ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ, ಪರಮೇಶ್ವರ್ ಅವರು ಸಿದ್ದರಾಮ್ಯರನ್ನು ಖೆಡ್ಡಾಕ್ಕೆ ಬೀಳಿಸಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಅವರೇ ಮೊದಲು ಕಾಂಗ್ರೆಸ್ ಪಕ್ಷದೊಳಗಿರುವ ಭೀತಿಯನ್ನು ನಿವಾರಿಸಿಕೊಳ್ಳಿ. ಡಿಕೆಶಿ, ಖರ್ಗೆ, ಪರಮೇಶ್ವರ್ ನಿಮ್ಮನ್ನು ಖೆಡ್ಡಾಕ್ಕೆ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ. 2013 ರಲ್ಲಿ ನೀವು ಮಾಡಿದ ಪಾಪಕ್ಕೆ 2023 ರಲ್ಲಿ ನಿಮ್ಮದೇ ಪಕ್ಷದ ನಾಯಕರು ಪ್ರಾಯಶ್ಚಿತ್ತದ ಭಾಗ್ಯ ಕಲ್ಪಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗೆ ಸಲ್ಲಿಸುವ ಅರ್ಜಿ ಅವಧಿ ವಿಸ್ತರಣೆ
ಜನ ಸ್ಪಂದನ ಕಾರ್ಯಕ್ರಮದ ಯಶಸ್ಸಿಗೆ ಕಾಂಗ್ರೆಸ್ ದಿಕ್ಕೆಟ್ಟಿದೆ. ಬಿಜೆಪಿಯ ಜನಸ್ಪಂದನ ಕಾರ್ಯಕ್ರಮ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿದ್ದ ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ. ಜನರು ಬಿಜೆಪಿ ಪಕ್ಷದ ಜೊತೆಗೆ ಇದ್ದಾರೆ ಎನ್ನುವುದು ರಾಜ್ಯದಲ್ಲಿ ನಡೆದ ಮೋದಿ ಕಾರ್ಯಕ್ರಮ ಮತ್ತು ಜನಸ್ಪಂದನ ಸಮಾವೇಶವೇ ಸಾಕ್ಷಿಯಾಗಿದೆ ಎಂದು ಹೇಳಿದೆ.
BREAKING NEWS : ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ