ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದ್ದು, ಮುಂದಿನ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಸೇನೆ: ಮದ್ದುಗುಂಡು, ಆಯುಧಗಳ ವಶ
ಆಗಸ್ಟ್ 1 ರಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ. ಆಗಸ್ಟ್ 2,3 ರಂದು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡು ಮಿಂಚು ಸಹಿತ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
BIGG NEWS : ಆನಂದ್ ಸಿಂಗ್ ಗೆ ತವರು ಜಿಲ್ಲೆ ಉಸ್ತುವಾರಿ ನೀಡಿ ವಾಪಸ್ ಪಡೆದ ರಾಜ್ಯ ಸರ್ಕಾರ!
ಇನ್ನು ಉತ್ತರ ಕರ್ನಾಟಕದ ಯಾದಗಿರಿ, ವಿಜಯಪುರ, ರಾಯಚೂರು, ಧಾರವಾಡ, ಕೊಪ್ಪಳ ಗದಗ ಜಿಲ್ಲೆಗಳು ಹಾಗೂ ತುಮಕೂರು, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಆಗಸ್ಟ್ 2 ರಿಂದ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.