ಮಂಡ್ಯ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಂಡ್ಯದಲ್ಲಿ ನಡೆಯುತ್ತಿರುವ ʼಭಾರತ್ ಜೋಡೋ ಪಾದಯಾತ್ರೆʼ ವರದಿ ಮಾಡುತ್ತಿದ್ದ ಪತ್ರಕರ್ತರ ಮೇಲೆ ಪೊಲೀಸರು ಹಲ್ಲೆ ಮಾಡಿರುವ ಘಟನೆ ನಡೆದಿದೆ.
BIG NEWS: ಚಿತ್ರದುರ್ಗದಲ್ಲಿ ಶಿವಮೂರ್ತಿ ಶರಣರ ಅನುಪಸ್ಥಿತಿಯಲ್ಲಿ ಮುರುಘಾ ಮಠದ ಶೂನ್ಯ ಪೀಠಾರೋಹಣ
ಭಾರತ್ ಜೋಡೋ ಯಾತ್ರೆಗೆ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳು ಸುದ್ದಿ ವರದಿ ಮಾಡುತ್ತಿದ್ದಾಗ ಪೊಲೀಸರು ಹಲ್ಲೆ ಮಾಡಿದ್ದಾರೆ. ವರದಿಗಾರರು, ಕ್ಯಾಮೆರಾಮ್ಯಾನ್ ಮೇಲೆ ಮಂಡ್ಯ ಜಿಲ್ಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ.
ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ. ಪೊಲೀಸರ ಗೂಂಡಾವರ್ತನೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಖಂಡನೆ ವ್ಯಕ್ತಪಡಿಸಿದ್ದಾರೆ.
BIG NEWS: ಚಿತ್ರದುರ್ಗದಲ್ಲಿ ಶಿವಮೂರ್ತಿ ಶರಣರ ಅನುಪಸ್ಥಿತಿಯಲ್ಲಿ ಮುರುಘಾ ಮಠದ ಶೂನ್ಯ ಪೀಠಾರೋಹಣ
ಹಲ್ಲೆ ಬಗ್ಗೆ ಮಂಡ್ಯ ಎಸ್ಪಿ ಮಾತನಾಡಿ, ನೂಕಾಟದ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ನಮ್ಮ ಪೊಲೀಸರು ಬಿದ್ದಿದ್ದಾರೆ. ಈ ವೇಳೆ ನಾನು ಕೂಡ ಕೆಳಗೆ ಬಿದ್ದು, ಯೂನಿಫಾರ್ಮ್ನಲ್ಲಿದ್ದ ಹೆಸರಿನ ಪ್ಲೇಟ್ ಕೂಡ ಹರಿದಿದೆ. ನಮ್ಮ ಪೊಲೀಸರು ಹಲ್ಲೆ ನಡೆಸಿಲ್ಲ. ಸಾರ್ವಜನಿಕ ಸೇವೆ ಮಾಡುತ್ತಿರುವ ಪೊಲೀಸರು, ಪತ್ರಕರ್ತರು ಪರಸ್ಪರ ಸಹಕಾರದಿಂದಲೇ ಪಾದಯಾತ್ರೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದೇವೆ.