ಬೆಂಗಳೂರು : ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ 75ನೇ ಜನ್ಮದಿನಾಚರಣೆಯ ಸಿದ್ದರಾಮಯ್ಯ ಅಮೃತಮಹೋತ್ಸವ ಕಾರ್ಯಕ್ರಮಕ್ಕೆ 500 ಕ್ಕೂ ಹೆಚ್ಚು ವಾಯುವ್ಯ ರಸ್ತೆ ಸಾರಿಗೆ ಬಸ್ಗಳು ಸೇರಿದಂತೆ ಒಟ್ಟು 7,000 ಬಸ್ಗಳು ಬುಕ್ ಆಗಿದ್ದು, ಬಸ್ ಗಳು, ಬಾಡಿಗೆ ವಾಹನಗಳು ಸಿಗದೇ ವಾಹನ ಸವಾರರು ಪರದಾಡುವಂತಾಗಿದೆ.
ಸಿದ್ದರಾಮಯ್ಯ ಅವರ ಜನ್ಮದಿನದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಇಂದು ಸಿದ್ದರಾಮಯ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯದ ಸಾರಿಗೆ ಇಲಾಖೆಯ ಹಲವು ಬಸ್ ಗಳನ್ನು ಬುಕ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಮಯಕ್ಕೆ ಸರಿಯಾಗಿ ಬಸ್ ಸಿಗದೇ ವಾಹನ ಸವಾರರು ಪರದಾಡುವಂತಾಗಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಹಲವು ಕರಾರು ಒಪ್ಪಂದದ ಮೇಲೆ ವಾಹನಗಳನ್ನು ಒದಗಿಸಲಾಗಿದ್ದು, ವಿವಿಧಡೆ ಬಸ್ ಸಂಚಾರದಲ್ಲಿ ಆ.03 ಮತ್ತು ಆ.04ರಂದು ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೇಳಿದೆ. ಇದರಿಂದಾಗಿ ವಾಹನಗಳು ಸಿಗದೇ ಪ್ರಯಾಣಿಕರು ಪರದಾಡುವಂತಾಗಿದೆ.