ರಾಜಸ್ಥಾನ : ಗೃಹ ಸಚಿವ ಅಮಿತ್ ಶಾ ಕೂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀ ಶರ್ಟ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, “ರಾಹುಲ್ ಬಾಬಾ ಭಾರತ ಜೋಡೋ ಯಾತ್ರೆಗೆ ಹೊರಟಿದ್ದಾರೆ. ರಾಹುಲ್ ಬಾಬಾ ವಿದೇಶಿ ಟೀ ಶರ್ಟ್ ಧರಿಸಿ ಭಾರತವನ್ನ ಸಂಪರ್ಕಿಸಲು ಹೊರಟಿದ್ದಾರೆ” ಎಂದು ಜರಿದಿದ್ದಾರೆ.
ರಾಜಸ್ಥಾನದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗೃಹ ಸಚಿವರು, “ನಾನು ರಾಹುಲ್ ಬಾಬಾ ಮತ್ತು ಕಾಂಗ್ರೆಸ್ಸಿಗರಿಗೆ ಅವರ ಸಂಸತ್ತಿನಲ್ಲಿ ಮಾಡಿದ ಭಾಷಣವನ್ನ ನೆನಪಿಸುತ್ತೇನೆ. ಭಾರತ ಒಂದು ರಾಷ್ಟ್ರವಲ್ಲ ಎಂದು ರಾಹುಲ್ ಬಾಬಾ ಹೇಳಿದ್ದರು. ಹೇ ರಾಹುಲ್ ಬಾಬಾ, ನೀವು ಯಾವ ಪುಸ್ತಕದಲ್ಲಿ ಓದಿದ್ದೀರಿ? ಲಕ್ಷ ಲಕ್ಷ ಜನ ಪ್ರಾಣ ತ್ಯಾಗ ಮಾಡಿದ ರಾಷ್ಟ್ರವಿದು” ಎಂದರು.
ಇನ್ನು ಇದೇ ವೇಳೆ ರಾಜಸ್ಥಾನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, “10 ದಿನಗಳಲ್ಲಿ ರೈತರ ಸಾಲ ಮನ್ನಾ ಏನಾಯಿತು? ಯುವಕರಿಗೆ 3,500 ರೂಪಾಯಿ ನಿರುದ್ಯೋಗ ಭತ್ಯೆ ಏನಾಯಿತು? 20 ಲಕ್ಷ ಯುವಕರಿಗೆ ಉದ್ಯೋಗ ನೀಡುವುದು ಏನಾಯಿತು? ಕಾಂಗ್ರೆಸ್ ಪೊಳ್ಳು ಭರವಸೆಗಳನ್ನು ನೀಡಬಲ್ಲದು, ಭರವಸೆಗಳನ್ನ ಈಡೇರಿಸಲು ಸಾಧ್ಯವಿಲ್ಲ” ಎಂದು ಕಿಡಿಕಾರಿದರು.