ಮೈಸೂರು : ರಾಜ್ಯದಲ್ಲಿ ನಾಡಹಬ್ಬ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ‘ರಾಜ್ಯದ ಜನತೆಗೆ ನಾಡಹಬ್ಬ ದಸರಾ ಹಬ್ಬದ ಶುಭಾಶಯಗಳು, ರಾಜ್ಯದಲ್ಲಿ ಶಾಂತಿ, ಸುಭಿಕ್ಷೆ ನೆಲೆಸಲಿ, ದಸರಾ ಹಬ್ಬದ ಹಿನ್ನೆಲೆ ಇವತ್ತು ನಾಳೆ ಏನೂ ಮಾತನಾಡಲ್ಲಅ. 6 ರಂದು ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುವೆ’ ಎಂದು ಹೇಳಿದ್ದಾರೆ.
ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ಮಹಾನವಮಿಯ ಹಾರ್ದಿಕ ಶುಭಾಶಯಗಳು.ಈ ಹಬ್ಬವೂ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ ತರಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ಮಹಾನವಮಿಯ ಹಾರ್ದಿಕ ಶುಭಾಶಯಗಳು.ಈ ಹಬ್ಬವೂ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ ತರಲೆಂದು ಪ್ರಾರ್ಥಿಸುತ್ತೇನೆ. pic.twitter.com/VT5razoACf
— Basavaraj S Bommai (@BSBommai) October 4, 2022
ಮೈಸೂರು ವಿಶ್ವವಿಖ್ಯಾತ ದಸರಾ ಹಿನ್ನೆಲೆ ನಾಳೆ ವಿಜಯದಶಮಿಯದಿನದಂದು ಜಂಬೂಸವಾರಿ ನಡೆಯಲಿದೆ. ಮೆರವಣಿಗೆ ಸಾಗುವ ರಸ್ತೆ, ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು. ಲಕ್ಷಾಂತರ ಜನರು ಸೇರಬಹುದೆಂಬ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅರಮನೆಯಿಂದ ಜಂಬೂ ಸವಾರಿ ಹೊರಬರುವ ಬಲರಾಮ ಗೇಟ್ ಬಳಿ ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ತಪಾಸಣೆ ನಡೆಸಲಾಗಿದೆ. ಕಸದ ಡಸ್ಟ್ಬಿನ್ ಸೇರಿದಂತೆ ಪ್ರತಿಯೊಂದು ವಸ್ತುವನ್ನೂ ಅರಮನೆ ಮೈದಾನದಿಂದ ಬನ್ನಿಮಂಟಪವರೆಗೂ ತಪಾಸಣೆ ನಡೆಸಲಾಯಿತು.
ಆಯುಧಪೂಜೆಗಾಗಿ ರಾಜಪರಿವಾರಕ್ಕೆ ಸೇರಿದವರು ಕೋಡಿ ಸೋಮೆಶ್ವರ ದೇಗುಲಕ್ಕೆ ಬಂದಿದ್ದು, ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಮುತೈದೆಯರ ಜೊತೆ ದೇವರನ್ನು ತರಲಾಗುತ್ತಿದೆ. ಪಲ್ಲಕ್ಕಿಯಲ್ಲಿ ಪಟ್ಟದ ಕತ್ತಿಯಿಟ್ಟು ಜಯಮಾರ್ತಾಂಡ ದ್ವಾರದ ಮೂಲಕ ಕೋಡಿ ಸೋಮೇಶ್ವರ ದೇಗುಲಕ್ಕೆ ಕಳಿಸಲಾಯಿತು.
BIGG NEWS: ಅರಮನೆಯಲ್ಲಿ ಇಂದು ಆಯುಧಪೂಜೆ; ನಾಳೆ ಜಂಬೂ ಸವಾರಿಗೆ ಭರದ ಸಿದ್ಧತೆ,ಬಿಗಿ ಭದ್ರತೆ | Mysore Dasara