ಮಡಿಕೇರಿ : ಗ್ರಾಮ ಒನ್ ಯೋಜನೆ ಸಂಬಂಧ ಕೊಡಗು ಜಿಲ್ಲೆಯಲ್ಲಿ ಬಾಕಿ ಇರುವ 16 ಗ್ರಾಮ ಪಂಚಾಯತ್ಗಳಲ್ಲಿ ಗ್ರೇಡ್ 2 ರಡಿ ಸಮಗ್ರ ನಾಗರಿಕ ಸೇವಾ ಕೇಂದ್ರ ‘ಗ್ರಾಮ ಒನ್’ ಆರಂಭಿಸಲು ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆ ದಿಸೆಯಲ್ಲಿ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ, ಕರಿಕೆ, ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ, ಬೆಟ್ಟದಳ್ಳಿ, ಗರ್ವಾಲೆ, ಕುಶಾಲನಗರ ತಾಲ್ಲೂಕಿನ ಕೆದಕಲ್, ತೊರೆನೂರು, ನಾಲ್ಕೂರು ಶಿರಂಗಾಲ, ವಿರಾಜಪೇಟೆಯ ಅಮ್ಮತ್ತಿ, ಪೊನ್ನಂಪೇಟೆಯ ನಿಟ್ಟೂರು, ಬಲ್ಯಮಂಡೂರು, ಕೆ.ಬಾಡಗ, ಪೊನ್ನಪ್ಪಸಂತೆ, ಬಿ.ಶೆಟ್ಟಿಗೇರಿ, ಕಿರುಗೂರು ಹಾಗೂ ನಾಲ್ಕೇರಿ ಈ 16 ಗ್ರಾಮ ಪಂಚಾಯತ್ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ “ಗ್ರಾಮ ಒನ್” ಆರಂಭಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
VIRAL VIDEO: ಟೆರೇಸ್ ನಿಂದ ಬಿದ್ದ ಕೇರಳದ ವ್ಯಕ್ತಿಯನ್ನು ಸಹೋದರ SAVE ಮಾಡಿರುವ ವಿಡಿಯೋ ವೈರಲ್ | watch
ಆಸಕ್ತ ಪ್ರಾಂಚೈಸಿಗಳು https://www.karnatakaone.gov.in/Public/GramOneFranchiseeTerms ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್, ಜಿಲ್ಲಾಧಿಕಾರಿ ಅವರ ಕಚೇರಿ (ದೂ.ಸಂ.08272-223500, 8861672120) ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.