ಮೈಸೂರು : ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಜಂಬೂ ಸವಾರಿಯ ಪ್ರಮುಖ ಆಕರ್ಷಣೆ ಗಜ ಪಡೆಯ ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲು ಸಿದ್ಧನಾಗಿದ್ದಾನೆ.
ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊತ್ತು ರಾಜಮಾರ್ಗದಲ್ಲಿ ಸಾಗಲು ಸಿದ್ಧವಾಗಿದೆ. ಅರಮನೆಗೆ ಆಗಮಿಸಿದ್ದ ಗಜ ತಂಡದಲ್ಲಿ ಜಂಬೂ ಸವಾರಿಯಲ್ಲಿ ಭಾಗಿಯಾಗುತ್ತಿರೋದು 9 ಆನೆಗಳು ಮಾತ್ರ. ಕ್ಯಾಪ್ಟನ್ – ಅಭಿಮನ್ಯು, ನಿಶಾನೆ ಆನೆ – ಅರ್ಜುನ, ನೌಫತ್ ಆನೆ- ಗೋಪಿ, ಕುಮ್ಕಿ ಆನೆಗಳು – ಕಾವೇರಿ ಮತ್ತು ಚೈತ್ರ, ಧನಂಜಯ, ಮಹೇಂದ್ರ, ಭೀಮ, ಗೋಪಾಲಸ್ವಾಮಿ ಆನೆಗಳು ಜಂಬೂಸವಾರಿಯಲ್ಲಿ ಭಾಗಿ ಆಗಲಿವೆ.
ಜಂಬೂ ಸವಾರಿ ಪ್ರಮುಖ ಆಕರ್ಷಣೆ ಕ್ಯಾಪ್ಟನ್ ಕೂಲ್ ಅಭಿಮನ್ಯು ಮೂರನೇ ಬಾರಿಗೆ ಅಂಬಾರಿ ಹೊರಲಿದ್ದಾನೆ. ಜಂಬೂ ಸವಾರಿ ವೇಳೆ ಆನೆಗಳ ಆರೋಗ್ಯ ಸುರಕ್ಷತೆ ದೃಷ್ಠಿಯಿಂದ ನಾಲ್ಕು ವೈದ್ಯರ ತಂಡಗಳ ನಿಯೋಜಿಸಲಾಗಿದೆ.
ಈ ಬಾರಿ 2 ಗಂಟೆ ತಡವಾಗಿ ಆರಂಭವಾಗಲಿದೆ `ಜಂಬೂ ಸವಾರಿ’ ಮೆರವಣಿಗೆ
ವಿಶ್ವವಿಖ್ಯಾತ ಮೈಸೂರು ದಸರಾ 2022ರ ( Mysore Dasara 2022 ) ಐತಿಹಾಸಿಕ ಜಂಬೂಸವಾರಿಗೆ ( dasara jamboo savari 2022 ) ಕ್ಷಣಗಣನೆ ಆರಂಭಗೊಂಡಿದೆ.ಆದರೆ ಪ್ರತಿಬಾರಿಗಿಂತ ಈ ಬಾರಿ ಸುಮಾರು 2 ಗಂಟೆ ವಿಳಂಬವಾಗಿ ಜಂಬೂ ಸವಾರಿ ಮೆರವಣಿಗೆ ಆರಂಭವಾಗಲಿದೆ.
ಈ ಬಾರಿ ಚಾಮುಂಡಿ ದೇವಿಗೆ ಮಾಡುವ ಪುಷ್ಪಾರ್ಚನೆ ಸಂಎಜ 5.07 ರಿಂದ 5.18 ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅಂಬಾರಿಗೆ ಪೂಜೆ ಸಲ್ಲಿಯಾಗುವುದರಿಂದ ಮೆರವಣಿಗೆ ತಡವಾಗಿ ಆರಂಭವಾಗಲಿದೆ. ಸಂಜೆ 5.07 ರಿಂದ 5.18 ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ಶ್ರೀ ಚಾಮುಂಡೇಶ್ವರಿ ಮೂರ್ತಿಗೆ ಸಿಎಂ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಪುಷ್ಪಾರ್ಚನೆ ಮಾಡಲಿದ್ದಾರೆ.