ನವದೆಹಲಿ: ಸೆಪ್ಟೆಂಬರ್ 8 ರಂದು ನಿಧನರಾದ ರಾಣಿ ಎರಡನೇ ಎಲಿಜಬೆತ್ ಅವರಿಗೆ ಗೌರವ ಸೂಚಕವಾಗಿ ಭಾರತವು ಭಾನುವಾರ ಒಂದು ದಿನದ ಶೋಕಾಚರಣೆಯನ್ನು ಆಚರಿಸಿದೆ. ಬ್ರಿಟನ್ ನ ಅತಿ ಹೆಚ್ಚು ಕಾಲ ಆಳಿದ ರಾಣಿ ಎರಡನೇ ಎಲಿಜಬೆತ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಕೆಂಪು ಕೋಟೆ ಮತ್ತು ರಾಷ್ಟ್ರಪತಿ ಭವನದ ರಾಷ್ಟ್ರಧ್ವಜಗಳನ್ನು ಅರ್ಧಕ್ಕೆ ಇಳಿಸಲಾಯಿತು.
ಇದಲ್ಲದೆ, ರಾಣಿ ಎರಡನೇ ಎಲಿಜಬೆತ್ ನಿಧನಕ್ಕೆ ಗೌರವ ಸಲ್ಲಿಸಲು ದೇಶದ ಎಲ್ಲಾ ರಾಷ್ಟ್ರಧ್ವಜಗಳನ್ನು ಅರ್ಧಮಟ್ಟದಲ್ಲಿ ಹಾರಿಸಲಾಯಿತು. “ಹರ್ ಮೆಜೆಸ್ಟಿ ಕ್ವೀನ್ ಎಲಿಜಬೆತ್ II, ಯುನೈಟೆಡ್ ಕಿಂಗ್ಡಮ್ ಆಫ್ ಗ್ರೇಟ್ ಬ್ರಿಟನ್ ಮತ್ತು ಉತ್ತರ ಐರ್ಲೆಂಡ್ 2022 ರ ಸೆಪ್ಟೆಂಬರ್ 8 ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನ ರಾಜ್ಯ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ” ಎಂದು ಗೃಹ ಸಚಿವಾಲಯ ಈ ಹಿಂದೆ ಹೇಳಿಕೆಯಲ್ಲಿ ತಿಳಿಸಿತ್ತು. “ಈ ದಿನದಂದು ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ” ಎಂದು ಸಚಿವಾಲಯ ತಿಳಿಸಿದೆ.
Delhi | National flags at Red Fort and Rashtrapati Bhavan fly at half-mast as one-day state mourning is being observed in the country following the demise of Queen Elizabeth II. pic.twitter.com/dPc7IvHrlh
— ANI (@ANI) September 11, 2022