ವಿಜಯನಗರ : ಕೆರೆಯಲ್ಲಿ ಈಜಾಡಲು ಹೋಗಿದ್ದ ವೇಳೆ ಭೀಕರ ದುರಂತ ಸಂಭವಿಸಿದ್ದು, ಕೆರೆಯ ಕೆಸರಿನಲ್ಲಿ ಸಿಲುಕಿಕೊಂಡು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮದಲ್ಲಿ ನಡೆದಿದೆ.
ತೆಲಗಿ ಗ್ರಾಮದಲ್ಲಿರುವ ಕೆರೆಗೆ ಈಜಲು ಹೋಗಿದ್ದ ವೇಳೆ ಕೆರೆಯ ಕೆಸರಿನಲ್ಲಿ ಸಿಲುಕಿಕೊಂಡು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ತೆಲಗಿ ಗ್ರಾಮದ ಅಮರ್ (19), ಚಂದ್ರು (20) ಮೃತ ಯುವಕರು. ಹರಪನಹಳ್ಳಿಯ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಅಮರ್ ಪ್ರಥಮ ಪಿಯುಸಿ ಮತ್ತು ಚಂದ್ರು ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಮುಳುಗು ತಜ್ಞರು ಕೆರೆಯಲ್ಲಿ ಶೋಧ ಕಾರ್ಯ ನಡೆ ಇಬ್ಬರ ಮೃತದೇಹ ಹೊರ ತೆಗೆದಿದ್ದಾರೆ. ಹಲುವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SHOCKING NEWS: ಪೋಷಕರೇ ಎಚ್ಚರ….! ಮಕ್ಕಳಲ್ಲಿ ಕಾಣಿಸಿಕೊಳ್ಳಲಿದೆ ಉಣ್ಣೆ ಜ್ವರ ; ಇದರ ಲಕ್ಷಣಗಳೇನು? ಇಲ್ಲಿದೆ ಮಾಹಿತಿ