ಮೈಸೂರು:ವಿಶ್ವವಿಖ್ಯಾತ ದಸರಾ ನಾಳೆ ವಿಜಯದಶಮಿಯದಿನದಂದು ಜಂಬೂಸವಾರಿ ನಡೆಯಲಿದೆ. ಮೆರವಣಿಗೆ ಸಾಗುವ ರಸ್ತೆ, ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು.
BIG NEWS: ಬೆಂಗಳೂರಿನಲ್ಲಿ ಜಾಲಿ ರೈಡ್ ಹೋಗಿ ಲ್ಯಾಂಬೋರ್ಗಿನಿ ಕಾರು ಕಂಬಕ್ಕೆ ಗುದ್ದಿದ ಉದ್ಯಮಿ
ಲಕ್ಷಾಂತರ ಜನರು ಸೇರಬಹುದೆಂಬ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅರಮನೆಯಿಂದ ಜಂಬೂ ಸವಾರಿ ಹೊರಬರುವ ಬಲರಾಮ ಗೇಟ್ ಬಳಿ ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ತಪಾಸಣೆ ನಡೆಸಲಾಗಿದೆ. ಕಸದ ಡಸ್ಟ್ಬಿನ್ ಸೇರಿದಂತೆ ಪ್ರತಿಯೊಂದು ವಸ್ತುವನ್ನೂ ಅರಮನೆ ಮೈದಾನದಿಂದ ಬನ್ನಿಮಂಟಪವರೆಗೂ ತಪಾಸಣೆ ನಡೆಸಲಾಯಿತು.
BIG NEWS: ಬೆಂಗಳೂರಿನಲ್ಲಿ ಜಾಲಿ ರೈಡ್ ಹೋಗಿ ಲ್ಯಾಂಬೋರ್ಗಿನಿ ಕಾರು ಕಂಬಕ್ಕೆ ಗುದ್ದಿದ ಉದ್ಯಮಿ
ಆಯುಧಪೂಜೆಗಾಗಿ ರಾಜಪರಿವಾರಕ್ಕೆ ಸೇರಿದವರು ಕೋಡಿ ಸೋಮೆಶ್ವರ ದೇಗುಲಕ್ಕೆ ಬಂದಿದ್ದು, ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಮುತೈದೆಯರ ಜೊತೆ ದೇವರನ್ನು ತರಲಾಗುತ್ತಿದೆ. ಪಲ್ಲಕ್ಕಿಯಲ್ಲಿ ಪಟ್ಟದ ಕತ್ತಿಯಿಟ್ಟು ಜಯಮಾರ್ತಾಂಡ ದ್ವಾರದ ಮೂಲಕ ಕೋಡಿ ಸೋಮೇಶ್ವರ ದೇಗುಲಕ್ಕೆ ಕಳಿಸಲಾಯಿತು.