ಚಿತ್ರದುರ್ಗ : ಕರ್ನಾಟಕದ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಿವಮೂರ್ತಿ ಮುರುಘಾ ಶರಣರು ರಾಹುಲ್ ಗಾಂಧಿಗೆ ಲಿಂಗಧಾರಣೆ ಮಾಡಿ ವಿಭೂತಿ ಹಚ್ಚಿದ್ದಾರೆ.
ʻಹರ್ ಘರ್ ತಿರಂಗʼ: ರಾಹುಲ್ ಗಾಂಧಿ ಟ್ವಿಟ್ಟರ್ ಪ್ರೊಫೈಲ್ ಡಿಪಿ ಚೇಂಜ್: ʻಜವಾಹರಲಾಲ್ ನೆಹರುʼ ಅವರ ಫೋಟೋ ಬಳಕೆ
ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಚಿತ್ರದುರ್ಗಕ್ಕೆ ಅಗಮಿಸಿದ ರಾಹುಲ್ ಗಾಂಧಿ ಮುರುಘಾ ಮಠಕ್ಕೆ ಭೇಟಿ ನೀಡಿ ಡಾ. ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆಯಲಿದ್ದಾರೆ. ಬಳಿಕ ರಾಹುಲ್ ಗಾಂಧಿ ಸ್ವಾಮೀಗಳ ಜೊತೆಗೆ ಸಂವಾದ ನಡೆಸಿದ್ದಾರೆ.
ಈ ವೇಳೆ ಲಿಂಗಪೂಜೆ ಬಗ್ಗೆ ಮಾಹಿತಿ ನೀಡುವಂತೆ ರಾಹುಲ್ ಗಾಂಧಿ ಕೋರಿದರು. ರಾಹುಲ್ಗೆ ಲಿಂಗಧಾರಣೆ ಮಾಡಿ ವಿಭೂತಿ ಹಚ್ಚಿದ ಶ್ರೀಗಳು ತತ್ವದ ಉಪದೇಶ ಮಾಡಿದರು. ಲಿಂಗಪೂಜೆಯ ನಿಯಮಗಳನ್ನು ಪಾಲಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.