ನವದೆಹಲಿ: ಇಂದು ಬೆಳ್ಳಂಬೆಳಗ್ಗೆಯೇ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ನಿವಾಸದ ಮೇಲೆ ಸಿಬಿಐ ದಾಳಿ ಮಾಡಿದೆ.
ದೆಹಲಿ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಸಿಬಿಐ ಇಂದು ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ 10 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿತು.
ದೆಹಲಿಯ ಶಿಕ್ಷಣ ಮಾದರಿಯನ್ನು ಮೆಚ್ಚಿದ ದಿನ ಮತ್ತು ಮನೀಶ್ ಸಿಸೋಡಿಯಾ ಅವರ ಫೋಟೋ ಅಮೆರಿಕದ ಅತಿದೊಡ್ಡ ಪತ್ರಿಕೆ NYT ಯ ಮೊದಲ ಪುಟದಲ್ಲಿ ಕಾಣಿಸಿಕೊಂಡ ದಿನ ಕೇಂದ್ರವು ಮನೀಶ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಮನೀಶ್ ಸಿಸೋಡಿಯಾ ಅವರನ್ನು ಬೆಂಬಲಿಸಿ ಟ್ವೀಟ್ ಮಾಡಿರುವ ಕೇಜ್ರಿವಾಲ್, ʻಸಿಬಿಐಗೆ ಸ್ವಾಗತ. ನಾವು ಅವರಿಗೆ ಸಂಪೂರ್ಣ ಸಹಕಾರ ನೀಡಲಿದ್ದೇವೆ. ಇಡೀ ಜಗತ್ತು ದೆಹಲಿಯ ಶಿಕ್ಷಣ ಮತ್ತು ಆರೋಗ್ಯ ಮಾದರಿಯ ಬಗ್ಗೆ ಚರ್ಚಿಸುತ್ತಿದೆ. ಅಮೆರಿಕದ ಅತಿದೊಡ್ಡ ಪತ್ರಿಕೆ NYT ಯ ಮುಖಪುಟದಲ್ಲಿ ದೆಹಲಿ ಶಿಕ್ಷಣ ಮಾದರಿಯನ್ನು ಹೊಗಳಿ ಮನೀಶ್ ಸಿಸೋಡಿಯಾ ಚಿತ್ರವನ್ನು ಪ್ರಕಟಿಸಿದ ದಿನವೇ ಮನೀಶ್ ಸಿಸೋಡಿಯಾ ಮನೆ, ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದೆ. ಈ ಹಿಂದೆಯೂ ಹಲವು ಬಾರಿ ತನಿಖೆ ದಾಳಿ ನಡೆಸಲಾಗಿತ್ತು. ಆದ್ರೆ, ಏನೂ ಹೊರಗೆ ಬರಲಿಲ್ಲ. ಈಗಲೂ ಕೂಡ ಏನೂ ಹೊರಬರುವುದಿಲ್ಲ ಎಂದಿದ್ದಾರೆ.
जिस दिन अमेरिका के सबसे बड़े अख़बार NYT के फ़्रंट पेज पर दिल्ली शिक्षा मॉडल की तारीफ़ और मनीष सिसोदिया की तस्वीर छपी, उसी दिन मनीष के घर केंद्र ने CBI भेजी
CBI का स्वागत है। पूरा cooperate करेंगे। पहले भी कई जाँच/रेड हुईं। कुछ नहीं निकला। अब भी कुछ नहीं निकलेगा https://t.co/oQXitimbYZ
— Arvind Kejriwal (@ArvindKejriwal) August 19, 2022
🔹Yesterday: The New York Times praised Delhi’s Education Revolution
🔸Today: PM Modi sends CBI at Delhi’s Education Minister’s doors
Instead of learning from India’s BEST Edu Min. @msisodia, they’re after him.
This is how these parties stopped India’s progress for 75 years. pic.twitter.com/IW0SWfMN3I
— AAP (@AamAadmiParty) August 19, 2022
ಕಳೆದ ತಿಂಗಳು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿನ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ಈ ಸಂಬಂಧ 11 ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದರು. ನೀತಿಯಲ್ಲಿನ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಮನೀಶ್ ಸಿಸೋಡಿಯಾ ಕೂಡ ಒತ್ತಾಯಿಸಿದ್ದರು.