ಕಾರವಾರ : ರಾಜ್ಯದಲ್ಲಿ ಮಳೆಯಿಂದಾಗಿ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ತುರ್ತು ಪರಿಹಾರಕ್ಕಾಗಿ 500 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕಾಮನ್ವೆಲ್ತ್ ಗೇಮ್ಸ್ನಲ್ಲಿ ʻಕಂಚಿನ ಪದಕʼ ಗೆದ್ದ ಹೈಜಂಪರ್ ʻತೇಜಸ್ವಿನ್ ಶಂಕರ್ʼನ್ನು ಅಭಿನಂದಿಸಿದ ಪ್ರಧಾನಿ ಮೋದಿ!
ಸಿಎಂ ಬಸವರಾಜ ಬೊಮ್ಮಾಯಿ ಭಟ್ಕಳದ ಮುಟ್ಟಳ್ಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಳಪೀಡಿತ ಪ್ರದೇಶಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು 500 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
, ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ ತೀವ್ರತೆ ಹೆಚ್ಚಿದ್ದು, ಬುಧವಾರದವರೆಗೆ 600 ಮನೆಗಳು ಸಂಪೂರ್ಣ ಕುಸಿದಿದ್ದು, 2,312 ಮನೆಗಳು ಹೆಚ್ಚಿನ ಹಾನಿಯಾಗಿದೆ.ಒಟ್ಟಾರೆ 14,575 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಎಂದು ತಿಳಿಸಿದ್ದಾರೆ.