೇಶ್ ಬೀಳಗಿ ಅವರನ್ನು ನೇಮಿಸಿದೆ.
2012ರ ಐಎಎಸ್ ಅಧಿಕಾರಿ ಶ್ರೀನಿವಾಸ್ ಕೆ ಅವರು ಹುದ್ದೆಯ ನಿರೀಕ್ಷೆಯಲ್ಲಿದ್ದರು. ಅವರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಸಂಗಪ್ಪ ಅವರನ್ನು ವರ್ಗಾವಣೆ ಮಾಡಿದೆ. ಗದಗ ಜಿಲ್ಲಾಧಿಕಾರಿಯಾಗಿದ್ದಂತ ಸುಂದರೀಶ್ ಬಾಬು ಎಂ ಅವರನ್ನು, ಕೊಪ್ಪಳ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ವರ್ಗಾವಣೆ ಮಾಡಿದೆ.
ಕೆ ಎಸ್ ಎಂಎಸ್ ಸಿಎಲ್ ಎಂಡಿಯಾಗಿದ್ದಂತ ನಾಗರಾಜ ಎನ್ ಎಂ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ ನೇಮಿಸಿದೆ. ಕುಮಟಾ ಉಪ ವಿಭಾಗದ ಸಹಾಯಕ ಜಿಲ್ಲಾಧಿಕಾರಿಯಾಗಿದ್ದಂತ ರಾಹುಲ್ ರತ್ನಂ ಪಾಂಡೆ ಅವರನ್ನು ವರ್ಗಾವಣೆ ಮಾಡಿ, ಅಪ್ಪರ್ ಕೃಷ್ಣಾ ಯೋಜನೆಯ ಜನರಲ್ ಮ್ಯಾನೇಜರ್ ಆಗಿ ನೇಮಿಸಿದೆ.