ಬೆಂಗಳೂರು: ಬೆಂಗಳೂರಿನಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರ ತುಷಾರ್ ಗಿರಿನಾಥ್ ಫೋಟೋ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ವೇಳೆ ಕಿಡಿಗೇಡಿಗಳು ಸಂದೇಶ ರವಾನಿಸುತ್ತಿದ್ದು, ಬಗ್ಗೆ ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BIGG NEWS: ಅರಮನೆಯಲ್ಲಿ ಇಂದು ಆಯುಧಪೂಜೆ; ನಾಳೆ ಜಂಬೂ ಸವಾರಿಗೆ ಭರದ ಸಿದ್ಧತೆ,ಬಿಗಿ ಭದ್ರತೆ | Mysore Dasara
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಫೋಟೋ ದುರ್ಬಳಕೆ ಮಾಡಲಾಗಿದೆ. ಅವರ ಅನುಮತಿಯಿಲ್ಲದೇ ಫೋಟೋವನ್ನ ವಾಟ್ಸ್ಆ್ಯಪ್ ಡಿಪಿಯಾಗಿ ಅಳವಡಿಸಿಕೊಂಡು, ಸಹೋದ್ಯೋಗಿಗಳಿಗೆ ತಪ್ಪಾದ ಸಂದೇಶ ಕಳುಹಿಸಲಾಗುತ್ತಿದೆ ಎಂದು ಖುದ್ದು ತುಷಾರ್ ಗಿರಿನಾಥ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.